ETV Bharat / state

ಆನ್​​​​​ಲೈನ್​ ಕ್ಲಾಸ್​ಗಾಗಿ 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿದ ಶಿಕ್ಷಕ

ನೆಟ್‍ವರ್ಕ್ ಸಮಸ್ಯೆ ಇರುವುದರಿಂದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಎಸ್.ಸತೀಶ್, 20 ಅಡಿ ಎತ್ತರದಲ್ಲಿ ಮರದ ಅಟ್ಟಣಿಗೆ ನಿರ್ಮಿಸಿ ಆನ್‍ಲೈನ್ ಕ್ಲಾಸ್ ಮಾಡಲು ಉಪಾಯ ಕಂಡು ಕೊಂಡಿದ್ದಾರೆ.

author img

By

Published : Jul 1, 2021, 6:51 AM IST

Updated : Jul 1, 2021, 4:58 PM IST

Kodagu
ಆನ್​​​​​ಲೈನ್​ ಕ್ಲಾಸ್​ಗಾಗಿ 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿದ ಶಿಕ್ಷಕ

ಕೊಡಗು: ಗ್ರಾಮೀಣ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ಎಂಬುದು ಇದೀಗ ನರಕ ದರ್ಶನ ಮಾಡಿಸುತ್ತಿದೆ. ನೆಟ್​​​ವರ್ಕ್ ಸಮಸ್ಯೆಯಿಂದ ಅದೆಷ್ಟೋ ಮಕ್ಕಳು ಆನ್​ಲೈನ್​ ಪಾಠ ಕೇಳಲಾಗದೇ ಪರದಾಡುತ್ತಿದ್ದಾರೆ. ಮಕ್ಕಳ ಕಷ್ಟ ನೋಡಿದ ಶಿಕ್ಷಕರೊಬ್ಬರು ಮೊಬೈಲ್ ನೆಟ್​​​​ವರ್ಕ್​ಗೆ ಎತ್ತರದ ಅಟ್ಟಣಿಗೆ ನಿರ್ಮಾಣ ಮಾಡಿ ಮಕ್ಕಳ ಆನ್​ಲೈನ್​ ಕ್ಲಾಸ್​ಗೆ ನೆರವಾಗಿದ್ದಾರೆ.

ನೆಟ್‍ವರ್ಕ್ ಸಮಸ್ಯೆ ಇರುವುದರಿಂದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಎಸ್.ಸತೀಶ್, 20 ಅಡಿ ಎತ್ತರದಲ್ಲಿ ಮರದ ಅಟ್ಟಣಿಗೆ ನಿರ್ಮಿಸಿ ಆನ್‍ಲೈನ್ ಕ್ಲಾಸ್ ಮಾಡಲು ಉಪಾಯ ಕಂಡುಕೊಂಡಿದ್ದಾರೆ.

ಆನ್​​​​​ಲೈನ್​ ಕ್ಲಾಸ್​ಗಾಗಿ 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿದ ಶಿಕ್ಷಕ

ಚಿಕ್ಕಕೊಳತ್ತೂರು ಗ್ರಾಮದ ಮನೆಯ ಆವರಣದಲ್ಲಿ ಬೊಂಬು, ಬೈನೆ ಮರದ ತಡಿಕೆಗಳು, ತಂತಿ, ಬಲೆ ಹಾಗೂ ಹುಲ್ಲು ಬಳಸಿ ‘ಟ್ರೀ ಹೌಸ್’ ಮಾದರಿಯಲ್ಲಿ ತರಗತಿ ಕೋಣೆ ನಿರ್ಮಿಸಿದ್ದಾರೆ. ಮೊಬೈಲ್ ಫೋನ್ ಬಳಸಿ ಅವರು ತರಗತಿ ನಡೆಸುತ್ತಾರೆ. 500 ರೂ. ವೆಚ್ಚದ ಮೊಬೈಲ್ ಸ್ಟ್ಯಾಂಡ್ ಮತ್ತು ರೆಕಾರ್ಡರ್ ಖರೀದಿಸಿ ಬೋಧನೆಗೆ ಬಳಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಆಕರ್ಷಿಸುವಂಥ ಚಟುವಟಿಕೆಗಳನ್ನು ಮಾಡಿಸುತ್ತಾರೆ.

ಪಾಠ ಮಾಡಲು 3 ಬಗೆಯ ಕಪ್ಪು ಹಲಗೆಗಳು ಹಾಗೂ ಮನೆಯಲ್ಲಿ ಸಿಗುವ ವಸ್ತುಗಳನ್ನು ಬಳಸುತ್ತಾರೆ. ಪಠ್ಯದ ಜೊತೆಗೆ ಯೋಗಾಸನ, ಒಳಾಂಗಣ ಆಟಗಳು, ಕಥೆ, ಇಂಗ್ಲಿಷ್, ಸಾಕು ಪ್ರಾಣಿಗಳ ಮಾಹಿತಿ ನೀಡುತ್ತಾರೆ. ಕೋವಿಡ್ ಲಾಕ್‍ಡೌನ್ ಸಮಯದಲ್ಲಿ ಮಕ್ಕಳ ಕಲಿಕೆಗೆ ನೆರವಾಗುತ್ತಿದ್ದಾರೆ.

ಲಾಕ್‍ಡೌನ್ ಸಮಯದಲ್ಲಿ ವಿದ್ಯಾರ್ಥಿಗಳೊಂದಿಗೆ ಕಲಿಕಾ ಸಂಪರ್ಕ ಸಾಧಿಸುವ ಕಾರ್ಯಕ್ರಮ ನಡೆಯುತ್ತಿದೆ. ಸ್ಮಾರ್ಟ್ ಫೋನ್ ಇರುವ ಮಕ್ಕಳಿಗೆ ಆನ್‍ಲೈನ್ ಮೂಲಕ ಬೋಧನೆ, ವಾಟ್ಸ್​​​​ಆ್ಯಪ್​ ಮೂಲಕ ಹೋಮ್‍ವರ್ಕ್ ಮಾಡಿಸುತ್ತಾರೆ. ನೆಟ್‍ವರ್ಕ್ ಸಮಸ್ಯೆ ಇದ್ದರೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಸತೀಶ್ ಅವರು ನೆಟ್‍ವರ್ಕ್ ಸಮಸ್ಯೆಗೆ ಪರಿಹಾರ ಕಂಡು ಕೊಂಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಉರುಳಾದ ಜೋಕಾಲಿ : ಇಬ್ಬರು ಮಕ್ಕಳ‌ ದಾರುಣ ಅಂತ್ಯ

ಕೊಡಗು: ಗ್ರಾಮೀಣ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ಎಂಬುದು ಇದೀಗ ನರಕ ದರ್ಶನ ಮಾಡಿಸುತ್ತಿದೆ. ನೆಟ್​​​ವರ್ಕ್ ಸಮಸ್ಯೆಯಿಂದ ಅದೆಷ್ಟೋ ಮಕ್ಕಳು ಆನ್​ಲೈನ್​ ಪಾಠ ಕೇಳಲಾಗದೇ ಪರದಾಡುತ್ತಿದ್ದಾರೆ. ಮಕ್ಕಳ ಕಷ್ಟ ನೋಡಿದ ಶಿಕ್ಷಕರೊಬ್ಬರು ಮೊಬೈಲ್ ನೆಟ್​​​​ವರ್ಕ್​ಗೆ ಎತ್ತರದ ಅಟ್ಟಣಿಗೆ ನಿರ್ಮಾಣ ಮಾಡಿ ಮಕ್ಕಳ ಆನ್​ಲೈನ್​ ಕ್ಲಾಸ್​ಗೆ ನೆರವಾಗಿದ್ದಾರೆ.

ನೆಟ್‍ವರ್ಕ್ ಸಮಸ್ಯೆ ಇರುವುದರಿಂದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಎಸ್.ಸತೀಶ್, 20 ಅಡಿ ಎತ್ತರದಲ್ಲಿ ಮರದ ಅಟ್ಟಣಿಗೆ ನಿರ್ಮಿಸಿ ಆನ್‍ಲೈನ್ ಕ್ಲಾಸ್ ಮಾಡಲು ಉಪಾಯ ಕಂಡುಕೊಂಡಿದ್ದಾರೆ.

ಆನ್​​​​​ಲೈನ್​ ಕ್ಲಾಸ್​ಗಾಗಿ 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿದ ಶಿಕ್ಷಕ

ಚಿಕ್ಕಕೊಳತ್ತೂರು ಗ್ರಾಮದ ಮನೆಯ ಆವರಣದಲ್ಲಿ ಬೊಂಬು, ಬೈನೆ ಮರದ ತಡಿಕೆಗಳು, ತಂತಿ, ಬಲೆ ಹಾಗೂ ಹುಲ್ಲು ಬಳಸಿ ‘ಟ್ರೀ ಹೌಸ್’ ಮಾದರಿಯಲ್ಲಿ ತರಗತಿ ಕೋಣೆ ನಿರ್ಮಿಸಿದ್ದಾರೆ. ಮೊಬೈಲ್ ಫೋನ್ ಬಳಸಿ ಅವರು ತರಗತಿ ನಡೆಸುತ್ತಾರೆ. 500 ರೂ. ವೆಚ್ಚದ ಮೊಬೈಲ್ ಸ್ಟ್ಯಾಂಡ್ ಮತ್ತು ರೆಕಾರ್ಡರ್ ಖರೀದಿಸಿ ಬೋಧನೆಗೆ ಬಳಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಆಕರ್ಷಿಸುವಂಥ ಚಟುವಟಿಕೆಗಳನ್ನು ಮಾಡಿಸುತ್ತಾರೆ.

ಪಾಠ ಮಾಡಲು 3 ಬಗೆಯ ಕಪ್ಪು ಹಲಗೆಗಳು ಹಾಗೂ ಮನೆಯಲ್ಲಿ ಸಿಗುವ ವಸ್ತುಗಳನ್ನು ಬಳಸುತ್ತಾರೆ. ಪಠ್ಯದ ಜೊತೆಗೆ ಯೋಗಾಸನ, ಒಳಾಂಗಣ ಆಟಗಳು, ಕಥೆ, ಇಂಗ್ಲಿಷ್, ಸಾಕು ಪ್ರಾಣಿಗಳ ಮಾಹಿತಿ ನೀಡುತ್ತಾರೆ. ಕೋವಿಡ್ ಲಾಕ್‍ಡೌನ್ ಸಮಯದಲ್ಲಿ ಮಕ್ಕಳ ಕಲಿಕೆಗೆ ನೆರವಾಗುತ್ತಿದ್ದಾರೆ.

ಲಾಕ್‍ಡೌನ್ ಸಮಯದಲ್ಲಿ ವಿದ್ಯಾರ್ಥಿಗಳೊಂದಿಗೆ ಕಲಿಕಾ ಸಂಪರ್ಕ ಸಾಧಿಸುವ ಕಾರ್ಯಕ್ರಮ ನಡೆಯುತ್ತಿದೆ. ಸ್ಮಾರ್ಟ್ ಫೋನ್ ಇರುವ ಮಕ್ಕಳಿಗೆ ಆನ್‍ಲೈನ್ ಮೂಲಕ ಬೋಧನೆ, ವಾಟ್ಸ್​​​​ಆ್ಯಪ್​ ಮೂಲಕ ಹೋಮ್‍ವರ್ಕ್ ಮಾಡಿಸುತ್ತಾರೆ. ನೆಟ್‍ವರ್ಕ್ ಸಮಸ್ಯೆ ಇದ್ದರೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಸತೀಶ್ ಅವರು ನೆಟ್‍ವರ್ಕ್ ಸಮಸ್ಯೆಗೆ ಪರಿಹಾರ ಕಂಡು ಕೊಂಡಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಉರುಳಾದ ಜೋಕಾಲಿ : ಇಬ್ಬರು ಮಕ್ಕಳ‌ ದಾರುಣ ಅಂತ್ಯ

Last Updated : Jul 1, 2021, 4:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.