ETV Bharat / state

ಲಾಕ್​​ಡೌನ್ ಉಲ್ಲಂಘಿಸಿದರೆ ಶಿಸ್ತು ಕ್ರಮ: ಕೊಡಗು ಎಸ್​ಪಿ ಎಚ್ಚರಿಕೆ

ಯಾವುದೇ ಜಾತ್ರೆ, ಸಾಮೂಹಿಕ ಹಬ್ಬ ಆಚರಿಸದಂತೆ ಸೂಚನೆ ನೀಡಲಾಗಿದೆ. ಎಲ್ಲ ಧಾರ್ಮಿಕ ಕಾರ್ಯಕ್ರಮ ನಿಷೇಧಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

author img

By

Published : Mar 23, 2020, 9:34 PM IST

Action if the lock down is violated
ಪೊಲೀಸ್​ ವರಿಷ್ಠಾಧಿಕಾರಿ ಡಾ.ಸುಮನಾ ಡಿ.ಪನ್ನೇಕರ್

ಕೊಡಗು: ಕೊರೊನಾ ವೈರಸ್​ ತಡೆಗೆ ರಾಜ್ಯ ಸರ್ಕಾರ ಆದೇಶಿಸಿರುವ ಲಾಕ್​​​ಡೌನ್ ಅನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್​ ವರಿಷ್ಠಾಧಿಕಾರಿ ಡಾ.ಸುಮನಾ ಡಿ.ಪನ್ನೇಕರ್ ಎಚ್ವರಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ 13 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್​ ಪೋಸ್ಟ್ ಮೂಲಕ ಎಲ್ಲ ವಾಹನ ಸಂಚಾರ ಬಂದ್ ಮಾಡಿದ್ದೇವೆ.‌ ನಾಳೆಗೆ ವಾಹನ ಸಂಚಾರ ನಿಯಂತ್ರಣಕ್ಕೆ ಬರಲಿದೆ ಎಂದರು.

ಪೊಲೀಸ್​ ವರಿಷ್ಠಾಧಿಕಾರಿ ಡಾ.ಸುಮನಾ ಡಿ.ಪನ್ನೇಕರ್

ಹೋಮ್​​ ಕ್ವಾರಂಟೈನ್ ಉಲ್ಲಂಘಿಸಿದರೆ ಅಂತಹವರನ್ನು ಸಾರ್ವಜನಿಕ ಹೋಮ್​​ ಕ್ವಾರಂಟೈನ್‌ಗೆ ಸ್ಥಳಾಂತರಿಸಲಾಗುವುದು.‌ ಇನ್ನು ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲಾಡಳಿತ ಮಾ.31ರವರೆಗೆ ಮಸೀದಿ, ಚರ್ಚ್ ಮತ್ತು ದೇವಾಲಯಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧಿಸಲಾಗಿದೆ ಎಂದು ಹೇಳಿದರು.

ಕೊಡಗು: ಕೊರೊನಾ ವೈರಸ್​ ತಡೆಗೆ ರಾಜ್ಯ ಸರ್ಕಾರ ಆದೇಶಿಸಿರುವ ಲಾಕ್​​​ಡೌನ್ ಅನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್​ ವರಿಷ್ಠಾಧಿಕಾರಿ ಡಾ.ಸುಮನಾ ಡಿ.ಪನ್ನೇಕರ್ ಎಚ್ವರಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ 13 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್​ ಪೋಸ್ಟ್ ಮೂಲಕ ಎಲ್ಲ ವಾಹನ ಸಂಚಾರ ಬಂದ್ ಮಾಡಿದ್ದೇವೆ.‌ ನಾಳೆಗೆ ವಾಹನ ಸಂಚಾರ ನಿಯಂತ್ರಣಕ್ಕೆ ಬರಲಿದೆ ಎಂದರು.

ಪೊಲೀಸ್​ ವರಿಷ್ಠಾಧಿಕಾರಿ ಡಾ.ಸುಮನಾ ಡಿ.ಪನ್ನೇಕರ್

ಹೋಮ್​​ ಕ್ವಾರಂಟೈನ್ ಉಲ್ಲಂಘಿಸಿದರೆ ಅಂತಹವರನ್ನು ಸಾರ್ವಜನಿಕ ಹೋಮ್​​ ಕ್ವಾರಂಟೈನ್‌ಗೆ ಸ್ಥಳಾಂತರಿಸಲಾಗುವುದು.‌ ಇನ್ನು ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲಾಡಳಿತ ಮಾ.31ರವರೆಗೆ ಮಸೀದಿ, ಚರ್ಚ್ ಮತ್ತು ದೇವಾಲಯಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧಿಸಲಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.