ETV Bharat / state

ವಿರಾಜಪೇಟೆಯಲ್ಲಿ ಲಾಕ್​ಡೌನ್ ಉಲ್ಲಂಘನೆ ಪ್ರಶ್ನಿಸಿದ ಪೊಲೀಸ್​ ಮೇಲೆ ಹಲ್ಲೆ: ಪುಂಡರು ಪರಾರಿ

ಲಾಕ್​ಡೌನ್​ ನಿಯಮ ಉಲ್ಲಂಘಿಸಿ ವಾಲಿಬಾಲ್​ ಆಡುತ್ತಿದ್ದವರಿಗೆ ಬುದ್ಧಿ ಹೇಳಿದ್ದಕ್ಕೆ ಕಾನ್ಸಟೇಬಲ್​ವೊಬ್ಬರ​ ಮೇಲೆ ಹಲ್ಲೆ ನಡೆಸಲಾಗಿದೆ. ಬಳಿಕ ಪುಂಡರು ಪರಾರಿಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

author img

By

Published : Apr 21, 2020, 12:30 PM IST

attack-on-police-in-kodagu-virajapete
ಪೊಲೀಸ್​ ಮೇಲೆ ಹಲ್ಲೆ

ಮಡಿಕೇರಿ(ಕೊಡಗು): ಲಾಕ್‍ಡೌನ್ ಉಲ್ಲಂಘಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ವಾಲಿಬಾಲ್​ ಆಡುತ್ತಿದ್ದ ಪುಂಡರು ಪೊಲೀಸ್​ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.

ವಿರಾಜಪೇಟೆ ತಾಲೂಕಿನ ಹುಂಡಿಯಲ್ಲಿ ಈ ಘಟನೆ‌ ನಡೆದಿದ್ದು, ನಾಸೀರ್, ಎಜಾಜ್, ಸಿನೋನ್, ಸುನೈನ್ ಮತ್ತು ಸಾಕಿತ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಿದ್ದಾಪೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿ ಆಗಿದ್ದಾರೆ.

ಘಟನೆ ಹಿನ್ನೆಲೆ

ನಿನ್ನೆ ಲಾಕ್‍ಡೌನ್ ಉಲ್ಲಂಘಿಸಿ ವಾಲಿಬಾಲ್ ಆಡುತ್ತಿದ್ದ ಯುವಕರಿಗೆ ಬುದ್ಧಿ ಹೇಳಿದ್ದಕ್ಕೆ ಅವರು ಹೆಡ್ ಕಾನ್ಸ್​​ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಮಾಲ್ದಾರೆ ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿ ರಾಜೇಶ್ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಮಡಿಕೇರಿ(ಕೊಡಗು): ಲಾಕ್‍ಡೌನ್ ಉಲ್ಲಂಘಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ವಾಲಿಬಾಲ್​ ಆಡುತ್ತಿದ್ದ ಪುಂಡರು ಪೊಲೀಸ್​ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.

ವಿರಾಜಪೇಟೆ ತಾಲೂಕಿನ ಹುಂಡಿಯಲ್ಲಿ ಈ ಘಟನೆ‌ ನಡೆದಿದ್ದು, ನಾಸೀರ್, ಎಜಾಜ್, ಸಿನೋನ್, ಸುನೈನ್ ಮತ್ತು ಸಾಕಿತ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಿದ್ದಾಪೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿ ಆಗಿದ್ದಾರೆ.

ಘಟನೆ ಹಿನ್ನೆಲೆ

ನಿನ್ನೆ ಲಾಕ್‍ಡೌನ್ ಉಲ್ಲಂಘಿಸಿ ವಾಲಿಬಾಲ್ ಆಡುತ್ತಿದ್ದ ಯುವಕರಿಗೆ ಬುದ್ಧಿ ಹೇಳಿದ್ದಕ್ಕೆ ಅವರು ಹೆಡ್ ಕಾನ್ಸ್​​ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಸಂಬಂಧ ಮಾಲ್ದಾರೆ ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿ ರಾಜೇಶ್ ಅವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.