ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ವೊಂದು ಹಳ್ಳಕ್ಕೆ ನುಗ್ಗಿರುವ ಘಟನೆ ಮಡಿಕೇರಿಯ ಹೊರವಲಯದಲ್ಲಿ ನಡೆದಿದೆ.
ಮಡಿಕೇರಿಯಿಂದ-ಮಂಗಳೂರಿಗೆ ರಾಜ್ಯ ರಸ್ತೆ ಸಾರಿಗೆ ಬಸ್ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಘಟನೆ ಪರಿಣಾಮ ಬಸ್ ಚಾಲಕ ಸೇರಿ ಮುಂದಿನ ಸೀಟ್ನಲ್ಲಿ ಕುಳಿತಿದ್ದ ಮಹಿಳೆಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ.