ETV Bharat / state

ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ: ಜಲಾವೃತದ ಆತಂಕದಲ್ಲಿ ಸ್ಥಳೀಯರು

author img

By

Published : Aug 5, 2020, 12:58 PM IST

ಕೊಡಗು ಜಿಲ್ಲೆಯಲ್ಲಿ ರಾತ್ರಿಯಿಡಿ ಸುರಿಯುತ್ತಿರುವ ಮಳೆ ಬೆಳಗ್ಗೆ ಬಿರುಸು ಪಡೆದುಕೊಂಡಿದೆ. ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹೀಗಾಗಿ, ನದಿ ಪಾತ್ರಗಳ ಜನರು ಭೀತಿಗೆ ಒಳಗಾಗಿದ್ದಾರೆ.

Cauvery is running out of danger
ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ

ಕರಡಿಗೋಡು (ಕೊಡಗು): ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಕಾವೇರಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಹೀಗಾಗಿ, ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ‌

ಹಲವೆಡೆ ಜೋರು ಗಾಳಿಗೆ ಮರಗಳು ರಸ್ತೆಗಳಿಗೆ ಉರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ತಲಕಾವೇರಿ-ಭಾಗಮಂಡಲ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ.

ಸೂಕ್ಷ್ಮ ಪ್ರದೆಶಗಳಾದ ಕರಡಿಗೋಡು, ಸಿದ್ಧಾಪುರ, ನೆಲ್ಯಹುದಿಕೇರಿ, ಕುಂಬಾರಗುಂಡಿ, ಗುಹ್ಯ ಭಾಗದಲ್ಲಿ ಕಾವೇರಿ ಪ್ರವಾಹದ ರೀತಿಯಲ್ಲಿ ಹರಿಯುತ್ತಿರುವುದರಿಂದ ಈ ಪ್ರದೇಶಗಳು ಜಲಾವೃತವಾಗುವ ಭೀತಿ ಎದುರಾಗಿದೆ.

ಹಾಗೆಯೇ ಮಡಿಕೇರಿ ತಾಲೂಕಿನ ಭೇತ್ರಿ ಗ್ರಾಮದ ಸಮೀಪದ‌ ಮೇಲ್ಸೇತುವೆ ಎತ್ತರಕ್ಕೆ ಕಾವೇರಿ ಹರಿಯುತ್ತಿದೆ. ಈಗಾಗಲೇ ಅಪಾಯದ ಪ್ರದೇಶಗಳಿಗೆ ಎನ್‌ಡಿ‌ಆರ್‌ಎಫ್ ತಂಡ ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದೆ. ಇಡೀ ರಾತ್ರಿ ಸುರಿದ ಮಳೆ ಬೆಳಗ್ಗೆ ಮತ್ತಷ್ಟು ಬಿರುಸು ಪಡೆದುಕೊಂಡಿದೆ. ವರುಣನ ಅಬ್ಬರ ಹೀಗೆ ಮುಂದುವರೆದರೆ ಪ್ರವಾಹ ಸೃಷ್ಟಿಯಾಗಲಿದೆ.

ಕರಡಿಗೋಡು (ಕೊಡಗು): ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಕಾವೇರಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಹೀಗಾಗಿ, ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ‌

ಹಲವೆಡೆ ಜೋರು ಗಾಳಿಗೆ ಮರಗಳು ರಸ್ತೆಗಳಿಗೆ ಉರುಳಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ತಲಕಾವೇರಿ-ಭಾಗಮಂಡಲ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ.

ಸೂಕ್ಷ್ಮ ಪ್ರದೆಶಗಳಾದ ಕರಡಿಗೋಡು, ಸಿದ್ಧಾಪುರ, ನೆಲ್ಯಹುದಿಕೇರಿ, ಕುಂಬಾರಗುಂಡಿ, ಗುಹ್ಯ ಭಾಗದಲ್ಲಿ ಕಾವೇರಿ ಪ್ರವಾಹದ ರೀತಿಯಲ್ಲಿ ಹರಿಯುತ್ತಿರುವುದರಿಂದ ಈ ಪ್ರದೇಶಗಳು ಜಲಾವೃತವಾಗುವ ಭೀತಿ ಎದುರಾಗಿದೆ.

ಹಾಗೆಯೇ ಮಡಿಕೇರಿ ತಾಲೂಕಿನ ಭೇತ್ರಿ ಗ್ರಾಮದ ಸಮೀಪದ‌ ಮೇಲ್ಸೇತುವೆ ಎತ್ತರಕ್ಕೆ ಕಾವೇರಿ ಹರಿಯುತ್ತಿದೆ. ಈಗಾಗಲೇ ಅಪಾಯದ ಪ್ರದೇಶಗಳಿಗೆ ಎನ್‌ಡಿ‌ಆರ್‌ಎಫ್ ತಂಡ ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದೆ. ಇಡೀ ರಾತ್ರಿ ಸುರಿದ ಮಳೆ ಬೆಳಗ್ಗೆ ಮತ್ತಷ್ಟು ಬಿರುಸು ಪಡೆದುಕೊಂಡಿದೆ. ವರುಣನ ಅಬ್ಬರ ಹೀಗೆ ಮುಂದುವರೆದರೆ ಪ್ರವಾಹ ಸೃಷ್ಟಿಯಾಗಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.