ETV Bharat / state

ಪ್ರಾಕೃತಿಕ ವಿಕೋಪ: ಕೊಡಗಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ಪರಿಶೀಲನೆ

ಕುಶಾಲನಗರ ಸಮೀಪದ ಕೂಡಿಗೆ ಸೈನಿಕ ಶಾಲೆಗೆ ಕೇಂದ್ರ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್ ನೇತೃತ್ವದ ಅಧ್ಯಯನ ತಂಡ ಆಗಮಿಸಿದ್ದು, ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಸಂಭವಿಸಿದ ಆಸ್ತಿ-ಪಾಸ್ತಿ, ಮನೆಗಳು ಸೇರಿದಂತೆ ಜೀವಹಾನಿ ಕುರಿತು ಪರಿಶೀಲಿಸುತ್ತಿದೆ.‌

author img

By

Published : Sep 8, 2020, 1:18 PM IST

Central study team visits kodagu to check condition of Natural disaster
ಪ್ರಾಕೃತಿಕ ವಿಕೋಪ: ಕೊಡಗಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ಪರಿಶೀಲನೆ

(ಕುಶಾಲನಗರ) ಕೊಡಗು: ಮಹಾಮಳೆಯಿಂದ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿದ್ದು, ತಂಡಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡುತ್ತಿದ್ದಾರೆ.

ಕೊಡಗಿಗೆ ಕೇಂದ್ರ ಅಧ್ಯಯನ ತಂಡ ಭೇಟಿ

ಕುಶಾಲನಗರ ಸಮೀಪದ ಕೂಡಿಗೆ ಸೈನಿಕ ಶಾಲೆಗೆ ಕೇಂದ್ರ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್ ನೇತೃತ್ವದ ಅಧ್ಯಯನ ತಂಡ ಆಗಮಿಸಿದ್ದು, ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಸಂಭವಿಸಿದ ಆಸ್ತಿ-ಪಾಸ್ತಿ, ಮನೆಗಳು ಸೇರಿದಂತೆ ಜೀವಹಾನಿ ಕುರಿತು ಪರಿಶೀಲಿಸುತ್ತಿದೆ.‌ ಕೇಂದ್ರ ಹಣಕಾಸು ಸಚಿವಾಲಯದ ಅಧಿಕಾರಿ ಡಾ. ಭಾರ್ತೇಂದು ಕುಮಾರ್ ಸಿಂಗ್ ಅವರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಜಿಲ್ಲೆಯ ಪ್ರಾಕೃತಿಕ ವಿಕೋಪದ ಪರಿಣಾಮವನ್ನು ವಿವರಿಸುತ್ತಿದ್ದಾರೆ‌. ಈ ಸಂಬಂಧ ಸೈನಿಕ ಶಾಲೆಯಲ್ಲಿ ಅಧಿಕಾರಿಗಳು ಸಭೆ ನಡೆಸುತ್ತಿದ್ದು, ಸಭೆಯ ಬಳಿಕ ಪ್ರವಾಹ‌‌ ಪೀಡಿತ ಹಾಗೂ ಭೂ ಕುಸಿತದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.‌

(ಕುಶಾಲನಗರ) ಕೊಡಗು: ಮಹಾಮಳೆಯಿಂದ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿದ್ದು, ತಂಡಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡುತ್ತಿದ್ದಾರೆ.

ಕೊಡಗಿಗೆ ಕೇಂದ್ರ ಅಧ್ಯಯನ ತಂಡ ಭೇಟಿ

ಕುಶಾಲನಗರ ಸಮೀಪದ ಕೂಡಿಗೆ ಸೈನಿಕ ಶಾಲೆಗೆ ಕೇಂದ್ರ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್ ನೇತೃತ್ವದ ಅಧ್ಯಯನ ತಂಡ ಆಗಮಿಸಿದ್ದು, ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಸಂಭವಿಸಿದ ಆಸ್ತಿ-ಪಾಸ್ತಿ, ಮನೆಗಳು ಸೇರಿದಂತೆ ಜೀವಹಾನಿ ಕುರಿತು ಪರಿಶೀಲಿಸುತ್ತಿದೆ.‌ ಕೇಂದ್ರ ಹಣಕಾಸು ಸಚಿವಾಲಯದ ಅಧಿಕಾರಿ ಡಾ. ಭಾರ್ತೇಂದು ಕುಮಾರ್ ಸಿಂಗ್ ಅವರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಜಿಲ್ಲೆಯ ಪ್ರಾಕೃತಿಕ ವಿಕೋಪದ ಪರಿಣಾಮವನ್ನು ವಿವರಿಸುತ್ತಿದ್ದಾರೆ‌. ಈ ಸಂಬಂಧ ಸೈನಿಕ ಶಾಲೆಯಲ್ಲಿ ಅಧಿಕಾರಿಗಳು ಸಭೆ ನಡೆಸುತ್ತಿದ್ದು, ಸಭೆಯ ಬಳಿಕ ಪ್ರವಾಹ‌‌ ಪೀಡಿತ ಹಾಗೂ ಭೂ ಕುಸಿತದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.