ETV Bharat / state

ಕೊಡಗಿನಲ್ಲಿ ನಿಲ್ಲದ ವರುಣನ ಆರ್ಭಟ... ಸೋಮವಾರ ಪೇಟೆಯಲ್ಲಿ ಗುಡ್ಡ ಕುಸಿತ

author img

By

Published : Sep 12, 2019, 1:44 PM IST

ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ಬುಧವಾರ ರಾತ್ರಿ ಸುರಿದ ಮಳೆಗೆ ಸೋಮವಾರ ಪೇಟೆ ಸಮೀಪದ ಮಕಂದೂರು ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಸೋಮವಾರ ಪೇಟೆಯಲ್ಲಿ ಗುಡ್ಡ ಕುಸಿತ

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಬೆಳಗ್ಗೆಯಿಂದ ಜಿಲ್ಲೆಯಾದ್ಯಂತ ಮಳೆ ಆಗುತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕ ಎದುರಾಗಿದೆ.

ಕೊಡಗಿನಲ್ಲಿ ಬುಧವಾರ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿತ್ತು. ರಾತ್ರಿ ಕೂಡ ಮಳೆ ಮುಂದುವರೆದಿತ್ತು. ಇಂದು ಬೆಳಗ್ಗೆಯಿಂದ ಚಳಿ ಹಾಗೂ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಾಧಾರಣ ಮಳೆಯಾಗುತ್ತಿದೆ.

ಸೋಮವಾರ ಪೇಟೆಯಲ್ಲಿ ಗುಡ್ಡ ಕುಸಿತ

ನಿನ್ನೆ ರಾತ್ರಿ ಸುರಿದ ಮಳೆಗೆ ಸೋಮವಾರಪೇಟೆ ಸಮೀಪದ ಮಕಂದೂರು ಬಳಿ ಗುಡ್ಡ ಕುಸಿದಿತ್ತು. ಪರಿಣಾಮ ಮಡಿಕೇರಿ-ಸೋಮವಾರಪೇಟೆ ರಸ್ತೆ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಬೇಕಾಯಿತು. ಇದೀಗ ಜಿಲ್ಲಾಡಳಿತ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ‌.

ಒಟ್ಟಿನಲ್ಲಿ, ಜಿಲ್ಲೆಯಲ್ಲಿ ಮತ್ತೆ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಜನತೆ ಭಯದಲ್ಲೇ ಬದುಕುವಂತಾಗಿದೆ.

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಬೆಳಗ್ಗೆಯಿಂದ ಜಿಲ್ಲೆಯಾದ್ಯಂತ ಮಳೆ ಆಗುತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕ ಎದುರಾಗಿದೆ.

ಕೊಡಗಿನಲ್ಲಿ ಬುಧವಾರ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿತ್ತು. ರಾತ್ರಿ ಕೂಡ ಮಳೆ ಮುಂದುವರೆದಿತ್ತು. ಇಂದು ಬೆಳಗ್ಗೆಯಿಂದ ಚಳಿ ಹಾಗೂ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಸಾಧಾರಣ ಮಳೆಯಾಗುತ್ತಿದೆ.

ಸೋಮವಾರ ಪೇಟೆಯಲ್ಲಿ ಗುಡ್ಡ ಕುಸಿತ

ನಿನ್ನೆ ರಾತ್ರಿ ಸುರಿದ ಮಳೆಗೆ ಸೋಮವಾರಪೇಟೆ ಸಮೀಪದ ಮಕಂದೂರು ಬಳಿ ಗುಡ್ಡ ಕುಸಿದಿತ್ತು. ಪರಿಣಾಮ ಮಡಿಕೇರಿ-ಸೋಮವಾರಪೇಟೆ ರಸ್ತೆ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಬೇಕಾಯಿತು. ಇದೀಗ ಜಿಲ್ಲಾಡಳಿತ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ‌.

ಒಟ್ಟಿನಲ್ಲಿ, ಜಿಲ್ಲೆಯಲ್ಲಿ ಮತ್ತೆ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಜನತೆ ಭಯದಲ್ಲೇ ಬದುಕುವಂತಾಗಿದೆ.

Intro:ಜಿಲ್ಲೆಯಲ್ಲಿ ಮುಂದುವರೆ ಮಳೆ: ಮತ್ತಷ್ಟು ಆತಂಕದಲ್ಲಿ ಜನರು

ಕೊಡಗು: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಬೆಳಗ್ಗೆಯಿಂದ ಜಿಲ್ಲೆಯಾದ್ಯಂತ ಮಳೆ ಆಗುತ್ತಿದ್ದು ಜನರಲ್ಲಿ ಮತ್ತಷ್ಟು ಆತಂಕ ಎದುರಾಗಿದೆ.

ಜಿಲ್ಲೆಯಲ್ಲಿ ನಿನ್ನೆ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿತ್ತು.ರಾತ್ರಿಕೂಡ ಮಳೆ ಮುಂದುವರೆದಿದೆ. ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮೋಡ ಕವಿದ ಹಾಗೂ ಚಳಿಯಿಂದ ಕೂಡಿದ ವಾತಾವರಣವಿದ್ದು ಹಲವೆಡೆ ಸಾಧಾರಣ ಮಳೆ ಆಗುತ್ತಿರುವುದರಿಂದ ಜನ-ಜೀವನ ಅಸ್ತವ್ಯಸ್ತವಾಗುವ ಭೀತಿ ಎದುರಾಗಲಿದೆ‌.

ನಿನ್ನೆ ಸುರಿದ ಮಳೆಗೆ ರಾತ್ರಿ ಸೋಮವಾರಪೇಟೆ ಸಮೀಪದ ಮಕಂದೂರು ಬಳಿ ಗುಡ್ಡ ಕುಸಿದಿತ್ತು. ಪರಿಣಾಮ
ಮಡಿಕೇರಿ ಸೋಮವಾರಪೇಟೆ ರಸ್ತೆ ಸಂಚಾರ ಬಂದ್ ಆದ ಹಿನ್ನಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಿದ್ದರು.ಇದೀಗ ಜಿಲ್ಲಾಡಳಿತ ಮುಂಜಾನೆಯಿಂದ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ‌.

ಭಾರಿ ಮಳೆಯಿಂದ ಮಡಿಕೇರಿ, ಮಾದಾಪುರ ಸೋಮವಾರಪೇಟೆ ಮಾರ್ಗ ಸಂಪರ್ಕಿಸುವ ರಾಜ್ಯ ಹೆದ್ದಾರಿ್ಗೆ ಮೇಲೆಯೇ ಹಾಲೇರಿ ಗ್ರಾಮದ ಸಮೀಪ ಕುಸಿದಿದ್ದ ಗುಡ್ಡದ ಮಣ್ಣನ್ನು ಲೋಕೋಪಯೋಗಿ ಇಲಾಖೆ ಮುಂಜಾನೆಯಿಂದ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು‌. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಮತ್ತೆ ಮಳೆಯಾಗುತ್ತಿರೊದ್ರಿಂದ ಜಿಲ್ಲೆಯ ಜನತೆ ಮತ್ತೆ ಆತಂಕ್ಕೆ ಒಳಗಾಗಿದ್ದು ಭಯದಲ್ಲೆ ಬದುಕುವಂತಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗುBody:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.