ETV Bharat / state

ಜಿಲ್ಲೆಯಲ್ಲಿ ಮತ್ತೆ 4 ಕೊರೊನಾ ಪ್ರಕರಣಗಳು ದೃಢ : ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಸ್ಪಷ್ಟನೆ...

ಕಂಟೇನ್​ಮೆಂಟ್​​ ಪ್ರದೇಶಗಳಲ್ಲಿರುವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ. ‌

author img

By

Published : Jun 25, 2020, 4:31 PM IST

District Collector Anees K. Joy
ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್

ಕೊಡಗು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಒಟ್ಟು 26 ಪ್ರಕರಣಗಳಲ್ಲಿ 23 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ 4 ಪ್ರಕರಣಗಳು ಮತ್ತೆ ದೃಢಪಟ್ಟಿವೆ. ಬೆಳಗ್ಗೆ ಸೌದಿಯಿಂದ ಬಂದಿದ್ದ ಇಬ್ಬರಲ್ಲಿ ಸೋಂಕು ಕಂಡು ಬಂದಿದೆ. ಬಿಟ್ಟಂಗಾಲದ ಮಹಿಳೆಗೆ ಪಾಸಿಟಿವ್ ಬಂದಿದ್ದು, ಆ ಮಹಿಳೆಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಕಂಡು ಬಂದಿಲ್ಲ.‌ ಜನರಲ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 3 ವೈದ್ಯರು ಹಾಗೂ ಅವರ ಜೊತೆಗೆ ಖಾಸಗಿ ಕ್ಲಿನಿಕ್ ಸಿಬ್ಬಂದಿಗೂ ಪಾಸಿಟಿವ್ ಕಂಡುಬಂದಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್
ಇದುವರೆಗೆ 6323 ಗಂಟಲ ದ್ರವವನ್ನು ಸಂಗ್ರಹಿಸಲಾಗಿದೆ. ಒಟ್ಟು 7 ವೈದ್ಯಕೀಯ ಸಿಬ್ಬಂದಿಗೆ ಪಾಸಿಟಿವ್​​ ದೃಢವಾದ್ದರಿಂದ ಅಶ್ವಿನಿ ಆಸ್ಪತ್ರೆಗೆ ಸ್ಯಾನಿಟೈಸರ್ ಮಾಡಿ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಲಾಕ್‌ಡೌನ್ ಮಾಡಲಾಗಿದೆ. ಕುಶಾಲನಗರದ ಮೆಡಿಕಲ್ ಒಂದರ ಸಿಬ್ಬಂದಿಗೂ ಪಾಸಿಟಿವ್ ಬಂದಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 12 ಕಂಟೇನ್​ಮೆಂಟ್​​ ಪ್ರದೇಶವನ್ನು ಗುರುತಿಸಲಾಗಿದೆ ಎಂದ ಅವರು, ಅಶ್ವಿನಿ ಆಸ್ಪತ್ರೆಯಲ್ಲಿದ್ದ 14 ಒಳ ರೋಗಿಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ವಿವರಿಸಿದರು.

ಸೋಮವಾರಪೇಟೆ ತಾಲ್ಲೂಕಿನಲ್ಲಿ 5, ಮಡಿಕೇರಿ ತಾಲೂಕಿನಲ್ಲಿ 6 ಹಾಗೆಯೇ ವಿರಾಜಪೇಟೆಯಲ್ಲಿ 1 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 12 ಕಂಟೈನ್ಮೆಂಟ್​ ಪ್ರದೇಶವನ್ನು​ ಗುರುತಿಸಲಾಗಿದೆ. ಅಲ್ಲದೇ ಹೋಟೆಲ್​​ ಹಾಗೂ ಹೋಮ್​​ ಸ್ಟೇ‌ಗಳಿಗೆ ಆಗಮಿಸುವ ಪ್ರವಾಸಿಗರ ಗಂಟಲ ದ್ರವವನ್ನು ಪರೀಕ್ಷಿಸಲಾಗುವುದು ಎಂದರು.

ಕಂಟೈನ್ಮೆಂಟ್​​​​ ಪ್ರದೇಶಗಳಲ್ಲಿರುವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಗುರುತಿಸಲಾಗುತ್ತದೆ. ಆ ವಿದ್ಯಾರ್ಥಿಗಳ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು. ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವವರು ಇದ್ದರೆ ಅಥವಾ ಕೊರೊನಾ ಲಕ್ಷಣ ಇದ್ದರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗಿದೆ ಎಂದು ತಿಳಿಸಿದರು.

ಕೊಡಗು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಒಟ್ಟು 26 ಪ್ರಕರಣಗಳಲ್ಲಿ 23 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ 4 ಪ್ರಕರಣಗಳು ಮತ್ತೆ ದೃಢಪಟ್ಟಿವೆ. ಬೆಳಗ್ಗೆ ಸೌದಿಯಿಂದ ಬಂದಿದ್ದ ಇಬ್ಬರಲ್ಲಿ ಸೋಂಕು ಕಂಡು ಬಂದಿದೆ. ಬಿಟ್ಟಂಗಾಲದ ಮಹಿಳೆಗೆ ಪಾಸಿಟಿವ್ ಬಂದಿದ್ದು, ಆ ಮಹಿಳೆಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಕಂಡು ಬಂದಿಲ್ಲ.‌ ಜನರಲ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 3 ವೈದ್ಯರು ಹಾಗೂ ಅವರ ಜೊತೆಗೆ ಖಾಸಗಿ ಕ್ಲಿನಿಕ್ ಸಿಬ್ಬಂದಿಗೂ ಪಾಸಿಟಿವ್ ಕಂಡುಬಂದಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್
ಇದುವರೆಗೆ 6323 ಗಂಟಲ ದ್ರವವನ್ನು ಸಂಗ್ರಹಿಸಲಾಗಿದೆ. ಒಟ್ಟು 7 ವೈದ್ಯಕೀಯ ಸಿಬ್ಬಂದಿಗೆ ಪಾಸಿಟಿವ್​​ ದೃಢವಾದ್ದರಿಂದ ಅಶ್ವಿನಿ ಆಸ್ಪತ್ರೆಗೆ ಸ್ಯಾನಿಟೈಸರ್ ಮಾಡಿ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಲಾಕ್‌ಡೌನ್ ಮಾಡಲಾಗಿದೆ. ಕುಶಾಲನಗರದ ಮೆಡಿಕಲ್ ಒಂದರ ಸಿಬ್ಬಂದಿಗೂ ಪಾಸಿಟಿವ್ ಬಂದಿದೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 12 ಕಂಟೇನ್​ಮೆಂಟ್​​ ಪ್ರದೇಶವನ್ನು ಗುರುತಿಸಲಾಗಿದೆ ಎಂದ ಅವರು, ಅಶ್ವಿನಿ ಆಸ್ಪತ್ರೆಯಲ್ಲಿದ್ದ 14 ಒಳ ರೋಗಿಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ವಿವರಿಸಿದರು.

ಸೋಮವಾರಪೇಟೆ ತಾಲ್ಲೂಕಿನಲ್ಲಿ 5, ಮಡಿಕೇರಿ ತಾಲೂಕಿನಲ್ಲಿ 6 ಹಾಗೆಯೇ ವಿರಾಜಪೇಟೆಯಲ್ಲಿ 1 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 12 ಕಂಟೈನ್ಮೆಂಟ್​ ಪ್ರದೇಶವನ್ನು​ ಗುರುತಿಸಲಾಗಿದೆ. ಅಲ್ಲದೇ ಹೋಟೆಲ್​​ ಹಾಗೂ ಹೋಮ್​​ ಸ್ಟೇ‌ಗಳಿಗೆ ಆಗಮಿಸುವ ಪ್ರವಾಸಿಗರ ಗಂಟಲ ದ್ರವವನ್ನು ಪರೀಕ್ಷಿಸಲಾಗುವುದು ಎಂದರು.

ಕಂಟೈನ್ಮೆಂಟ್​​​​ ಪ್ರದೇಶಗಳಲ್ಲಿರುವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಗುರುತಿಸಲಾಗುತ್ತದೆ. ಆ ವಿದ್ಯಾರ್ಥಿಗಳ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು. ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವವರು ಇದ್ದರೆ ಅಥವಾ ಕೊರೊನಾ ಲಕ್ಷಣ ಇದ್ದರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.