ETV Bharat / state

ರಾಯ್ ಡಿಸೋಜಾ ಸಾವು ಪ್ರಕರಣ: 8 ಪೊಲೀಸರನ್ನು ಅಮಾನತುಗೊಳಿಸಿ ಐಜಿಪಿ ಆದೇಶ

author img

By

Published : Jun 12, 2021, 10:32 PM IST

ವಿರಾಜಪೇಟೆ ಚಿಕ್ಕಪೇಟೆ ನಿವಾಸಿ ಮಾನಸಿಕವಾಗಿ ಅಸ್ವಸ್ವರಾಗಿದ್ದ ರಾಯ್ ಡೇವಿಡ್ (50) ಮೇಲೆ ಜೂನ್ 9 ರಂದು ವಿರಾಜಪೇಟೆ ಪೊಲೀಸರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಆತ ಇದೀಗ ಮೃತಪಟ್ಟಿದ್ದಾನೆ. ಈ ಹಿನ್ನೆಲೆ ಪ್ರಕರಣ ಸಂಬಂಧ ಆತನನ್ನ ಥಳಿಸಿದ್ದ ವಿರಾಜಪೇಟೆಯ ಎಂಟು ಮಂದಿ ಪೊಲೀಸರನ್ನು ಅಮಾನತು ಮಾಡಿ ದಕ್ಷಿಣ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ.

police
ದಕ್ಷಿಣ ವಲಯ ಐಜಿಪಿ

ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದ್ದ ರಾಯ್‌ ಡಿಸೋಜಾ ಅವರ ಸಾವಿನ ಪ್ರಕರಣ ಸಂಬಂಧ ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡು ಬಂದ ಎಂಟು ಪೊಲೀಸರನ್ನು ಸ್ಥಳದಲ್ಲೇ ಅಮಾನತು ಮಾಡಿದ್ದಾರೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಐಜಿಪಿ ಪ್ರವೀಣ್ ಮಧುಕರ್​ ಪವಾರ್ ತಿಳಿಸಿದ್ದಾರೆ. ಶನಿವಾರ ಘಟನೆ ನಡೆದ ಸ್ಥಳ ಹಾಗೂ ಪೊಲೀಸ್​ ಠಾಣೆಗೆ ಅವರು ಭೇಟಿ ನೀಡಿ ಪರಿಶೀಲಿಸಿದರು.

8 ಪೊಲೀಸರನ್ನು ಅಮಾನತುಗೊಳಿಸಿ ಐಜಿಪಿ ಆದೇಶ

ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಮೃತ ಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಅವರ ಸಹೋದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದ್ದು, ದೂರು ಸ್ವೀಕರಿಸಿ, ಠಾಣೆಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆ ನಡೆಸಿದ ವಿರಾಜಪೇಟೆ ಡಿವೈಎಸ್ಪಿ ಜಯ ಕುಮಾರ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ವರದಿಯ ಆಧಾರದ ಮೇಲೆ 8 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ:ಪೊಲೀಸ್​ ಹಲ್ಲೆಯಿಂದ ಮಾನಸಿಕ ಅಸ್ವಸ್ಥ ಸಾವು ಆರೋಪ

ಇನ್ನು ಘಟನೆ ಸಂಬಂಧ ಪೊಲೀಸ್ ಠಾಣೆಯ ಸಿಸಿ ಕ್ಯಾಮರಾವನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿರುವ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ತಪ್ಪಿತಸ್ಥರ ವಿರುದ್ದ ಶಿಸ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಹೇಳಿದರು.

ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದ್ದ ರಾಯ್‌ ಡಿಸೋಜಾ ಅವರ ಸಾವಿನ ಪ್ರಕರಣ ಸಂಬಂಧ ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡು ಬಂದ ಎಂಟು ಪೊಲೀಸರನ್ನು ಸ್ಥಳದಲ್ಲೇ ಅಮಾನತು ಮಾಡಿದ್ದಾರೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಐಜಿಪಿ ಪ್ರವೀಣ್ ಮಧುಕರ್​ ಪವಾರ್ ತಿಳಿಸಿದ್ದಾರೆ. ಶನಿವಾರ ಘಟನೆ ನಡೆದ ಸ್ಥಳ ಹಾಗೂ ಪೊಲೀಸ್​ ಠಾಣೆಗೆ ಅವರು ಭೇಟಿ ನೀಡಿ ಪರಿಶೀಲಿಸಿದರು.

8 ಪೊಲೀಸರನ್ನು ಅಮಾನತುಗೊಳಿಸಿ ಐಜಿಪಿ ಆದೇಶ

ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಮೃತ ಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಅವರ ಸಹೋದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದ್ದು, ದೂರು ಸ್ವೀಕರಿಸಿ, ಠಾಣೆಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆ ನಡೆಸಿದ ವಿರಾಜಪೇಟೆ ಡಿವೈಎಸ್ಪಿ ಜಯ ಕುಮಾರ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ವರದಿಯ ಆಧಾರದ ಮೇಲೆ 8 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ:ಪೊಲೀಸ್​ ಹಲ್ಲೆಯಿಂದ ಮಾನಸಿಕ ಅಸ್ವಸ್ಥ ಸಾವು ಆರೋಪ

ಇನ್ನು ಘಟನೆ ಸಂಬಂಧ ಪೊಲೀಸ್ ಠಾಣೆಯ ಸಿಸಿ ಕ್ಯಾಮರಾವನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿರುವ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ತಪ್ಪಿತಸ್ಥರ ವಿರುದ್ದ ಶಿಸ್ತು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.