ETV Bharat / state

ಕೇಂದ್ರದಿಂದ ಇನ್ನೂ ಹೆಚ್ಚಿನ ನೆರೆ ಪರಿಹಾರ ಬಿಡುಗಡೆ ವಿಶ್ವಾಸ ವ್ಯಕ್ತಪಡಿಸಿದ ಶಾಸಕ ಅಪ್ಪಚ್ಚು ರಂಜನ್​​

author img

By

Published : Oct 6, 2019, 7:37 PM IST

ಮಧ್ಯಂತರ ನೆರೆ ಪರಿಹಾರವಾಗಿ ಕೇಂದ್ರ ಸರ್ಕಾರ ₹1,200 ಕೋಟಿ ಬಿಡುಗಡೆ ಮಾಡಿದ್ದು, ಮುಂದೆ ಇನ್ನೂ ಹೆಚ್ಚು ನೆರವು ನೀಡುವ ಭರವಸೆ ಇದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು.

flood-affected-fund-release-soon

ಕೊಡಗು: ಮಧ್ಯಂತರ ನೆರೆ ಪರಿಹಾರವಾಗಿ ಕೇಂದ್ರ ಸರ್ಕಾರ ₹1,200 ಕೋಟಿ ಬಿಡುಗಡೆ ಮಾಡಿದ್ದು, ಮುಂದೆ ಇನ್ನೂ ಹೆಚ್ಚಿನ ನೆರವು ನೀಡುವ ಭರವಸೆ ಇದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವೂ ಹಿಂದೆಯೇ ₹1,500 ಕೋಟಿ ಬಿಡುಗಡೆಗೊಳಿಸಿದ್ದು, ಇನ್ನೂ ಹೆಚ್ಚಿನ ನೆರವು ನೀಡಲಿದೆ. ಪ್ರಕೃತಿ ವಿಕೋಪದಿಂದ ಹಾಳಾದ ಕೊಡಗಿನ ರಸ್ತೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರ ವಹಿಸಿಕೊಂಡ ಮೂರೇ ದಿನದಲ್ಲಿ ₹ 100 ಕೋಟಿ ನೀಡಿದ್ದರು ಎಂದು ಹೇಳಿದರು.

ಶಾಸಕ ಎಂ.ಪಿ.ಅಪ್ಪಚ್ಚು

ಈಗಾಗಲೇ ಜಿಲ್ಲಾ ಪಂಚಾಯಿತಿಗೆ ₹ 60 ಕೋಟಿ, ಲೋಕೋಪಯೋಗಿ ಇಲಾಖೆಗೆ ₹ 30 ಕೋಟಿ, ಮಡಿಕೇರಿಗೆ ₹ 6 ಕೋಟಿ, ವಿರಾಜಪೇಟೆಗೆ ₹ 3 ಕೋಟಿ, ಕುಶಾಲನಗರ ಮತ್ತು ಸೋಮವಾರಪೇಟೆಗೆ ತಲಾ ₹2 ಕೋಟಿ ನೀಡಲು ನಿರ್ಧರಿಸಲಾಗಿದೆ. ಹಾಳಾಗಿರುವ ರಸ್ತೆಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಪ್ರವಾಹದ ಸಂಕಷ್ಟದಲ್ಲಿದ್ದವರಿಗೆ ಸ್ಥಳೀಯ ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಸಂತ್ರಸ್ತರ ಸಂಕಷ್ಟಗಳಿಗೆ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ದೂಷಿಸುವ ಬದಲು ಪಕ್ಷಾತೀತವಾಗಿ ಎಲ್ಲರೂ ಕೆಲಸ ಮಾಡಬೇಕಿದೆ. ಜಿಲ್ಲಾಡಳಿತದಲ್ಲೇ ಇರುವ ಅನುದಾನವನ್ನೇ ಬಳಸಿಕೊಳ್ಳಲು ಕೆಲವರು ಮುಂದಾಗಿಲ್ಲ ಎಂದು ಆರೋಪಿಸಿದರು.

ಕೊಡಗು: ಮಧ್ಯಂತರ ನೆರೆ ಪರಿಹಾರವಾಗಿ ಕೇಂದ್ರ ಸರ್ಕಾರ ₹1,200 ಕೋಟಿ ಬಿಡುಗಡೆ ಮಾಡಿದ್ದು, ಮುಂದೆ ಇನ್ನೂ ಹೆಚ್ಚಿನ ನೆರವು ನೀಡುವ ಭರವಸೆ ಇದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವೂ ಹಿಂದೆಯೇ ₹1,500 ಕೋಟಿ ಬಿಡುಗಡೆಗೊಳಿಸಿದ್ದು, ಇನ್ನೂ ಹೆಚ್ಚಿನ ನೆರವು ನೀಡಲಿದೆ. ಪ್ರಕೃತಿ ವಿಕೋಪದಿಂದ ಹಾಳಾದ ಕೊಡಗಿನ ರಸ್ತೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರ ವಹಿಸಿಕೊಂಡ ಮೂರೇ ದಿನದಲ್ಲಿ ₹ 100 ಕೋಟಿ ನೀಡಿದ್ದರು ಎಂದು ಹೇಳಿದರು.

ಶಾಸಕ ಎಂ.ಪಿ.ಅಪ್ಪಚ್ಚು

ಈಗಾಗಲೇ ಜಿಲ್ಲಾ ಪಂಚಾಯಿತಿಗೆ ₹ 60 ಕೋಟಿ, ಲೋಕೋಪಯೋಗಿ ಇಲಾಖೆಗೆ ₹ 30 ಕೋಟಿ, ಮಡಿಕೇರಿಗೆ ₹ 6 ಕೋಟಿ, ವಿರಾಜಪೇಟೆಗೆ ₹ 3 ಕೋಟಿ, ಕುಶಾಲನಗರ ಮತ್ತು ಸೋಮವಾರಪೇಟೆಗೆ ತಲಾ ₹2 ಕೋಟಿ ನೀಡಲು ನಿರ್ಧರಿಸಲಾಗಿದೆ. ಹಾಳಾಗಿರುವ ರಸ್ತೆಗಳ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಪ್ರವಾಹದ ಸಂಕಷ್ಟದಲ್ಲಿದ್ದವರಿಗೆ ಸ್ಥಳೀಯ ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಸಂತ್ರಸ್ತರ ಸಂಕಷ್ಟಗಳಿಗೆ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ದೂಷಿಸುವ ಬದಲು ಪಕ್ಷಾತೀತವಾಗಿ ಎಲ್ಲರೂ ಕೆಲಸ ಮಾಡಬೇಕಿದೆ. ಜಿಲ್ಲಾಡಳಿತದಲ್ಲೇ ಇರುವ ಅನುದಾನವನ್ನೇ ಬಳಸಿಕೊಳ್ಳಲು ಕೆಲವರು ಮುಂದಾಗಿಲ್ಲ ಎಂದು ಆರೋಪಿಸಿದರು.

Intro:ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿದೆ: ಶಾಸಕ ಅಪ್ಪಚ್ಚು ರಂಜನ್

ಕೊಡಗು: ಕೇಂದ್ರ ಸರ್ಕಾರ ಮಧ್ಯಂತರ ನೆರೆ ಪರಿಹಾರವಾಗಿ ರಾಜ್ಯಕ್ಕೆ 1200 ಕೋಟಿ ರೂ.ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವೂ ಹಿಂದೆಯೇ 500 ಕೋಟಿ ಬಿಡುಗಡೆ ಮಾಡಿ
ಮೂಲಕ ನೆರೆ ಸಂತ್ರಸ್ತರಿಗೆ ಸ್ಪಂದಿಸುತ್ತಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದ ನೆರೆ ಪೀಡಿತರ ಸಂಕಷ್ಟಗಳಿಗೆ ಸ್ಪಂದಿಸುತ್ತಿದೆ. ಪ್ರವಾಹ ಹಾಗೂ ಪ್ರಾಕೃತಿಕ ವಿಕೋಪದಿಂದ ಹಾಳಾದ ಕೊಡಗಿನ ರಸ್ತೆಗಳಿಗೆ ಸಿಎಂ ಯಡಿಯೂರಪ್ಪ ಅವರು ಅಧಿಕಾರ ವಹಿಸಿಕೊಂಡ ಮೂರೇ ದಿನಗಳಲ್ಲಿ 100 ಕೋಟಿ ಬಿಡುಗಡೆ ಮಾಡಿದ್ದಾರೆ ಎಂದು ಸಂತ್ರಸ್ತರಿಗೆ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪಗಳಿಗೆ ತಿರುಗೇಟು ನೀಡಿದರು.

ಈಗಾಗಲೇ ಜಿಲ್ಲಾ ಪಂಚಾಯಿತಿಗೆ 60 ಕೋಟಿ, 30 ಕೋಟಿ ಲೋಕೋಪಯೋಗಿ ಇಲಾಖೆಗೆ ಹಾಗೂ ಇನ್ನುಳಿದ 22 ಕೋಟಿ ಹಣದಲ್ಲಿ ಮಡಿಕೇರಿಗೆ 6 ಕೋಟಿ, ವಿರಾಜಪೇಟೆ ಪಟ್ಟಣಕ್ಕೆ 3 ಕೋಟಿ ಹಾಗೆಯೇ ಕುಶಾಲನಗರ ಮತ್ತು ಸೋಮವಾರಪೇಟೆ ಪಟ್ಡಣಕ್ಕೆ ತಲಾ 2 ಕೋಟಿ ಕೊಡಲು ನಿರ್ಧರಿಸಿದೆ. ಶೀಘ್ರವಾಗಿ ಹಾಳಾಗಿರುವ ರಸ್ತೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಪ್ರವಾಹದ ಸಂದರ್ಭದಲ್ಲಿ ಸಂಕಷ್ಟದಲ್ಲಿ ಇದ್ದವರಿಗೆ ಸ್ಥಳೀಯ ಶಾಸಕರು ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ದೇವೆ. ಸಂತ್ರಸ್ತರಿಗೆ ಸಂಕಷ್ಟಗಳಿಗೆ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ದೂಷಿಸುವ ಬದಲು ಪಕ್ಷಾತೀತವಾಗಿ ಎಲ್ಲರೂ ಕೆಲಸ ಮಾಡಬೇಕಿದೆ. ಜಿಲ್ಲಾಡಳಿತದಲ್ಲೇ ಇರುವ ಅನುದಾನವನ್ನೇ ಬಳಸಿಕೊಳ್ಳಲು ಕೆಲವರು ಮುಂದಾಗಿಲ್ಲ ಎಂದು ಆರೋಪಿಸಿದರು.

- ಕೆ‌.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.‌ 


Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.