ETV Bharat / state

ಕೊಡಗಿನಲ್ಲಿ ಮುಂದುವರೆದ ಮಳೆಯ ಆರ್ಭಟ.. ಹಲವೆಡೆ ಗುಡ್ಡ ಕುಸಿತ, ಮನೆ, ಬೆಳೆ ಜಲಾವೃತ

author img

By

Published : Jul 10, 2022, 4:17 PM IST

ಕೊಡಗು ಜಿಲ್ಲೆಯಲ್ಲಿ ನಿಲ್ಲದ ಮಳೆ ಅಬ್ಬರ- ಹಲವೆಡೆ ಗುಡ್ಡಗಳು ಕುಸಿತ - ಭಾರಿ ಮಳೆಗೆ ಮನೆಗಳು, ಜಮೀನುಗಳು ಜಲಾವೃತ

heavy-rain-continues-in-kodagu
ಕೊಡಗಿನಲ್ಲಿ ಮುಂದುವರೆದ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ಕೊಡಗು : ಒಂದೆಡೆ ಭಾರಿ ಮಳೆ, ಇನ್ನೊಂದೆಡೆ ಭಾರಿ ಮಳೆಗೆ ಕುಸಿಯುತ್ತಿರುವ ಗುಡ್ಡಗಳು, ಮತ್ತೊಂದೆಡೆ ಜಲಾವೃತಗೊಂಡಿರುವ ಮನೆ, ಜಮೀನು ಇದೆಲ್ಲ ಸದ್ಯ ಕೊಡಗು ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿರುವ ಅವಾಂತರ. ಕೊಡಗಿನಲ್ಲಿ ಮಳೆ ಮುಂದುವರೆದಿದ್ದರೆ, ಗಡಿ ಭಾಗ‌ ಚಂಬು ಗ್ರಾಮದಲ್ಲಿ‌ ಇಂದು ಮುಂಜಾನೆ ಹೊತ್ತಿನಲ್ಲಿ ಭೂಮಿ ‌ಕಂಪಿಸಿರುವುದಕ್ಕೆ ಜನ ಭಯಬೀತರಾಗಿದ್ದಾರೆ. ಅಲ್ಲದೆ ಜೋಡುಪಾಲದ ಮಂಗಳೂರು ಮುಖ್ಯ ರಸ್ತೆಯಲ್ಲಿ ಬೆಟ್ಟಕ್ಕೆ ಹೊಂದಿಕೊಂಡಂತಿರುವ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಬೆಟ್ಟದ ಮೇಲಿಂದ ಮಣ್ಣು ಕುಸಿತವಾಗಿದ್ದು, ಶಾಲೆಗೆ ರಜೆ ಇದ್ದುದರಿಂದ ಅನಾಹುತ ತಪ್ಪಿದೆ.

ಕೊಡಗಿನಲ್ಲಿ ಮುಂದುವರೆದ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ಕೊಡಗು ಗಡಿ ಭಾಗ ಮತ್ತು ಮಂಗಳೂರು ಗಡಿ ಭಾಗದ ಜೋಡುಪಾಲ ಗ್ರಾಮದಲ್ಲಿ ಜಲ ಪ್ರಳಯದ ಆತಂಕ ಸೃಷ್ಟಿಯಾಗಿದ್ದು, ರಾತ್ರಿ ಸುರಿದ ಮಳೆಗೆ ನೀರು ಮನೆಗಳಿಗೆ ನುಗ್ಗಿ ನಾಲ್ಕು ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಮನೆಯಲ್ಲಿ ಇದ್ದವರನ್ನು ಸ್ಥಳೀಯರ ಸಹಾಯದಿಂದ ರಕ್ಷಿಸಲಾಗಿದೆ. ಗಡಿ ಭಾಗದಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಬಾರಿ ಅನಾಹುತಗಳನ್ನು ಸೃಷ್ಟಿ ಮಾಡುತ್ತಿದೆ. ಹೀಗಾಗಿ ಜನರು ಭಯದಲ್ಲೇ ಜೀವನ ಸಾಗಿಸುವಂತಾಗಿದೆ.

ಜಿಲ್ಲೆಯಲ್ಲಿ ಮಳೆಯ ಅಬ್ಬರ : ಕೊಡಗಿನಲ್ಲಿ ದಾಖಲೆ ಮಟ್ಟದ ಮಳೆ 225 mm ಮಳೆಯಾಗಿದ್ದು, ಭಾಗಮಂಡಲ್ಲಿ 125 mm ಮಳೆ ದಾಖಲಾಗಿದೆ. ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆ ಸುರಿದಿದೆ.

ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು : 16017 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ನದಿ ಪಾತ್ರದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಓದಿ : ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್​​ ನೀರು ಬಿಡುಗಡೆ

ಕೊಡಗು : ಒಂದೆಡೆ ಭಾರಿ ಮಳೆ, ಇನ್ನೊಂದೆಡೆ ಭಾರಿ ಮಳೆಗೆ ಕುಸಿಯುತ್ತಿರುವ ಗುಡ್ಡಗಳು, ಮತ್ತೊಂದೆಡೆ ಜಲಾವೃತಗೊಂಡಿರುವ ಮನೆ, ಜಮೀನು ಇದೆಲ್ಲ ಸದ್ಯ ಕೊಡಗು ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿರುವ ಅವಾಂತರ. ಕೊಡಗಿನಲ್ಲಿ ಮಳೆ ಮುಂದುವರೆದಿದ್ದರೆ, ಗಡಿ ಭಾಗ‌ ಚಂಬು ಗ್ರಾಮದಲ್ಲಿ‌ ಇಂದು ಮುಂಜಾನೆ ಹೊತ್ತಿನಲ್ಲಿ ಭೂಮಿ ‌ಕಂಪಿಸಿರುವುದಕ್ಕೆ ಜನ ಭಯಬೀತರಾಗಿದ್ದಾರೆ. ಅಲ್ಲದೆ ಜೋಡುಪಾಲದ ಮಂಗಳೂರು ಮುಖ್ಯ ರಸ್ತೆಯಲ್ಲಿ ಬೆಟ್ಟಕ್ಕೆ ಹೊಂದಿಕೊಂಡಂತಿರುವ ಸರ್ಕಾರಿ ಶಾಲೆಯ ಗೋಡೆಯ ಮೇಲೆ ಬೆಟ್ಟದ ಮೇಲಿಂದ ಮಣ್ಣು ಕುಸಿತವಾಗಿದ್ದು, ಶಾಲೆಗೆ ರಜೆ ಇದ್ದುದರಿಂದ ಅನಾಹುತ ತಪ್ಪಿದೆ.

ಕೊಡಗಿನಲ್ಲಿ ಮುಂದುವರೆದ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ಕೊಡಗು ಗಡಿ ಭಾಗ ಮತ್ತು ಮಂಗಳೂರು ಗಡಿ ಭಾಗದ ಜೋಡುಪಾಲ ಗ್ರಾಮದಲ್ಲಿ ಜಲ ಪ್ರಳಯದ ಆತಂಕ ಸೃಷ್ಟಿಯಾಗಿದ್ದು, ರಾತ್ರಿ ಸುರಿದ ಮಳೆಗೆ ನೀರು ಮನೆಗಳಿಗೆ ನುಗ್ಗಿ ನಾಲ್ಕು ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಮನೆಯಲ್ಲಿ ಇದ್ದವರನ್ನು ಸ್ಥಳೀಯರ ಸಹಾಯದಿಂದ ರಕ್ಷಿಸಲಾಗಿದೆ. ಗಡಿ ಭಾಗದಲ್ಲಿ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಬಾರಿ ಅನಾಹುತಗಳನ್ನು ಸೃಷ್ಟಿ ಮಾಡುತ್ತಿದೆ. ಹೀಗಾಗಿ ಜನರು ಭಯದಲ್ಲೇ ಜೀವನ ಸಾಗಿಸುವಂತಾಗಿದೆ.

ಜಿಲ್ಲೆಯಲ್ಲಿ ಮಳೆಯ ಅಬ್ಬರ : ಕೊಡಗಿನಲ್ಲಿ ದಾಖಲೆ ಮಟ್ಟದ ಮಳೆ 225 mm ಮಳೆಯಾಗಿದ್ದು, ಭಾಗಮಂಡಲ್ಲಿ 125 mm ಮಳೆ ದಾಖಲಾಗಿದೆ. ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆ ಸುರಿದಿದೆ.

ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು : 16017 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ನದಿ ಪಾತ್ರದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

ಓದಿ : ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್​​ ನೀರು ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.