ETV Bharat / state

ಕೊಡಗಿನಲ್ಲಿ ಮೋಡ ಕವಿದ ವಾತಾವರಣ: ಕಣ್ಮರೆಯಾದ ನಾಲ್ವರಿಗೆ ತೀವ್ರ ಶೋಧ..!

author img

By

Published : Aug 10, 2020, 9:54 AM IST

ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿದ್ದ ಮಳೆ ಕಡಿಮೆಯಾಗಿದ್ದು, ತಲಕಾವೇರಿಯಲ್ಲಿ ಗುಡ್ಡ ಕುಸಿದು ಕಣ್ಮರೆಯಾದ ನಾಲ್ವರಿಗಾಗಿ ಹುಡುಕಾಟ ಚುರುಕುಗೊಂಡಿದೆ.

Intense search for the missing four
ಕಣ್ಮರೆಯಾದ ನಾಲ್ವರಿಗೆ ತೀವ್ರ ಶೋಧ

ಕೊಡಗು: ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಜನ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ.

ಕಳೆದ ಒಂದು ವಾರದಿಂದ ಧಾರಾಕಾರವಾಗಿ ‌ಸುರಿದ ಮಳೆ ಜಿಲ್ಲಾದ್ಯಂತ ಅವಾಂತರವನ್ನೇ ಸೃಷ್ಟಿಸಿದೆ. ಹಲವೆಡೆ ಭೂ ಕುಸಿತಗಳು ಸಂಭವಿಸಿದರೆ. ಕಾವೇರಿ ವ್ಯಾಪ್ತಿಯಲ್ಲಿ ಪ್ರವಾಹವೇ ಸೃಷ್ಟಿಯಾಗಿತ್ತು. ಆಗಸ್ಟ್ 5 ರಂದು‌ ತಲಕಾವೇರಿಯಲ್ಲಿ ಗುಡ್ಡ ಕುಸಿದು ಇಲ್ಲಿನ ಪ್ರಧಾನ ಅರ್ಚಕರು ಸೇರಿದಂತೆ ಐವರು ಕಣ್ಮರೆಯಾಗಿದ್ದರು.

ಕೊಡಗು ಜಿಲ್ಲೆಯಲ್ಲಿ ತಗ್ಗಿದ ವರುಣನ ಅಬ್ಬರ

ಕಳೆದ ಮೂರು ದಿನಗಳ ತೀವ್ರ ಶೋಧದ‌ ಬಳಿಕ ಎನ್‌ಡಿಆರ್‌ಎಫ್ ಸಿಬ್ಬಂದಿ ಕಣ್ಮರೆಯಾಗಿದ್ದವರಲ್ಲಿ ಒಬ್ಬರನ್ನು ‌ಪತ್ತೆ ಹೆಚ್ಚಿದ್ದರು.‌ ಮಳೆ ಕಡಿಮೆ ಇರುವುದರಿಂದ ಇನ್ನುಳಿದ ನಾಲ್ವರಿಗೆ ರಕ್ಷಣಾ ಸಿಬ್ಬಂದಿ ಹುಡುಕಾಟ ಪ್ರಾರಂಭಿಸಿವೆ.

ಕೊಡಗು: ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಜನ ಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ.

ಕಳೆದ ಒಂದು ವಾರದಿಂದ ಧಾರಾಕಾರವಾಗಿ ‌ಸುರಿದ ಮಳೆ ಜಿಲ್ಲಾದ್ಯಂತ ಅವಾಂತರವನ್ನೇ ಸೃಷ್ಟಿಸಿದೆ. ಹಲವೆಡೆ ಭೂ ಕುಸಿತಗಳು ಸಂಭವಿಸಿದರೆ. ಕಾವೇರಿ ವ್ಯಾಪ್ತಿಯಲ್ಲಿ ಪ್ರವಾಹವೇ ಸೃಷ್ಟಿಯಾಗಿತ್ತು. ಆಗಸ್ಟ್ 5 ರಂದು‌ ತಲಕಾವೇರಿಯಲ್ಲಿ ಗುಡ್ಡ ಕುಸಿದು ಇಲ್ಲಿನ ಪ್ರಧಾನ ಅರ್ಚಕರು ಸೇರಿದಂತೆ ಐವರು ಕಣ್ಮರೆಯಾಗಿದ್ದರು.

ಕೊಡಗು ಜಿಲ್ಲೆಯಲ್ಲಿ ತಗ್ಗಿದ ವರುಣನ ಅಬ್ಬರ

ಕಳೆದ ಮೂರು ದಿನಗಳ ತೀವ್ರ ಶೋಧದ‌ ಬಳಿಕ ಎನ್‌ಡಿಆರ್‌ಎಫ್ ಸಿಬ್ಬಂದಿ ಕಣ್ಮರೆಯಾಗಿದ್ದವರಲ್ಲಿ ಒಬ್ಬರನ್ನು ‌ಪತ್ತೆ ಹೆಚ್ಚಿದ್ದರು.‌ ಮಳೆ ಕಡಿಮೆ ಇರುವುದರಿಂದ ಇನ್ನುಳಿದ ನಾಲ್ವರಿಗೆ ರಕ್ಷಣಾ ಸಿಬ್ಬಂದಿ ಹುಡುಕಾಟ ಪ್ರಾರಂಭಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.