ಮಡಿಕೇರಿ: ರಶ್ಮಿಕಾ ಮಂದಣ್ಣ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿರುವ ಐಟಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾಗೆ ಸಮನ್ಸ್ ನೀಡಿದ್ದಾರೆ.
ಬೆಳಗ್ಗೆಯಿಂದ ಐಟಿ ಅಧಿಕಾರಿಗಳ 2 ತಂಡ ಪರಿಶೀಲನೆ ನಡೆಸಿದ್ದು, ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲದ 5 ಎಕರೆ ಜಾಗದಲ್ಲಿ ರೆಸಿಡೆನ್ಸಿಯಲ್ ಸ್ಕೂಲ್, ಪೆಟ್ರೋಲ್ ಬಂಕ್ ಮಾಡಲು ರಶ್ಮಿಕಾ ಕುಟುಂಬ ಮುಂದಾಗಿತ್ತು ಎಂಬ ಮಾಹಿತಿ ಐಟಿ ಅಧಿಕಾರಿಗಳಿಗೆ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.