ETV Bharat / state

ಬಸ್ ಚಾಲಕನ ನಿರ್ಲಕ್ಷ್ಯ: ಅಪ್ಪ-ಅಮ್ಮನೆದುರೇ ಪ್ರಾಣಬಿಟ್ಟ ಮಗು- ವಿಡಿಯೋ - kushalnagar bike bus accident news

ಮಡಿಕೇರಿಯಿಂದ ಮೈಸೂರು ಕಡೆ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್‌ ಚಾಲಕ ಬೈಕ್ ಬರುತ್ತಿರುವುದನ್ನು ಗಮನಿಸದೇ ಓವರ್ ಟೇಕ್ ಮಾಡಿದ ಪರಿಣಾಮ ಮಗುವೊಂದು ಬಲಿಯಾಗಿದೆ.

kodagu-baichanahalli-bike-bus-accident
ಕುಶಾಲನಗರದ ಬೈಚನಹಳ್ಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ
author img

By

Published : Dec 16, 2019, 8:23 PM IST

ಮಡಿಕೇರಿ(ಕೊಡಗು): ಬೈಕ್‌ ಹಾಗೂ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಮಗುವೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು- ಕೊಡಗು ಮುಖ್ಯರಸ್ತೆಯ ಕುಶಾಲನಗರದ ಬೈಚನಹಳ್ಳಿ ಬಳಿ ನಡೆದಿದೆ.

ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿಯ ನಿವಾಸಿ ಗೀತಾ ಮತ್ತು ಪರಮೇಶ್ ದಂಪತಿ ಗಾಯಗೊಂಡಿದ್ದು, ಅವರ ಪುತ್ರ ಪೃತ್ವಿಕ್ (3) ಸ್ಥಳದಲ್ಲೇ ಮೃತಪಟ್ಟಿದ್ದಾನೆ.‌ ಮಡಿಕೇರಿಯಿಂದ ಮೈಸೂರು ಕಡೆ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್‌ ಚಾಲಕನು ಬೈಕ್ ಬರುತ್ತಿರುವುದನ್ನು ಗಮನಿಸದೆ ಓವರ್ ಟೇಕ್ ಮಾಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗ್ತಿದೆ.

ಕುಶಾಲನಗರದ ಬೈಚನಹಳ್ಳಿ ಬಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ

ದೇವಸ್ಥಾನಕ್ಕೆ ಹೋಗಿದ್ದ ಕುಟುಂಬ ಮರಳಿ ಮನೆಗೆ ಬೈಕ್​ನಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದ್ದು, ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಆರೋಪಿಸಲಾಗಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿಕೇರಿ(ಕೊಡಗು): ಬೈಕ್‌ ಹಾಗೂ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಮಗುವೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು- ಕೊಡಗು ಮುಖ್ಯರಸ್ತೆಯ ಕುಶಾಲನಗರದ ಬೈಚನಹಳ್ಳಿ ಬಳಿ ನಡೆದಿದೆ.

ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿಯ ನಿವಾಸಿ ಗೀತಾ ಮತ್ತು ಪರಮೇಶ್ ದಂಪತಿ ಗಾಯಗೊಂಡಿದ್ದು, ಅವರ ಪುತ್ರ ಪೃತ್ವಿಕ್ (3) ಸ್ಥಳದಲ್ಲೇ ಮೃತಪಟ್ಟಿದ್ದಾನೆ.‌ ಮಡಿಕೇರಿಯಿಂದ ಮೈಸೂರು ಕಡೆ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್‌ ಚಾಲಕನು ಬೈಕ್ ಬರುತ್ತಿರುವುದನ್ನು ಗಮನಿಸದೆ ಓವರ್ ಟೇಕ್ ಮಾಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗ್ತಿದೆ.

ಕುಶಾಲನಗರದ ಬೈಚನಹಳ್ಳಿ ಬಳಿ ಬೈಕ್ ಮತ್ತು ಬಸ್ ನಡುವೆ ಅಪಘಾತ

ದೇವಸ್ಥಾನಕ್ಕೆ ಹೋಗಿದ್ದ ಕುಟುಂಬ ಮರಳಿ ಮನೆಗೆ ಬೈಕ್​ನಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದ್ದು, ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ಆರೋಪಿಸಲಾಗಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬಸ್ ಚಾಲಕನ ನಿರ್ಲಕ್ಷ್ಯ: ಸ್ಥಳದಲ್ಲೇ ಮಗು ಸಾವು

ಕೊಡಗು: ಬೈಕ್‌ ಹಾಗೂ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಮಗುವೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು- ಕೊಡಗು ಮುಖ್ಯರಸ್ತೆ ಕುಶಾಲನಗರದ ಬೈಚನಹಳ್ಳಿ ಬಳಿ ನಡೆದಿದೆ.
ಸೋಮವಾರಪೇಟೆ ತಾಲೂಕಿನ ಗೊಂದಿ ಬಸವನಹಳ್ಳಿ ಗೀತಾ ಮತ್ತು ಪರಮೇಶ್ ದಂಪತಿ ಪುತ್ರ ಪೃತ್ವಿಕ್ (3) ಮೃತ ಬಾಲಕ.‌
ಮಡಿಕೇರಿಯಿಂದ ಮೈಸೂರು ಕಡೆ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್‌ಗೆ ದೇವಸ್ಥಾನಕ್ಕೆ ಹೋಗಿ ಮನೆಗೆ ಬೈಕಿನಲ್ಲಿ
ವಾಪಸ್ ಮನೆಗೆ ಹೋಗುವಾಗ ಈ ದುರ್ಘಟನೆ ನಡೆದಿದೆ.
ಬಸ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು. Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.