ETV Bharat / state

ಕೊಡಗು ಗಡಿಯಲ್ಲಿ ಐರಾವತ ಬಸ್ ಅಪಘಾತ: ಚಾಲಕ ಸಾವು

author img

By

Published : Jul 19, 2021, 2:39 PM IST

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

KSRTC Airavata bus accident
ವಿರಾಜಪೇಟೆ ತಾಲೂಕಿನ ಪೆರಂಬಾಡಿ ಬಳಿ ಬಸ್ ಅಪಘಾತ

ಕೊಡಗು: ಕೆಎಸ್ಆರ್‌ಟಿಸಿ ಐರಾವತ ಬಸ್​ ಅಪಘಾತಕ್ಕೀಡಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೆರಂಬಾಡಿ ಬಳಿ ನಡೆದಿದೆ.

ವಿರಾಜಪೇಟೆ ತಾಲೂಕಿನ ಪೆರಂಬಾಡಿ ಬಳಿ ಬಸ್ ಅಪಘಾತ

ಬೆಂಗಳೂರು ಮೂಲದ ಸ್ವಾಮಿ ಸಾವನ್ನಪ್ಪಿದ ಚಾಲಕ. ಬೆಂಗಳೂರು ಡಿಪೋಗೆ ಸೇರಿದ ಈ ಬಸ್ ವಿರಾಜಪೇಟೆಯಿಂದ ಕೇರಳಕ್ಕೆ ಮುಂಜಾನೆ 4.30ರ ಸಮಯಕ್ಕೆ ಹೊರಟಿತ್ತು. ಪೆರಂಬಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿದೆ.

ಬಸ್​ನಲ್ಲಿದ್ದ ಪ್ರಯಾಣಿಕರಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಮತ್ತು ಕೇರಳದ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿ, ಬಸ್​ನಲ್ಲಿದ್ದ ಜನರನ್ನು ರಕ್ಷಣೆ ಮಾಡಿದೆ. ಸತತ 4 ಗಂಟೆಗಳ ಪಯತ್ನದಿಂದ ಚಾಲಕನ ಮೃತದೇಹವನ್ನು ಹೊರತೆಗೆಯಲಾಗಿದೆ.

ಕೊಡಗು: ಕೆಎಸ್ಆರ್‌ಟಿಸಿ ಐರಾವತ ಬಸ್​ ಅಪಘಾತಕ್ಕೀಡಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೆರಂಬಾಡಿ ಬಳಿ ನಡೆದಿದೆ.

ವಿರಾಜಪೇಟೆ ತಾಲೂಕಿನ ಪೆರಂಬಾಡಿ ಬಳಿ ಬಸ್ ಅಪಘಾತ

ಬೆಂಗಳೂರು ಮೂಲದ ಸ್ವಾಮಿ ಸಾವನ್ನಪ್ಪಿದ ಚಾಲಕ. ಬೆಂಗಳೂರು ಡಿಪೋಗೆ ಸೇರಿದ ಈ ಬಸ್ ವಿರಾಜಪೇಟೆಯಿಂದ ಕೇರಳಕ್ಕೆ ಮುಂಜಾನೆ 4.30ರ ಸಮಯಕ್ಕೆ ಹೊರಟಿತ್ತು. ಪೆರಂಬಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿದೆ.

ಬಸ್​ನಲ್ಲಿದ್ದ ಪ್ರಯಾಣಿಕರಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಮತ್ತು ಕೇರಳದ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿ, ಬಸ್​ನಲ್ಲಿದ್ದ ಜನರನ್ನು ರಕ್ಷಣೆ ಮಾಡಿದೆ. ಸತತ 4 ಗಂಟೆಗಳ ಪಯತ್ನದಿಂದ ಚಾಲಕನ ಮೃತದೇಹವನ್ನು ಹೊರತೆಗೆಯಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.