ಕೊಡಗು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪ ಹಂಚಿತಿಟ್ಟು ಗ್ರಾಮದಲ್ಲಿ ನಡೆದಿದೆ.
ಅವರೇಗುಂದ ಗ್ರಾಮದ ನಿವಾಸಿ ಪೆಮ್ಮಯ್ಯ (68) ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿ. ಮೂರು ದಿನಗಳಿಂದ ಕಾಣೆಯಾಗಿದ್ದ ತಮ್ಮಯ್ಯ ಅವರ ಮೃತದೇಹ ಹಂಚಿತಿಟ್ಟು ಭಾಗದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಅರಣ್ಯ ವ್ಯಾಪ್ತಿಯ ಹಂಚಿತಿಟ್ಟು ಮಾರ್ಗವಾಗಿ ಬರುತ್ತಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಪೆಮ್ಮಯ್ಯ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯರು ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ದುಬಾರೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿದ್ದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.