ETV Bharat / state

ಯಾರ ವಿರುದ್ಧವೂ ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ: ಸಚಿವ ಸುರೇಶ್ ಕುಮಾರ್

ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಡಿ.ಕೆ.ಶಿವಕುಮಾರ್​​​ ಅವರಿಗೆ ದೇವರು ಒಳ್ಳೆದು ಮಾಡಲಿ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಡಿ (ಜಾರಿ ನಿರ್ದೇಶನಾಲಯ) ದುರ್ಬಳಕೆ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

author img

By

Published : Aug 31, 2019, 3:07 PM IST

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್

ಕೊಡಗು: ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಡಿ.ಕೆ.ಶಿವಕುಮಾರ್​​​ ಅವರಿಗೆ ದೇವರು ಒಳ್ಳೆದು ಮಾಡಲಿ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಡಿ (ಜಾರಿ ನಿರ್ದೇಶನಾಲಯ) ದುರ್ಬಳಕೆ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್

ಜಿಲ್ಲೆಯ ಪ್ರಮುಖ ಹಾರಂಗಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಭೂ ಕುಸಿತಕ್ಕೆ ಸಿಲುಕಿ ಕಣ್ಮರೆಯಾಗಿರುವ 4 ಕುಟುಂಬಗಳಿಗೆ ಈಗಾಗಲೇ ತಲಾ ₹ 1 ಲಕ್ಷ ವಿತರಿಸಲಾಗಿದ್ದು, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಲಾಗುವುದು ಎಂದು ತಿಳಿಸಿದರು‌.

ನಾನೊಬ್ಬ ಬೆಂಗಳೂರಿಗನಾಗಿ ನನ್ನ ಮೇಲೆ ಕಾವೇರಿಯ ಋಣ ಸಾಕಷ್ಟಿದೆ. ಅದನ್ನು ತೀರಿಸಲು ಇದೊಂದು ಅವಕಾಶ ಸಿಕ್ಕಿದೆ. ಜಲಾಶಯ ಭರ್ತಿಯಾಗಿ ಈ ಭಾಗದ ರೈತರಿಗೆ ನೆಮ್ಮದಿಯ ಬದುಕು ಸಿಗಲಿ. ಜಲಾಶಯದಲ್ಲಿ ಸಾಕಷ್ಟು ಹೂಳು ತುಂಬಿದೆ. ಡಿಸೆಂಬರ್ ನಂತರ ಜಲಾಶಯದಲ್ಲಿ ತುಂಬಿರುವ ಹೂಳನ್ನು ಮೇಲೆತ್ತಲು ನಿರ್ಧರಿಸಿದ್ದೇವೆ ‌ಎಂದರು‌.

ಪದೇ ಪದೇ ಜಿಲ್ಲೆಯಲ್ಲಿ ಆಗುತ್ತಿರುವ ಭೂ ಕುಸಿತ ಹಾಗೂ ಪ್ರವಾಹದ ಬಗ್ಗೆ ಅಧ್ಯಯನ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದೇನೆ. ಅಲ್ಲದೆ ಎತ್ತರ ಹಾಗೂ ಸುರಕ್ಷಿತವಲ್ಲದ ಪ್ರದೇಶಗಳಲ್ಲಿ ವಾಸಿಸುತ್ತಿರುವವರ ಶಾಶ್ವತ ಸ್ಥಳಾಂತರಕ್ಕೆ ಚಿಂತಿಸಿದ್ದೇವೆ‌ ಎಂದರು.

ಕೊಡಗು: ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಡಿ.ಕೆ.ಶಿವಕುಮಾರ್​​​ ಅವರಿಗೆ ದೇವರು ಒಳ್ಳೆದು ಮಾಡಲಿ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಡಿ (ಜಾರಿ ನಿರ್ದೇಶನಾಲಯ) ದುರ್ಬಳಕೆ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್

ಜಿಲ್ಲೆಯ ಪ್ರಮುಖ ಹಾರಂಗಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಭೂ ಕುಸಿತಕ್ಕೆ ಸಿಲುಕಿ ಕಣ್ಮರೆಯಾಗಿರುವ 4 ಕುಟುಂಬಗಳಿಗೆ ಈಗಾಗಲೇ ತಲಾ ₹ 1 ಲಕ್ಷ ವಿತರಿಸಲಾಗಿದ್ದು, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಲಾಗುವುದು ಎಂದು ತಿಳಿಸಿದರು‌.

ನಾನೊಬ್ಬ ಬೆಂಗಳೂರಿಗನಾಗಿ ನನ್ನ ಮೇಲೆ ಕಾವೇರಿಯ ಋಣ ಸಾಕಷ್ಟಿದೆ. ಅದನ್ನು ತೀರಿಸಲು ಇದೊಂದು ಅವಕಾಶ ಸಿಕ್ಕಿದೆ. ಜಲಾಶಯ ಭರ್ತಿಯಾಗಿ ಈ ಭಾಗದ ರೈತರಿಗೆ ನೆಮ್ಮದಿಯ ಬದುಕು ಸಿಗಲಿ. ಜಲಾಶಯದಲ್ಲಿ ಸಾಕಷ್ಟು ಹೂಳು ತುಂಬಿದೆ. ಡಿಸೆಂಬರ್ ನಂತರ ಜಲಾಶಯದಲ್ಲಿ ತುಂಬಿರುವ ಹೂಳನ್ನು ಮೇಲೆತ್ತಲು ನಿರ್ಧರಿಸಿದ್ದೇವೆ ‌ಎಂದರು‌.

ಪದೇ ಪದೇ ಜಿಲ್ಲೆಯಲ್ಲಿ ಆಗುತ್ತಿರುವ ಭೂ ಕುಸಿತ ಹಾಗೂ ಪ್ರವಾಹದ ಬಗ್ಗೆ ಅಧ್ಯಯನ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದೇನೆ. ಅಲ್ಲದೆ ಎತ್ತರ ಹಾಗೂ ಸುರಕ್ಷಿತವಲ್ಲದ ಪ್ರದೇಶಗಳಲ್ಲಿ ವಾಸಿಸುತ್ತಿರುವವರ ಶಾಶ್ವತ ಸ್ಥಳಾಂತರಕ್ಕೆ ಚಿಂತಿಸಿದ್ದೇವೆ‌ ಎಂದರು.

Intro:ಯಾರ ವಿರುದ್ಧವೂ ನಾವು ದ್ವೇಷದ ಸಾಧಿಸುತ್ತಿಲ್ಲ: ಸಚಿವ ಸುರೇಶ್ ಕುಮಾರ್

ಕೊಡಗು: ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡ್ತಿಲ್ಲ. ಡಿ‌.ಕೆ‌.ಶಿವಕುಮಾರ್‌ ಅವರಿಗೆ ದೇವರು ಒಳ್ಳೆದು ಮಾಡಲಿ ಅಂತಾ ನಾವೂ ಬಯಸುತ್ತೇವೆ ಎಂದು ಬಿಜೆಪಿ ಅವರು ಇಡಿ ದುರ್ಬಳಕೆ ಮಾಡಿಕೊಳ್ತಿದ್ದಾರೆ ಎನ್ನುವ ಆರೋಪಕ್ಕೆ ಸಚಿವ ಎಸ್‌.ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಭಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.ವಿರಾಜಪೇಟೆ ತಾಲೂಕಿನ ತೋರಾ ಗ್ರಾಮದಲ್ಲಿ ಭೂಕುಸಿತಕ್ಕೆ ಸಿಲುಕಿ ಕಣ್ಮರೆಯಾಗಿರುವ 4 ಕುಟುಂಬಗಳಿಗೆ ಈಗಾಗಲೇ ತಲಾ ಒಂದೊಂದು ಲಕ್ಷ ವಿತರಿಸಲಾಗಿದ್ದು, ಇನ್ನೂ ಅಗತ್ಯವಿದ್ದರೆ ಜಿಲ್ಲಾಡಳಿತಕ್ಕೆ ಅನುಮೋದನೆ ಸಲ್ಲಿಸಲು ಕೋರಿದ್ದೇವೆ.ಇಷ್ಟು ದಿನಗಳಾದರೂ ಕಣ್ಮರೆ ಆದವರು ಸಿಗದ ಹಿನ್ನಲೆಯಲ್ಲಿ ಇದನ್ನು ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಲಾಗುವುದು ಎಂದು ತಿಳಿಸಿದರು‌.

ಇವತ್ತು ನನಗೆ ಬಹಳ ಸಂತೋಷ ಆಗ್ತಿ್ರದೆ.ನಾನೊಬ್ಬ ಬೆಂಗಳೂರಿಗನಾಗಿ ನನ್ನ ಮೇಲೆ ಕಾವೇರಿಯ ಋಣ ಸಾಕಷ್ಡಿದೆ.ಅದನ್ನು ತೀರಿಸಲು ಇದೊಂದು ಅವಕಾಶ ಸಿಕ್ಕಿದೆ. ಜಲಾಶಯ ಭರ್ತಿಯಾಗಿ ಈ ಭಾಗದ ರೈತರಿಗೆ ನೆಮ್ಮದಿಯ ಬದುಕು ಸಿಗಲಿ. ಆಗಸ್ಟ್‌ನಲ್ಲಿ 4 ರಂದು ಕೆ‌ಆರ್‌ಎಸ್ ಜಲಾಶಯ ಕೇವಲ 84 ಅಡಿ ತುಂಬಿತ್ತು.ತದ ನಂತರ ಕೇವಲ ಒಂದು ವಾರದಲ್ಲಿ 45 ಅಡಿಗಳಷ್ಟು ಬಂದು ಭರ್ತಿಯಾಯಿತು.ಆ ಪರಿಸ್ಥಿತಿಯಲ್ಲಿ ಕೊಡಗಿನ ಜನತೆ ಸಂಕಷ್ಟ ಅನುಭವಿಸಬೇಕಾಯಿತು.ಅದು ಬಹಳಷ್ಟು ಜನಕ್ಕೆ ಅರ್ಥವಾಗಲ್ಲ ಎಂದರು.

ಜಲಾಶಯದಲ್ಲಿ ಸಾಕಷ್ಟು ಹೂಳು ತುಂಬಿದೆ.ಡಿಸೆಂಬರ್ ನಂತರ ಜಲಾಶಯದಲ್ಲಿ ತುಂಬಿರುವ ಹೂಳನ್ನು ಮೇಲೆತ್ತಲು ನಿರ್ಧರಿಸಿದ್ದೇವೆ‌. ಈ ಭಾಗದಲ್ಲಿ ಸಂಪೂರ್ಣ ಹೂಳೆತ್ತಿ ಜಲಾಶಯಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳುವ ಕಾಮಗಾರಿ ಮಾಡುತ್ತೇವೆ ಎಂದರು‌.

ಸಿದ್ದರಾಮಯ್ಯ ಅವರು ಬಹಳ ದೊಡ್ಡವರು ಶಾಸಕಾಂಗ ಪಕ್ಷದ ನಾಯಕರಾಗಿ ಅವರ ದಾಟಿಯಲ್ಲಿ ಹೇಳಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಈಗಾಗಲೇ ಹಾನಿ ಕುರಿತ ಸಂಪೂರ್ಣ ವಿವರವನ್ನು ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದಾರೆ‌. ಅಲ್ಲದೆ ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಕೂಡ ವರದಿ ನೀಡಿದ್ದಾರೆ‌. ಇತ್ತೀಚೆಗೆ ಕೇಂದ್ರ ತಂಡವೂ ವರದಿ ನೀಡಿದ್ದು ರಾಜ್ಯಕ್ಕೆ ಮೋದಿ ಅವರು ಬಂದಾಗ ರಾಜ್ಯದ ಸಂಸದರು ನಾವೆಲ್ಲ ಅನುದಾನ ಬಿಡುಗಡೆಗೆ ಒತ್ತಾಯಿಸುತ್ತೇವೆ‌. ಬಿಡುಗಡೆ ಮಾಡುತ್ತಾರೆ ಎಂಬ ವಿಶ್ವಾಸವೂ ಇದೆ. ಈಗಾಗಲೇ 132 ಕೋಟಿ ಬಿಡುಗಡೆಯಾಗಿದ್ದು, ಉಳಿದ ಹಣಕ್ಕೆ ಇವತ್ತು ಕೇಂದ್ರ ಹಣಕಾಸು ಇಲಾಖೆಯಿಂದ ಆಡಳಿತಾತ್ಮಕ ಅನುಮೋದನೆ ದೊರೆಯಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು‌.

ಪದೇಪದೇ ಜಿಲ್ಲೆಯಲ್ಲಿ ಆಗುತ್ತಿರುವ ಭೂಕುಸಿತ ಹಾಗೂ ಪ್ರವಾಹದ ಬಗ್ಗೆ ಅಧ್ಯಯನ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದ್ದೇನೆ. ಅಲ್ಲದೆ ಎತ್ತರ ಹಾಗೂ ಸುರಕ್ಷಿತವಲ್ಲದ ಪ್ರದೇಶಗಳಲ್ಲಿ ವಾಸಿಸುತ್ತಿರುವವರ ಶಾಶ್ವತ ಸ್ಥಳಾಂತರಕ್ಕೆ ಚಿಂತಿಸಿದ್ದೇವೆ‌.ಈಗಾಗಲೇ ಸಂತ್ರಸ್ತರಿಗೆ ವಿವಿಧೆಡೆ ನಿರ್ಮಿಸುತ್ತಿರುವ ಆಶ್ರಯ ಮನೆಗಳನ್ನು ಶೀರ್ಘದಲ್ಲೇ ಹಸ್ತಾಂತರಿಸುತ್ತೇವೆ ಎಂದರು.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು‌. Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.