ETV Bharat / state

ಕೆರೆಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ

author img

By

Published : Jul 20, 2020, 11:14 AM IST

ವ್ಯಕ್ತಿಯೋರ್ವ ಮನೆಯಿಂದ ತೆರಳಿ ಕೆರೆಯುಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.

suicide
ಆತ್ಮಹತ್ಯೆ

ವಿರಾಜಪೇಟೆ (ಕೊಡಗು): ಮನೆಯಿಂದ ತೆರಳಿದ್ದ ವ್ಯಕ್ತಿ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲೂಕಿನ ಅರ್ಜಿ ಕಿರುಮಕ್ಕಿಯಲ್ಲಿ ಎಂಬಲ್ಲಿ ನಡೆದಿದೆ.

ತರ್ಮೆಕಾಡು ಪೈಸಾರಿಯ ನಿವಾಸಿಯಾದ 38 ವರ್ಷದ ವೈ.ಎನ್.ರವಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ನಾಲ್ಕು ವರ್ಷಗಳ ಹಿಂದೆ ಪತ್ನಿ ಮತ್ತು ಮಗು ಮೃತಪಟ್ಟಿದ್ದರು. ಇದರಿಂದ ನೊಂದ ಆತ ಮನೆಯನ್ನು ತ್ಯಜಿಸಿ ಹಾಲುಗುಂದ ಗ್ರಾಮದ ಕಾಫಿ ತೋಟದಲ್ಲಿ ದುಡಿಯುತ್ತಿದ್ದ ಎನ್ನಲಾಗಿದೆ.

ಕಳೆದ ಹದಿನಾಲ್ಕು ದಿನಗಳ ಹಿಂದೆ ಮನೆಗೆ ಅಗಮಿಸಿದ್ದು, ತಾಯಿಯನ್ನು ಮಾತನಾಡಿಸಿ ತೆರಳಿದ್ದ. ಕಿರುಮಕ್ಕಿ ಗ್ರಾಮದ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಗ್ರಾಮಸ್ಥರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಗುರುತು ಇಲ್ಲದ ಸ್ಥಿತಿಯಲ್ಲಿಯೇ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬಸ್ಥರು ಮೃತನ ಅಂಗಿಯನ್ನು ಆಧರಿಸಿ ಶವವನ್ನು ಗುರುತಿಸಿದ್ದು, ಶವವನ್ನು ಹಸ್ತಾಂತರ ಮಾಡಲಾಗಿದೆ. ವಿರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿರಾಜಪೇಟೆ (ಕೊಡಗು): ಮನೆಯಿಂದ ತೆರಳಿದ್ದ ವ್ಯಕ್ತಿ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲೂಕಿನ ಅರ್ಜಿ ಕಿರುಮಕ್ಕಿಯಲ್ಲಿ ಎಂಬಲ್ಲಿ ನಡೆದಿದೆ.

ತರ್ಮೆಕಾಡು ಪೈಸಾರಿಯ ನಿವಾಸಿಯಾದ 38 ವರ್ಷದ ವೈ.ಎನ್.ರವಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ನಾಲ್ಕು ವರ್ಷಗಳ ಹಿಂದೆ ಪತ್ನಿ ಮತ್ತು ಮಗು ಮೃತಪಟ್ಟಿದ್ದರು. ಇದರಿಂದ ನೊಂದ ಆತ ಮನೆಯನ್ನು ತ್ಯಜಿಸಿ ಹಾಲುಗುಂದ ಗ್ರಾಮದ ಕಾಫಿ ತೋಟದಲ್ಲಿ ದುಡಿಯುತ್ತಿದ್ದ ಎನ್ನಲಾಗಿದೆ.

ಕಳೆದ ಹದಿನಾಲ್ಕು ದಿನಗಳ ಹಿಂದೆ ಮನೆಗೆ ಅಗಮಿಸಿದ್ದು, ತಾಯಿಯನ್ನು ಮಾತನಾಡಿಸಿ ತೆರಳಿದ್ದ. ಕಿರುಮಕ್ಕಿ ಗ್ರಾಮದ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಗ್ರಾಮಸ್ಥರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಗುರುತು ಇಲ್ಲದ ಸ್ಥಿತಿಯಲ್ಲಿಯೇ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬಸ್ಥರು ಮೃತನ ಅಂಗಿಯನ್ನು ಆಧರಿಸಿ ಶವವನ್ನು ಗುರುತಿಸಿದ್ದು, ಶವವನ್ನು ಹಸ್ತಾಂತರ ಮಾಡಲಾಗಿದೆ. ವಿರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.