ತಲಕಾವೇರಿ(ಕೊಡಗು) : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಇಂದು, ನಾಳೆ ಎರಡೇ ದಿನದಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಎನ್ಡಿಆರ್ಎಫ್ ತಂಡದ ಜೊತೆಗೆ ಎಸ್ಡಿಆರ್ಎಫ್ ತಂಡಗಳನ್ನು ಬಳಸಿಕೊಂಡು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಬೇಕು. ಆ ಮೂಲಕ ಎರಡೇ ದಿನದಲ್ಲಿ ಕಾರ್ಯಚರಣೆ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳದಲ್ಲಿ ಈಗಾಗಲೇ 20 ಜನರ ಎನ್ಡಿಆರ್ಎಫ್ ತಂಡ ಮತ್ತು 20 ಜನರ ಎಸ್ಡಿಆರ್ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಕೆಲಸ ತಡವಾಗಬಹುದು. ಇದರಿಂದ ಬೇರೆಯ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಇರುವ ಎಲ್ಲಾ ಫೋರ್ಸ್ಗಳನ್ನು ಬಳಸಿಕೊಂಡು ಕಾರ್ಯಾಚರಣೆಯನ್ನು ಆದಷ್ಟು ಬೇಗ ಮುಗಿಸುವಂತೆ ಸೂಚಿಸಿದರು.
ಉಸ್ತುವಾರಿ ಸಚಿವ ವಿ.ಸೋಮಣ್ಣ ಕಾರ್ಯಾಚರಣೆ ತೀವ್ರಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲು ಸಿದ್ದ. ಒಟ್ಟಿನಲ್ಲಿ ಕಾರ್ಯಾಚರಣೆಯನ್ನು ಬೇಗ ಮುಗಿಸಿ ಎಂದ್ರು. ಇದೇ ವೇಳೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ ಸಿಂಹ ಇದ್ದರು.