ETV Bharat / state

ಬೆಟ್ಟ ಕುಸಿದ ಸ್ಥಳಕ್ಕೆ ಜನಪ್ರತಿನಿಧಿಗಳಿಂದ ಭೇಟಿ: 2 ದಿನದಲ್ಲಿ ಕಾರ್ಯಾಚರಣೆ ಮುಗಿಸಲು ಸೂಚನೆ - ತಲಕಾವೆರಿಗೆ ಆರ್ ಅಶೋಕ್ ಭೇಟಿ

ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವವರನ್ನು ಹುಡುಕುವ ಕೆಲಸ ಎರಡೇ ದಿನದಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್​.ಅಶೋಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

R Ashok visits hill collapsed spot in Talakaver
ಬೆಟ್ಟ ಕುಸಿದ ಸ್ಥಳಕ್ಕೆ ಜನಪ್ರತಿನಿಧಿಗಳು ಭೇಟಿ
author img

By

Published : Aug 9, 2020, 2:55 PM IST

ತಲಕಾವೇರಿ(ಕೊಡಗು) : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಇಂದು, ನಾಳೆ ಎರಡೇ ದಿನದಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಎನ್‌ಡಿಆರ್​ಎಫ್ ತಂಡದ ಜೊತೆಗೆ ಎಸ್‌ಡಿಆರ್‌ಎಫ್ ತಂಡಗಳನ್ನು ಬಳಸಿಕೊಂಡು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಬೇಕು. ಆ ಮೂಲಕ ಎರಡೇ ದಿನದಲ್ಲಿ ಕಾರ್ಯಚರಣೆ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಟ್ಟ ಕುಸಿದ ಸ್ಥಳಕ್ಕೆ ಜನಪ್ರತಿನಿಧಿಗಳು ಭೇಟಿ

ಸ್ಥಳದಲ್ಲಿ ಈಗಾಗಲೇ 20 ಜನರ ಎನ್​ಡಿಆರ್​ಎಫ್ ತಂಡ ಮತ್ತು 20 ಜನರ ಎಸ್​ಡಿಆರ್​ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಕೆಲಸ ತಡವಾಗಬಹುದು. ಇದರಿಂದ ಬೇರೆಯ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಇರುವ ಎಲ್ಲಾ ಫೋರ್ಸ್​ಗಳನ್ನು ಬಳಸಿಕೊಂಡು ಕಾರ್ಯಾಚರಣೆಯನ್ನು ಆದಷ್ಟು ಬೇಗ ಮುಗಿಸುವಂತೆ ಸೂಚಿಸಿದರು.

ಉಸ್ತುವಾರಿ ಸಚಿವ ವಿ.ಸೋಮಣ್ಣ ಕಾರ್ಯಾಚರಣೆ ತೀವ್ರಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲು ಸಿದ್ದ. ಒಟ್ಟಿನಲ್ಲಿ ಕಾರ್ಯಾಚರಣೆಯನ್ನು ಬೇಗ ಮುಗಿಸಿ ಎಂದ್ರು. ಇದೇ ವೇಳೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ ಸಿಂಹ ಇದ್ದರು.

ತಲಕಾವೇರಿ(ಕೊಡಗು) : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಇಂದು, ನಾಳೆ ಎರಡೇ ದಿನದಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಎನ್‌ಡಿಆರ್​ಎಫ್ ತಂಡದ ಜೊತೆಗೆ ಎಸ್‌ಡಿಆರ್‌ಎಫ್ ತಂಡಗಳನ್ನು ಬಳಸಿಕೊಂಡು ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಬೇಕು. ಆ ಮೂಲಕ ಎರಡೇ ದಿನದಲ್ಲಿ ಕಾರ್ಯಚರಣೆ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಟ್ಟ ಕುಸಿದ ಸ್ಥಳಕ್ಕೆ ಜನಪ್ರತಿನಿಧಿಗಳು ಭೇಟಿ

ಸ್ಥಳದಲ್ಲಿ ಈಗಾಗಲೇ 20 ಜನರ ಎನ್​ಡಿಆರ್​ಎಫ್ ತಂಡ ಮತ್ತು 20 ಜನರ ಎಸ್​ಡಿಆರ್​ಎಫ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಕೆಲಸ ತಡವಾಗಬಹುದು. ಇದರಿಂದ ಬೇರೆಯ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಇರುವ ಎಲ್ಲಾ ಫೋರ್ಸ್​ಗಳನ್ನು ಬಳಸಿಕೊಂಡು ಕಾರ್ಯಾಚರಣೆಯನ್ನು ಆದಷ್ಟು ಬೇಗ ಮುಗಿಸುವಂತೆ ಸೂಚಿಸಿದರು.

ಉಸ್ತುವಾರಿ ಸಚಿವ ವಿ.ಸೋಮಣ್ಣ ಕಾರ್ಯಾಚರಣೆ ತೀವ್ರಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲು ಸಿದ್ದ. ಒಟ್ಟಿನಲ್ಲಿ ಕಾರ್ಯಾಚರಣೆಯನ್ನು ಬೇಗ ಮುಗಿಸಿ ಎಂದ್ರು. ಇದೇ ವೇಳೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ಸಂಸದ ಪ್ರತಾಪ್ ಸಿಂಹ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.