ETV Bharat / state

ಮಕ್ಕಳ ಮನವಿಗೆ ಸ್ವತಃ ಪೌರಾಯುಕ್ತರೇ ಮಣಿದರು.. ಯಾಕಂದ್ರೆ,, - ಮಡಿಕೇರಿಯ ಗೌಳಿಬೀದಿ ರಸ್ತೆ ದುರಸ್ತಿ ವೀಕ್ಷಿಸಿದ ಪೌರಾಯುಕ್ತ

ಮಕ್ಕಳ ಮನವಿಗೆ ಮಣಿದ ಪೌರಾಯುಕ್ತ ರಮೇಶ್ ಅವರು, ಇತರ ಅಧಿಕಾರಿಗಳೊಂದಿಗೆ ತೆರಳಿ ಹದಗೆಟ್ಟ ರಸ್ತೆ ಪರಿಶೀಲಿಸಿದರು. ಮುಂದಿನ ಹದಿನೈದು ದಿನಗಳೊಳಗೆ ದುರಸ್ಥಿ ಕಾರ್ಯ ಕೈಗೊಳ್ಳುವ ಭರವಸೆ ನೀಡಿದರು.

ಮಡಿಕೇರಿಯ ಗೌಳಿಬೀದಿ ರಸ್ತೆ ದುರಸ್ತಿ ವೀಕ್ಷಿಸಿದ ಪೌರಾಯುಕ್ತ, Madikeri Gaulabidi road repairy promised
ಮಕ್ಕಳ ಮನವಿಗೆ ಮಣಿದ ಪೌರಾಯುಕ್ತರು
author img

By

Published : Jan 18, 2020, 5:57 PM IST

ಮಡಿಕೇರಿ: ಗುಂಡಿ ಬಿದ್ದಿರುವ ಮಡಿಕೇರಿ ನಗರದ ರಸ್ತೆಗಳ ದುರಸ್ಥಿ ಕಾರ್ಯದ ಬಗ್ಗೆ ಮಕ್ಕಳು ನಗರಸಭಾ ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿದರು. ಮಕ್ಕಳ ಮನವಿಗೆ ಮಣಿದ ಪೌರಾಯುಕ್ತ ರಮೇಶ್, ಗೌಳಿಬೀದಿ ರಸ್ತೆ ಪರಿಶೀಲಿಸಿ ಮುಂದಿನ 15 ದಿನದೊಳಗೆ ದುರಸ್ಥಿ ಕಾರ್ಯ ಕೈಗೊಳ್ಳುವ ಭರವಸೆ ನೀಡಿದರು.

ಮಕ್ಕಳ ಮನವಿಗೆ ಮಣಿದ ಪೌರಾಯುಕ್ತರು..

ವಿವಿಧ ಸಂಘ, ಸಂಸ್ಥೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರೂ ಅಧಿಕಾರಗಳು ಕ್ಯಾರೇ ಅಂದಿರಲಿಲ್ಲ. ಇದರಿಂದಾಗಿ ಗೌಳಿ ಬೀದಿಯ ವಿದ್ಯಾರ್ಥಿಗಳು ಸ್ವತಃ ತಾವೇ ಅಧಿಕಾರಿಗಳನ್ನು ಎಚ್ಚರಿಸುವ ಕಾರ್ಯಕ್ಕೆ ಇಂದು ಮುಂದಾದರು. ಪೌರಾಯುಕ್ತರ ಕಚೇರಿಗೆ ತೆರಳಿದ 10ಕ್ಕೂ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿ ಗೌಳಿಬೀದಿಯ ಕಲ್ಪವೃಕ್ಷ ಕಟ್ಟಡ ವ್ಯಾಪ್ತಿಯ ಒಳ ರಸ್ತೆಯನ್ನು ದುರಸ್ಥಿ ಪಡಿಸುವಂತೆ ಒತ್ತಾಯಿಸಿದರು. ಸ್ಥಳ ಪರಿಶೀಲನೆ ನಡೆಸುವಂತೆ ಮನವಿ ಮಾಡಿದರು.

ಮಕ್ಕಳ ಮನವಿಗೆ ಮಣಿದ ಪೌರಾಯುಕ್ತ ರಮೇಶ್ ಅವರು, ಇತರ ಅಧಿಕಾರಿಗಳೊಂದಿಗೆ ತೆರಳಿ ಹದಗೆಟ್ಟ ರಸ್ತೆ ಪರಿಶೀಲಿಸಿದರು. ಮುಂದಿನ ಹದಿನೈದು ದಿನಗಳೊಳಗೆ ದುರಸ್ಥಿ ಕಾರ್ಯ ಕೈಗೊಳ್ಳುವ ಭರವಸೆ ನೀಡಿದರು.

ಮಡಿಕೇರಿ: ಗುಂಡಿ ಬಿದ್ದಿರುವ ಮಡಿಕೇರಿ ನಗರದ ರಸ್ತೆಗಳ ದುರಸ್ಥಿ ಕಾರ್ಯದ ಬಗ್ಗೆ ಮಕ್ಕಳು ನಗರಸಭಾ ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿದರು. ಮಕ್ಕಳ ಮನವಿಗೆ ಮಣಿದ ಪೌರಾಯುಕ್ತ ರಮೇಶ್, ಗೌಳಿಬೀದಿ ರಸ್ತೆ ಪರಿಶೀಲಿಸಿ ಮುಂದಿನ 15 ದಿನದೊಳಗೆ ದುರಸ್ಥಿ ಕಾರ್ಯ ಕೈಗೊಳ್ಳುವ ಭರವಸೆ ನೀಡಿದರು.

ಮಕ್ಕಳ ಮನವಿಗೆ ಮಣಿದ ಪೌರಾಯುಕ್ತರು..

ವಿವಿಧ ಸಂಘ, ಸಂಸ್ಥೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರೂ ಅಧಿಕಾರಗಳು ಕ್ಯಾರೇ ಅಂದಿರಲಿಲ್ಲ. ಇದರಿಂದಾಗಿ ಗೌಳಿ ಬೀದಿಯ ವಿದ್ಯಾರ್ಥಿಗಳು ಸ್ವತಃ ತಾವೇ ಅಧಿಕಾರಿಗಳನ್ನು ಎಚ್ಚರಿಸುವ ಕಾರ್ಯಕ್ಕೆ ಇಂದು ಮುಂದಾದರು. ಪೌರಾಯುಕ್ತರ ಕಚೇರಿಗೆ ತೆರಳಿದ 10ಕ್ಕೂ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿ ಗೌಳಿಬೀದಿಯ ಕಲ್ಪವೃಕ್ಷ ಕಟ್ಟಡ ವ್ಯಾಪ್ತಿಯ ಒಳ ರಸ್ತೆಯನ್ನು ದುರಸ್ಥಿ ಪಡಿಸುವಂತೆ ಒತ್ತಾಯಿಸಿದರು. ಸ್ಥಳ ಪರಿಶೀಲನೆ ನಡೆಸುವಂತೆ ಮನವಿ ಮಾಡಿದರು.

ಮಕ್ಕಳ ಮನವಿಗೆ ಮಣಿದ ಪೌರಾಯುಕ್ತ ರಮೇಶ್ ಅವರು, ಇತರ ಅಧಿಕಾರಿಗಳೊಂದಿಗೆ ತೆರಳಿ ಹದಗೆಟ್ಟ ರಸ್ತೆ ಪರಿಶೀಲಿಸಿದರು. ಮುಂದಿನ ಹದಿನೈದು ದಿನಗಳೊಳಗೆ ದುರಸ್ಥಿ ಕಾರ್ಯ ಕೈಗೊಳ್ಳುವ ಭರವಸೆ ನೀಡಿದರು.

Intro:ಮಕ್ಕಳ ಮನವಿಗೆ ಮಣಿದ ಪೌರಾಯುಕ್ತ : ಗೌಳಿಬೀದಿ ರಸ್ತೆ ದುರಸ್ತಿಯ ಭರವಸೆ

ಕೊಡಗು/ಮಡಿಕೇರಿ: ಗುಂಡಿ ಬಿದ್ದಿರುವ ಮಡಿಕೇರಿ ನಗರದ ರಸ್ತೆಗಳ ದುರಸ್ತಿ ಕಾರ್ಯದ ಬಗ್ಗೆ ನಾಗರೀಕ ವಲಯದಲ್ಲಿ ಸಂಶಯಗಳು ಮೂಡಿರುವ ಬೆನ್ನಲ್ಲೇ ಸಮಸ್ಯೆಯಿಂದ ಬೇಸತ್ತ ಮಕ್ಕಳು ಖುದ್ದು ನಗರಭಾ ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿದ ಪ್ರಸಂಗ ನಡೆಯಿತು.
ಮಕ್ಕಳ ಮನವಿಗೆ ಮಣಿದ ಪೌರಾಯುಕ್ತ ರಮೇಶ್ ಅವರು ಗೌಳಿಬೀದಿ ರಸ್ತೆಯನ್ನು ಪರಿಶೀಲಿಸಿ ಮುಂದಿನ ಹದಿನೈದು ದಿನಗಳೊಳಗೆ ದುರಸ್ತಿ ಕಾರ್ಯ ಕೈಗೊಳ್ಳುವ ಭರವಸೆ ನೀಡಿದರು.ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳ ದರ್ಬಾರ್‌ನಲ್ಲಿ ಕಾಲ ಕಳೆಯುತ್ತಿರುವ ನಗರಸಭೆಯ ನಿರ್ಲಕ್ಷ್ಯದಿಂದ ನಗರದ ರಸ್ತೆಗಳೆಲ್ಲ ಹದಗೆಟ್ಟು ಅದೆಷ್ಟೂ ತಿಂಗಳುಗಳೇ ಕಳೆದಿದ್ದರೂ ದುರಸ್ತಿ ಕಾರ್ಯಕ್ಕೆ ಮಾತ್ರ ಇನ್ನೂ ಕಾಲ ಕೂಡಿ ಬಂದಿಲ್ಲ. ವಿವಿಧ ಸಂಘ, ಸಂಸ್ಥೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದರೂ ನಿದ್ರಾವಸ್ಥೆಯಿಂದ ನಗರಸಭೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ.
ಖುದ್ದು ಜಿಲ್ಲಾಧಿಕಾರಿಗಳೇ ನಗರಸಭೆಯ ಆಡಳಿತಾಧಿಕಾರಿಯಾಗಿದ್ದರೂ ರಸ್ತೆಗಳ ಗುಂಡಿಗಳಿಗೆ ಮುಕ್ತಿ ದೊರೆತ್ತಿಲ್ಲ.ಹಳ್ಳ, ಕೊಳ್ಳಗಳಾದ ರಸ್ತೆಗಳಿಂದ ವಾಹನ ಚಾಲಕರು ಹಾಗೂ ಪಾದಾಚಾರಿಗಳು ಪರದಾಡುತ್ತಲೇ ಇದ್ದಾರೆ. ಯಾರ ಮಾತಿಗೂ ನಗರಸಭೆಯ ಅಧಿಕಾರಿಗಳು ಬೆಲೆ ನೀಡುತ್ತಿಲ್ಲವೆಂದು ಮನಗಂಡ ಗೌಳಿ ಬೀದಿಯ ವಿದ್ಯಾರ್ಥಿಗಳು ತಾವೇ ಅಧಿಕಾರಿಗಳನ್ನು ಎಚ್ಚರಿಸುವ ಕಾರ್ಯಕ್ಕೆ ಇಂದು ಮುಂದಾದರು. ಪೌರಾಯುಕ್ತರ ಕಚೇರಿಗೆ ತೆರಳಿದ ಹತ್ತಕ್ಕೂ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿ ಗೌಳಿಬೀದಿಯ ಕಲ್ಪವೃಕ್ಷ ಕಟ್ಟಡ ವ್ಯಾಪ್ತಿಯ ಒಳ ರಸ್ತೆಯನ್ನು ದುರಸ್ತಿ ಪಡಿಸುವಂತೆ ಒತ್ತಾಯಿಸಿದರು. ಸ್ಥಳ ಪರಿಶೀಲನೆ ನಡೆಸುವಂತೆ ಮನವಿ ಮಾಡಿದರು. ಮಕ್ಕಳ ಮನವಿಗೆ ಮಣಿದ ಪೌರಾಯುಕ್ತ ರಮೇಶ್ ಅವರು ಇತರ ಅಧಿಕಾರಿಗಳೊಂದಿಗೆ ತೆರಳಿ ಹದಗೆಟ್ಟ ರಸ್ತೆಯನ್ನು ಪರಿಶೀಲಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.
Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.