ETV Bharat / state

ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿಗೆ ಏಣಿ ತಗುಲಿ ಮೂವರು ದುರ್ಮರಣ

author img

By

Published : Apr 1, 2019, 3:59 PM IST

ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಏಣಿ ವಿದ್ಯುತ್ ತಂತಿಗೆ ತಗುಲಿ ಮೂವರು ಸಾವು- ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ತೋಟದ ಮಾಲೀಕರಲ್ಲಿ ಒತ್ತಾಯ. ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಮೂವರು ಮೃತ

ಕೊಡಗು: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಮರವೇರಲು ಬಳಸಿದ್ದ ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿ ಮೂವರು ಮೃತಪಟ್ಟ ಘಟನೆ ಗೋಣಿಕೊಪ್ಪಲು ಬಳಿ ಅರ್ವತೋಕ್ಲು ಗ್ರಾಮದಲ್ಲಿ ನಡೆದಿದೆ.

ಅರ್ವತೋಕ್ಲು ಗ್ರಾಮದ ರಾಮಜಮ್ಮ ಎಂಬುವವರ ತೋಟದಲ್ಲಿ ತೆಂಗಿನಕಾಯಿ ಕೀಳುವುದಕ್ಕೆ ಕಬ್ಬಿಣದ ಏಣಿಯನ್ನು ಬಳಸಲಾಗಿತ್ತು. ಈ ವೇಳೆ ಏಣಿ ವಿದ್ಯುತ್​ ತಂತಿಗೆ ತಗುಲಿ ಧರ್ಮಜ (50) , ರವಿ (40), ಸತೀಶ್ (50) ಮೃತ ಪಟ್ಟಿದ್ದಾರೆ. ಮೃತದೇಹ ಸಂಪೂರ್ಣ ಸುಟ್ಟು ಕರಕಲಾಗಿವೆ.

ಏಣಿ ವಿದ್ಯುತ್ ತಂತಿಗೆ ತಗುಲಿ ಮೂವರು ಸಾವು

ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೂವರು ಮೃತಪಟ್ಟಿದ್ದು, ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಮೃತರ ಸಂಬಂಧಿಕರು ಪರಿಹಾರ ನೀಡುವಂತೆ ತೋಟದ ಮಾಲೀಕರಲ್ಲಿ ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಗೋಣಿಕೊಪ್ಪಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಮರವೇರಲು ಬಳಸಿದ್ದ ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿ ಮೂವರು ಮೃತಪಟ್ಟ ಘಟನೆ ಗೋಣಿಕೊಪ್ಪಲು ಬಳಿ ಅರ್ವತೋಕ್ಲು ಗ್ರಾಮದಲ್ಲಿ ನಡೆದಿದೆ.

ಅರ್ವತೋಕ್ಲು ಗ್ರಾಮದ ರಾಮಜಮ್ಮ ಎಂಬುವವರ ತೋಟದಲ್ಲಿ ತೆಂಗಿನಕಾಯಿ ಕೀಳುವುದಕ್ಕೆ ಕಬ್ಬಿಣದ ಏಣಿಯನ್ನು ಬಳಸಲಾಗಿತ್ತು. ಈ ವೇಳೆ ಏಣಿ ವಿದ್ಯುತ್​ ತಂತಿಗೆ ತಗುಲಿ ಧರ್ಮಜ (50) , ರವಿ (40), ಸತೀಶ್ (50) ಮೃತ ಪಟ್ಟಿದ್ದಾರೆ. ಮೃತದೇಹ ಸಂಪೂರ್ಣ ಸುಟ್ಟು ಕರಕಲಾಗಿವೆ.

ಏಣಿ ವಿದ್ಯುತ್ ತಂತಿಗೆ ತಗುಲಿ ಮೂವರು ಸಾವು

ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೂವರು ಮೃತಪಟ್ಟಿದ್ದು, ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಮೃತರ ಸಂಬಂಧಿಕರು ಪರಿಹಾರ ನೀಡುವಂತೆ ತೋಟದ ಮಾಲೀಕರಲ್ಲಿ ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಗೋಣಿಕೊಪ್ಪಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕೊಡಗು- ತೆಂಗಿನಕಾಯಿ ಕೀಳುತ್ತಿದ್ದ ಸಂದರ್ಭ ಮರವೇರಲು ಬಳಸಿದ್ದ ಕಬ್ಬಿಣದ ಏಣಿ ವಿದ್ಯುತ್ ತಂತಿಗೆ ತಗುಲಿ ಮೂವರು ಮೃತಪಟ್ಟ ಘಟನೆ ಗೋಣಿಕೊಪ್ಪಲು ಬಳಿ ಅರ್ವತೋಕ್ಲು ಗ್ರಾಮದಲ್ಲಿ ನಡೆದಿದೆ.Body:ಅರ್ವತೋಕ್ಲು ಗ್ರಾಮದ ರಾಮಜಮ್ಮ ಎಂಬುವವರ ತೋಟದಲ್ಲಿ ತೆಂಗಿನಕಾಯಿ ಕೀಳುವುದಕ್ಕೆ ಕಾಳುಮೆಣಸು ಕುಯಿಲು ಮಾಡುವ ಕಬ್ಬಿಣದ ಏಣಿಯನ್ನು ಬಳಸಲಾಗಿತ್ತು. ಧರ್ಮಜ (50) ಮತ್ತು ರವಿ (40) ಒಬ್ಬರು ಏಣಿ ಏರಿ ಮತ್ತೊಬ್ಬರು ಕೆಳಗೆ ಏಣಿಯನ್ನು ಹಿಡಿದಕೊಂಡು ಕೆಲಸಮಾಡುತ್ತಿದ್ದರು ಎನ್ನಲಾಗಿದೆ. ಇದೇ ವೇಳೆಗೆ ಏಣಿ ಜಾರಿ ಅಲ್ಲೇ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ವಿದ್ಯುತ್ ಪ್ರವಾಹಿಸಿ ಇಬ್ಬರು ಮೃತಪಟ್ಟಿದ್ದು, ಇವರ ಚೀರಾಟ ಕೇಳಿ ಅಲ್ಲೇ ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ (50) ರಕ್ಷಣೆಗೆ ದಾವಿಸಿದ ಸಂದರ್ಭ ಏಣಿಯನ್ನು ಮುಟ್ಟಿದ್ದು ಇವರು ಕೂಡ ಸಾವನ್ನಪ್ಪಿದ್ದಾರೆ. ಸಂಪೂರ್ಣ ಸುಟ್ಟು ಕರಕಲಾದ ಸಿತ್ತಿಯಲ್ಲಿ ಈ ಮೂವರ ಮೃತದೇಹ ತೋಟದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ದೃಶ್ಯ ಕಂಡು ಕುಟುಂಬಸ್ಥರ ಗೋಳು ಮುಗಿಲು ಮುಟ್ಟಿತು.
Conclusion:ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೂವರು ಮೃತಪಟ್ಟಿದ್ದು, ಗೋಣಿಕೊಪ್ಪಲು ಸರಕಾರಿ ಆಸ್ಪತ್ರೆಯ ಲ್ಲಿ ಮರಣೋತರ ಪರೀಕ್ಷೆ ಮಾಡಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಮೃತರ ಸಂಬಂಧಿಕರು ಪರಿಹಾರ ನೀಡುವಂತೆ ತೋಟದ ಮಾಲೀಕರಲ್ಲಿ ಒತ್ತಾಯಿಸಿದ್ದಾರೆ. ಘಟನೆ ಸಂಬಂಧ ಗೋಣಿಕೊಪ್ಪಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.