ಕೊಡಗು: ಜಿಲ್ಲೆಯಲ್ಲಿ ಮತ್ತೆ ಹುಲಿ ದಾಳಿ ಮುಂದುವರೆದಿದೆ. ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿಯ ಹರಿಹರ ಗ್ರಾಮದಲ್ಲಿ ನಡೆದಿದೆ.
ಹರಿಹರ ಗ್ರಾಮದ ಸುರಕ್ಷ ಸುಗಂಧ ಅವರ ಹಸು ಹುಲಿ ದಾಳಿಗೆ ಬಲಿಯಾಗಿದೆ. ವಿರಾಜಪೇಟೆ ತಾಲೂಕಿನಲ್ಲಿ ನಿರಂತರವಾಗಿ ಹುಲಿ ದಾಳಿಯ ಸರಣಿ ಪ್ರಕರಣಗಳು ನಡೆಯುತ್ತಿದ್ದು, ಕಳೆದ ಒಂದು ವಾರದಲ್ಲಿ5 ಕ್ಕೂ ಹೆಚ್ಚು ಹಸುಗಳನ್ನು ಬಲಿ ಪಡೆದಿದೆ. ಹುಲಿ ದಾಳಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದು, ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.