ಮಡಿಕೇರಿ(ಕೊಡಗು): ಆಹಾರ ಮತ್ತು ನೀರಿಲ್ಲದೆ ನಿತ್ರಾಣಗೊಂಡಿದ್ದ ಕಾಡಾನೆಯೊಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಕಾಡಾನೆ ಸೋಮವಾರಪೇಟೆ ತಾಲೂಕಿನ ತ್ಯಾಗತ್ತೂರು ಗ್ರಾಮದ ಕಾಫಿ ತೋಟದಲ್ಲಿ ಬಿದ್ದು ನರಳಾಡುತ್ತಿತ್ತು. ವೈದ್ಯರಾದ ಡಾ.ಮುಜೀಬ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಕಳೆದೆರಡು ದಿನಗಳಿಂದ ಚಿಕಿತ್ಸೆ ನೀಡಿದರೂ ಪ್ರಯೋಜನವಾಗದೆ ಆನೆ ಮೃತಪಟ್ಟಿದೆ.