ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕಿನ ಕಮ್ಮಸಂದ್ರದಲ್ಲಿರುವ ಪ್ರಸಿದ್ಧ ಕೋಟಿಲಿಂಗ ದೇವಾಲಯದ ಪ್ರವೇಶಕ್ಕೆ ಟಿಕೆಟ್ ನೀಡದೇ ಕಂದಾಯ ಅಧಿಕಾರಿ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಇತ್ತೀಚೆಗಷ್ಟೆ ನ್ಯಾಯಾಲಯದ ಆದೇಶದಂತೆ ದೇವಾಲಯವನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರದ ವಶಕ್ಕೆ ಪಡೆದು, ದೇವಾಲಯದ ಪ್ರವೇಶಕ್ಕೆ 20 ರೂ. ನಿಗದಿ ಮಾಡಲಾಗಿದೆ. ಆದ್ರೆ ಟಿಕೆಟ್ ನೀಡದೇ ಭಕ್ತರಿಂದ ಸರ್ಕಾರಿ ಅಧಿಕಾರಿಗಳು ಹಣ ಪೀಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೆ ಅಧಿಕಾರಿಯೊಬ್ಬರು ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.