ETV Bharat / state

ಪಕ್ಷದ ಗೊಂದಲಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್​​ ಕೇಂದ್ರ ಬಜೆಟ್​​​ನತ್ತ ಬೆರಳು ಮಾಡುತ್ತಿದೆ: ಬೈರತಿ ಬಸವರಾಜ್​

author img

By

Published : Feb 13, 2021, 3:48 PM IST

ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಕಾಂಗ್ರೆಸ್​​ನಲ್ಲಿ ಸಾಕಷ್ಟು ಗೊಂದಲಗಳಿವೆ. ಆ ಗೊಂದಲಗಳನ್ನ ಮರೆಮಾಚುವ ಸಲುವಾಗಿ ಬಜೆಟ್​ನತ್ತ ಬೆರಳು ತೋರಿಸುತ್ತಿದ್ದಾರೆ ಎಂದು ಸಚಿವ ಬೈರತಿ ಬಸವರಾಜ್ ಕಿಡಿಕಾರಿದರು.

congress is talking about central budget to hide their problems
ಬೈರತಿ ಬಸವರಾಜ್​

ಕೋಲಾರ: ಪಕ್ಷದಲ್ಲಿರುವ ಗೊಂದಲಗಳನ್ನ ಮರೆಮಾಚುವ ಸಲುವಾಗಿ‌ ಕೇಂದ್ರ ಸರ್ಕಾರದ ಬಜೆಟ್​​ನತ್ತ ಕಾಂಗ್ರೆಸ್​​ ಬೆರಳು ಮಾಡಿ ತೋರಿಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಕಾಂಗ್ರೆಸ್​​​ನಲ್ಲಿ ಸಾಕಷ್ಟು ಗೊಂದಲಗಳಿವೆ. ಆ ಗೊಂದಲಗಳನ್ನ ಮರೆಮಾಚುವ ಸಲುವಾಗಿ ಬಜೆಟ್​ನತ್ತ ಬೆರಳು ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಬೈರತಿ ಬಸವರಾಜ್​

ಅಲ್ಲದೆ ಮುಖ್ಯಮಂತ್ರಿಯಾಗುವುದಕ್ಕೆ ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ನಾಯಕರ ನಡುವೆ ಗೊಂದಲಗಳಿದ್ದು, ಅವರಲ್ಲೇ ಕಿತ್ತಾಟ ನಡೆಯುತ್ತಿದೆ. ವಿರೋಧ ಪಕ್ಷದವರಿಗೆ ಬೇರೆ ಕೆಲಸವಿಲ್ಲ. ಅದಕ್ಕೆ ಟೀಕೆ ಟಿಪ್ಪಣಿಗಳನ್ನ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್​​ನಲ್ಲಿ ಒಳ ಜಗಳಗಳು ಹೆಚ್ಚಾಗಿವೆ. ಮುಂದಿನ ಚುನಾವಣೆಗಳಲ್ಲಿಯೂ ನಾವೇ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ. ಇನ್ನು ಆರ್ಥಿಕ ಪರಿಸ್ಥಿತಿಯಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಕೇಂದ್ರ ಬಜೆಟ್ ಅಭಿವೃದ್ಧಿ ಪರವಾಗಿದೆ ಎಂದರು.

ಕೋಲಾರ: ಪಕ್ಷದಲ್ಲಿರುವ ಗೊಂದಲಗಳನ್ನ ಮರೆಮಾಚುವ ಸಲುವಾಗಿ‌ ಕೇಂದ್ರ ಸರ್ಕಾರದ ಬಜೆಟ್​​ನತ್ತ ಕಾಂಗ್ರೆಸ್​​ ಬೆರಳು ಮಾಡಿ ತೋರಿಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಕಾಂಗ್ರೆಸ್​​​ನಲ್ಲಿ ಸಾಕಷ್ಟು ಗೊಂದಲಗಳಿವೆ. ಆ ಗೊಂದಲಗಳನ್ನ ಮರೆಮಾಚುವ ಸಲುವಾಗಿ ಬಜೆಟ್​ನತ್ತ ಬೆರಳು ತೋರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಬೈರತಿ ಬಸವರಾಜ್​

ಅಲ್ಲದೆ ಮುಖ್ಯಮಂತ್ರಿಯಾಗುವುದಕ್ಕೆ ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ನಾಯಕರ ನಡುವೆ ಗೊಂದಲಗಳಿದ್ದು, ಅವರಲ್ಲೇ ಕಿತ್ತಾಟ ನಡೆಯುತ್ತಿದೆ. ವಿರೋಧ ಪಕ್ಷದವರಿಗೆ ಬೇರೆ ಕೆಲಸವಿಲ್ಲ. ಅದಕ್ಕೆ ಟೀಕೆ ಟಿಪ್ಪಣಿಗಳನ್ನ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್​​ನಲ್ಲಿ ಒಳ ಜಗಳಗಳು ಹೆಚ್ಚಾಗಿವೆ. ಮುಂದಿನ ಚುನಾವಣೆಗಳಲ್ಲಿಯೂ ನಾವೇ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ. ಇನ್ನು ಆರ್ಥಿಕ ಪರಿಸ್ಥಿತಿಯಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಕೇಂದ್ರ ಬಜೆಟ್ ಅಭಿವೃದ್ಧಿ ಪರವಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.