ಕೋಲಾರ : ಹಾಲಿ ಸಂಸದ ಕೆ.ಹೆಚ್.ಮುನಿಯಪ್ಪಗೆ ಟಿಕೆಟ್ ನೀಡದಂತೆ ಸ್ವಪಕ್ಷೀಯರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಲು ಮುಂದಾಗಿದ್ದಾರೆ.
ನಗರದಲ್ಲಿ ಕಾಂಗ್ರೆಸ್ನ ವಿವಿಧ ಮೋರ್ಚಾಗಳ ಅಧ್ಯಕ್ಷರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಎಸ್ಸಿ.ಎಸ್ಟಿ ಘಟಕದ ಅಧ್ಯಕ್ಷ ಜೈದೇವ್ ಪಕ್ಷದಲ್ಲಿ ಕೆಲವು ಭಿನ್ನಾಭಿಪ್ರಾಯಗಳು ಸಹಜ. ಚುನಾವಣೆ ಸಂದರ್ಭದಲ್ಲಿ ಕೆಲವು ಭಿನ್ನಾಭಿಪ್ರಾಯಗಳಿವೆ. ಎಲ್ಲವನ್ನು ಸರಿಪಡಿಸಲಾಗುವುದು. ಈ ಬಾರಿ ಮತ್ತೊಮ್ಮೆ ಸಂಸದ ಕೆ.ಹೆಚ್.ಮುನಿಯಪ್ಪ ಕೋಲಾರದಿಂದ ಸ್ಪರ್ಧಿಸಿ ಜಯಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.