ETV Bharat / state

ರಸ್ತೆ ನಿರ್ಮಿಸದೆ ಅಧಿಕಾರಿಗಳ ನಿರ್ಲಕ್ಷ್ಯ: ಮತದಾನದಿಂದ ದೂರ ಉಳಿದ ಗ್ರಾಮಸ್ಥರು - ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಮತದಾನ ಬಹಿಷ್ಕಾರ

ರಸ್ತೆ ನಿರ್ಮಾಣ ಮಾಡದ ಕಾರಣ ಅಧಿಕಾರಿಗಳಿಗೆ ಬಿಸಿ ಮುಟ್ಟಿಲು ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗ್ರಾಮವೊಂದರಲ್ಲಿ ಜನರು ಮತದಾನದಿಂದ ದೂರ ಉಳಿದು, ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕರಿಸಿದ್ದಾರೆ.

people boycott election
ಮತದಾನ ಬಹಿಷ್ಕಾರ
author img

By

Published : Dec 22, 2020, 3:19 PM IST

ಕೋಲಾರ: ರಸ್ತೆಗಾಗಿ ಮತದಾನದಿಂದ ದೂರ ಉಳಿಯುವ ಮೂಲಕ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಎಷ್ಟು ಹೊತ್ತಾದ್ರೂ ಮತ ಕೇಂದ್ರದತ್ತ ಸುಳಿಯದ ಮತದಾರರು ಗ್ರಾಮ ಪಂಚಾಯ್ತಿ ಮತದಾನ ಬಹಿಷ್ಕರಿಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಮತದಾನ ಬಹಿಷ್ಕಾರ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮತಗಟ್ಟೆ ಸಂಖ್ಯೆ 17 ಕಂಬಿಪುರ ಗ್ರಾಮಸ್ಥರು ಮತದಾನಕ್ಕೆ ತರಳದೆ ಮನೆಯಲ್ಲೇ ಉಳಿದಿದ್ದಾರೆ. ಈ ಹಿನ್ನೆಲೆ ಮತಗಟ್ಟೆ ಖಾಲಿ ಖಾಲಿಯಾಗಿತ್ತು. ಮತದಾರರಿಗಾಗಿ ಚುನಾವಣಾ ಸಿಬ್ಬಂದಿ ಕಾದು ಕುಳಿತಿದ್ರು. ಸ್ಥಳಕ್ಕೆ ಮಾಲೂರು ಪೊಲೀಸರು ಹಾಗೂ ತಹಶೀಲ್ದಾರ್ ಮಂಜುನಾಥ್ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವ ಕಾರ್ಯ ನಡೆಸಿದರಾದ್ರೂ ಯಾವುದೇ ಪ್ರಯೋಜವಾಗಿಲ್ಲ. ಪಟ್ಟು ಬಿಡದ ಗ್ರಾಮಸ್ಥರು ಮತ ಬಹಿಷ್ಕಾರ ಮಾಡಿದ್ದಾರೆ.

ಕಂಬೀಪುರ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲದ ಕಾರಣ ವಿದ್ಯಾರ್ಥಿಗಳು ಪಕ್ಕದ ಅಬ್ಬೇನಹಳ್ಳಿ ಗ್ರಾಮಕ್ಕೆ ಹೋಗಬೇಕು. ಜೊತೆಗೆ ಗ್ರಾಮಸ್ಥರು ಅವಶ್ಯಕ ವಸ್ತುಗಳಿಗಾಗಿ ಪಕ್ಕದ ಗ್ರಾಮವನ್ನೇ ಅವಲಂಬಿಸಿದ್ದು, ಆ ಗ್ರಾಮಕ್ಕೆ ಹೋಗುವುದಕ್ಕೆ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲ. ಇಷ್ಟೂ ದಿನ ಕೆರೆಯಲ್ಲಿ ನಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹೋಗುತ್ತಿದ್ದರು‌. ಇದೀಗ ಕೆರೆಯಲ್ಲಿ ನೀರು ತುಂಬಿಕೊಂಡಿರುವ ಕಾರಣ ಗ್ರಾಮಸ್ಥರಿಗೆ ರಸ್ತೆಯಿಲ್ಲದಂತಾಗಿದೆ. ಕೇವಲ 1 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮಕ್ಕೆ ಸುಮಾರು 20 ಕಿ.ಮೀ. ಸುತ್ತಿಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಒದಿ:ಭಾರತದಲ್ಲಿ ಚಿರತೆಗಳ ಸಂತತಿ ಹೆಚ್ಚಳ ಕುರಿತು ಮೋದಿ ಟ್ವೀಟ್​: ಭಾರತದಲ್ಲಿವೆ 12,852 ಚಿರತೆಗಳು!

ಕೋಲಾರ: ರಸ್ತೆಗಾಗಿ ಮತದಾನದಿಂದ ದೂರ ಉಳಿಯುವ ಮೂಲಕ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ. ಎಷ್ಟು ಹೊತ್ತಾದ್ರೂ ಮತ ಕೇಂದ್ರದತ್ತ ಸುಳಿಯದ ಮತದಾರರು ಗ್ರಾಮ ಪಂಚಾಯ್ತಿ ಮತದಾನ ಬಹಿಷ್ಕರಿಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಮತದಾನ ಬಹಿಷ್ಕಾರ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮತಗಟ್ಟೆ ಸಂಖ್ಯೆ 17 ಕಂಬಿಪುರ ಗ್ರಾಮಸ್ಥರು ಮತದಾನಕ್ಕೆ ತರಳದೆ ಮನೆಯಲ್ಲೇ ಉಳಿದಿದ್ದಾರೆ. ಈ ಹಿನ್ನೆಲೆ ಮತಗಟ್ಟೆ ಖಾಲಿ ಖಾಲಿಯಾಗಿತ್ತು. ಮತದಾರರಿಗಾಗಿ ಚುನಾವಣಾ ಸಿಬ್ಬಂದಿ ಕಾದು ಕುಳಿತಿದ್ರು. ಸ್ಥಳಕ್ಕೆ ಮಾಲೂರು ಪೊಲೀಸರು ಹಾಗೂ ತಹಶೀಲ್ದಾರ್ ಮಂಜುನಾಥ್ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವ ಕಾರ್ಯ ನಡೆಸಿದರಾದ್ರೂ ಯಾವುದೇ ಪ್ರಯೋಜವಾಗಿಲ್ಲ. ಪಟ್ಟು ಬಿಡದ ಗ್ರಾಮಸ್ಥರು ಮತ ಬಹಿಷ್ಕಾರ ಮಾಡಿದ್ದಾರೆ.

ಕಂಬೀಪುರ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲದ ಕಾರಣ ವಿದ್ಯಾರ್ಥಿಗಳು ಪಕ್ಕದ ಅಬ್ಬೇನಹಳ್ಳಿ ಗ್ರಾಮಕ್ಕೆ ಹೋಗಬೇಕು. ಜೊತೆಗೆ ಗ್ರಾಮಸ್ಥರು ಅವಶ್ಯಕ ವಸ್ತುಗಳಿಗಾಗಿ ಪಕ್ಕದ ಗ್ರಾಮವನ್ನೇ ಅವಲಂಬಿಸಿದ್ದು, ಆ ಗ್ರಾಮಕ್ಕೆ ಹೋಗುವುದಕ್ಕೆ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲ. ಇಷ್ಟೂ ದಿನ ಕೆರೆಯಲ್ಲಿ ನಡೆದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹೋಗುತ್ತಿದ್ದರು‌. ಇದೀಗ ಕೆರೆಯಲ್ಲಿ ನೀರು ತುಂಬಿಕೊಂಡಿರುವ ಕಾರಣ ಗ್ರಾಮಸ್ಥರಿಗೆ ರಸ್ತೆಯಿಲ್ಲದಂತಾಗಿದೆ. ಕೇವಲ 1 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮಕ್ಕೆ ಸುಮಾರು 20 ಕಿ.ಮೀ. ಸುತ್ತಿಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಒದಿ:ಭಾರತದಲ್ಲಿ ಚಿರತೆಗಳ ಸಂತತಿ ಹೆಚ್ಚಳ ಕುರಿತು ಮೋದಿ ಟ್ವೀಟ್​: ಭಾರತದಲ್ಲಿವೆ 12,852 ಚಿರತೆಗಳು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.