ಕೋಲಾರ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಡಿಪೋ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಸಾರಿಗೆ ನೌಕರರ ಕುಟುಂಬಸ್ಥರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಪ್ರತಿಭಟನೆ ವೇಳೆ ನೌಕರರ ಕುಟುಂಬಸ್ಥರು ಡಿಪೋ ಒಳಗೆ ಪ್ರವೇಶಿಸಲು ಮುಂದಾದಾಗ ಪೊಲೀಸರು ತಡೆದಿದ್ದು, ಪೊಲೀಸರು ಹಾಗೂ ನೌಕರರ ಕುಟುಂಬಸ್ಥರ ನಡುವೆ ಕೆಲ ಕಾಲ ಮಾತಿನ ಚಕಮಕಿ ನಡೆಯಿತು.
ಸರಿಯಾದ ವೇತನ ಇಲ್ಲದೆ ಮಕ್ಕಳ ಶಿಕ್ಷಣ ಸೇರಿದಂತೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಗಲ್ ಪೇಟೆ ಪೊಲೀಸರು 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು.