ಕೋಲಾರ: ಇಂದಿನಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಆವನಿ ಶೃಂಗೇರಿ ಶಾಖಾ ಮಠದಲ್ಲಿ ಶರನ್ನವರಾತ್ರಿ ಕಾರ್ಯಕ್ರಮಕ್ಕೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಸಚ್ಚಿದಾನಂದಮೂರ್ತಿಯವರು ಚಾಲನೆ ನೀಡಿದರು.
ಆವನಿ ಗ್ರಾಮದಲ್ಲಿ ಶೋಭಾಯಾತ್ರೆ ಹಾಗೂ ಮೆರವಣಿಗೆಗೆ ಚಾಲನೆ ನೀಡುವ ಮೂಲಕ ಇಂದಿನಿಂದ ಅಕ್ಟೋಬರ್-25 ರವರೆಗೆ ವಿವಿಧ ಹೋಮ ಹವನ ಕಾರ್ಯಕ್ರಮಗಳು ನಡೆಯಲಿದ್ದು, ಲೋಕ ಕಲ್ಯಾಣಾರ್ಥವಾಗಿ ಆಯೋಜನೆ ಮಾಡಲಾಯಿತು. ಒಂಬತ್ತು ದಿನಗಳ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ಒಂದೊಂದು ಹೋಮ ಹಾಗೂ ತಾಯಿ ಶಾರದಾಂಬೆಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ಇನ್ನು ಈ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ವಿಪ್ರ ಬಂಧುಗಳು ಭಾಗಿಯಾಗಿದ್ರು. ಅಲ್ಲದೇ ಮುಳಬಾಗಿಲು ತಾಲೂಕಿನ ಆವನಿ ಗ್ರಾಮದಲ್ಲಿ ಶೋಭಾ ಯಾತ್ರೆ ಹಾಗೂ ಮೆರವಣಿಗೆ ಮಾಡಿದರು. ಇಂದಿನಿಂದ ಅಕ್ಟೋಬರ್-25 ರವರೆಗೆ ವಿವಿಧ ಹೋಮ ಹವನ ಕಾರ್ಯಕ್ರಮಗಳು ನಡೆಯಲಿವೆ.