ETV Bharat / state

15 ದಿನಗಳಲ್ಲಿ ಎರಡು ಚಿರತೆ ಸಾವು: ಬೇಟೆಗಾರರಿಗೆ ಅರಣ್ಯಾಧಿಕಾರಿಗಳ ಎಚ್ಚರಿಕೆ

author img

By ETV Bharat Karnataka Team

Published : Nov 3, 2023, 7:21 PM IST

Updated : Nov 3, 2023, 8:18 PM IST

ಕಾಡು ಪ್ರಾಣಿಗಳ ಬೇಟೆಗಾಗಿ ಹಾಕಿದ್ದ ಉರುಳಿಗೆ ಸಿಲುಕಿದ್ದ ಚಿರತೆಯೊಂದು ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಚಿಕ್ಕದಾನವಹಳ್ಳಿ ಗ್ರಾಮದಲ್ಲಿ ನಡೆದಿದೆ.

leopards died
ಉರುಳಿಗೆ ಸಿಲುಕಿದ್ದ ಚಿರತೆ ಸಾವು

ಕೋಲಾರ: ಕಾಡು ಪ್ರಾಣಿಗಳ ಬೇಟೆಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವಿಗೀಡಾದ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 2 ಚಿರತೆಗಳು ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಕಾಡು ಪ್ರಾಣಿಗಳನ್ನು ಬೇಟೆಯಾಡುವವರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಚಿಕ್ಕದಾನವಹಳ್ಳಿಯಲ್ಲಿ ಉರುಳಿಗೆ ಸಿಲುಕಿ ಚಿರತೆ ಸಾವು:ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಚಿಕ್ಕದಾನವಹಳ್ಳಿ ಗ್ರಾಮದ ಬಳಿ ಗುರುವಾರ ರಾತ್ರಿ ಕಾಡುಪ್ರಾಣಿಗಳಿಗೆ ಅಂದ್ರೆ ಕಾಡು ಹಂದಿ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿಕೊಂಡು ಚಿರತೆಯೊಂದು ಗಂಭೀರ ಗಾಯಗೊಂಡು ಸಾವನ್ನಪ್ಪಿದೆ. ಉರುಳಿಗೆ ಸಿಲುಕಿದ ಚಿರತೆಯ ಜೀವ ಉಳಿಸಲು ಸತತ 8 ಗಂಟೆ ಕಾಲ ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಣಾ ಕಾರ್ಯಾಚರಣೆ ಮಾಡಿದರೂ ಅದು ಸಫಲವಾಗಿಲ್ಲ.

ಬೆಳೆಗಳನ್ನು ಕಾಡು ಹಂದಿಗಳಿಂದ ರಕ್ಷಣೆ ಮಾಡಿಕೊಳ್ಳಲು ರೈತರು ಹಾಕಿದ್ದ ಬಲೆಯಲ್ಲಿ ಚಿರತೆ ಸಿಲುಕಿಕೊಂಡಿತು. ಕಳೆದ ರಾತ್ರಿಯಿಡಿ ಡಿಎಫ್‌ಒ ಏಡುಕೊಂಡಲ ನೇತೃತ್ವದಲ್ಲಿ ಚಿರತೆ ಸಂರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಆದರೆ, ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲು ಎಷ್ಟೇ ಪ್ರಯತ್ನಿಸಿದರೂ ಚಿರತೆಯನ್ನೂ ಮಾತ್ರ ರಕ್ಷಿಸಿಕೊಳ್ಳಲಾಗಲಿಲ್ಲ.

ಬನ್ನೇರುಘಟ್ಟದಿಂದ ಹತ್ತು ಜನರ ತಂಡ:ತೀವ್ರ ಗಾಯಗೊಂಡಿದ್ದ ಚಿರತೆಯನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಬನ್ನೇರುಘಟ್ಟದಿಂದ ಹತ್ತು ಜನರ ತಂಡ ಕರೆ ತರಲಾಗಿತ್ತು. ಬಲೆಗೆ ಸಿಲುಕಿ ಚಿರತೆ ಒದ್ದಾಡಿದ ಪರಿಣಾಮ ಹಿಂಬದಿಯ ಕಾಲುಗಳು ಸ್ವಾಧೀನ ಕಳೆದುಕೊಂಡು, ಸೊಂಟದಿಂದ ಕೆಳಕ್ಕೆ ರಕ್ತ ಸಂಚಲನ ಆಗದಿದ್ದರಿಂದ ಚಿರತೆ ಪ್ರಾಣ ಬಿಟ್ಟಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಿಂದೆ ಖಾಜಿ ಕಲ್ಲಹಳ್ಳಿ ಬೆಟ್ಟದಲ್ಲಿ ಚಿರತೆ ಸಾವು: ಕಳೆದ ನಾಲ್ಕು ದಿನಗಳ ಹಿಂದೆಯಷ್ಟೆ ಖಾಜಿ ಕಲ್ಲಹಳ್ಳಿ ಬೆಟ್ಟದಲ್ಲಿ ಕಾಡು ಪ್ರಾಣಿಗಳನ್ನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಸಿಲುಕಿದ ಪರಿಣಾಮ ಚಿರತೆಯೊಂದು ಮೃತಪಟ್ಟಿತ್ತು. ಈ ಬೆನ್ನಲ್ಲೆ ಕಳೆದ ರಾತ್ರಿ ಮತ್ತೊಂದು ಚಿರತೆ ಸಾವನ್ನಪ್ಪಿರುವುದು ಅರಣ್ಯ ಇಲಾಖೆ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರಿನಲ್ಲಿ ಜನರ ಭೀತಿಗೆ ಕಾರಣವಾಗಿದ್ದ ಚಿರತೆ ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಟ್ಟಿತ್ತು. ಕೊನೆಗೆ ಅದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದರಿಂದ ಪ್ರಾಣ ರಕ್ಷಣೆಗೆ ಹಾರಿಸಿದ ಗುಂಡು ಚಿರತೆಯನ್ನು ಬಲಿ ಪಡೆದಿತ್ತು. ಇದೂ ಅರಣ್ಯ ಇಲಾಖೆ ಭಾರಿ ಟೀಕೆಗೆ ಗುರಿಯಾಗುವಂತೆ ಮಾಡಿತ್ತು.

ಕಾಡು ಪ್ರಾಣಿಗಳ ಬೇಟೆಯಾಡುವವರು ಹಾಗೂ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ತಮ್ಮ ತೋಟಗಳ ಸುತ್ತ ತಂತಿ ಬೇಲಿ ಹಾಕಿಕೊಳ್ಳುವ ಮೂಲಕ ಕಾಡು ಪ್ರಾಣಿಗಳಿಗೆ ಜೀವಕ್ಕೆ ಹಾನಿಯಾದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಡುಪ್ರಾಣಿಗಳ ಬೇಟೆಯಾಡುವವರನ್ನು ಪತ್ತೆ ಹಚ್ಚಲು ಅರಣ್ಯಾ ಇಲಾಖೆಯಿಂದ ವಿಶೇಷ ತಂಡ ರಚಿಸಲಾಗವುದು ಎಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂಓದಿ:ಉರುಳಿಗೆ ಸಿಲುಕಿ ಚಿರತೆ ಸಾವು: ಪ್ರಕರಣ ದಾಖಲು

ಕೋಲಾರ: ಕಾಡು ಪ್ರಾಣಿಗಳ ಬೇಟೆಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವಿಗೀಡಾದ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 2 ಚಿರತೆಗಳು ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಕಾಡು ಪ್ರಾಣಿಗಳನ್ನು ಬೇಟೆಯಾಡುವವರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಚಿಕ್ಕದಾನವಹಳ್ಳಿಯಲ್ಲಿ ಉರುಳಿಗೆ ಸಿಲುಕಿ ಚಿರತೆ ಸಾವು:ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಚಿಕ್ಕದಾನವಹಳ್ಳಿ ಗ್ರಾಮದ ಬಳಿ ಗುರುವಾರ ರಾತ್ರಿ ಕಾಡುಪ್ರಾಣಿಗಳಿಗೆ ಅಂದ್ರೆ ಕಾಡು ಹಂದಿ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿಕೊಂಡು ಚಿರತೆಯೊಂದು ಗಂಭೀರ ಗಾಯಗೊಂಡು ಸಾವನ್ನಪ್ಪಿದೆ. ಉರುಳಿಗೆ ಸಿಲುಕಿದ ಚಿರತೆಯ ಜೀವ ಉಳಿಸಲು ಸತತ 8 ಗಂಟೆ ಕಾಲ ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಣಾ ಕಾರ್ಯಾಚರಣೆ ಮಾಡಿದರೂ ಅದು ಸಫಲವಾಗಿಲ್ಲ.

ಬೆಳೆಗಳನ್ನು ಕಾಡು ಹಂದಿಗಳಿಂದ ರಕ್ಷಣೆ ಮಾಡಿಕೊಳ್ಳಲು ರೈತರು ಹಾಕಿದ್ದ ಬಲೆಯಲ್ಲಿ ಚಿರತೆ ಸಿಲುಕಿಕೊಂಡಿತು. ಕಳೆದ ರಾತ್ರಿಯಿಡಿ ಡಿಎಫ್‌ಒ ಏಡುಕೊಂಡಲ ನೇತೃತ್ವದಲ್ಲಿ ಚಿರತೆ ಸಂರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಆದರೆ, ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲು ಎಷ್ಟೇ ಪ್ರಯತ್ನಿಸಿದರೂ ಚಿರತೆಯನ್ನೂ ಮಾತ್ರ ರಕ್ಷಿಸಿಕೊಳ್ಳಲಾಗಲಿಲ್ಲ.

ಬನ್ನೇರುಘಟ್ಟದಿಂದ ಹತ್ತು ಜನರ ತಂಡ:ತೀವ್ರ ಗಾಯಗೊಂಡಿದ್ದ ಚಿರತೆಯನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಬನ್ನೇರುಘಟ್ಟದಿಂದ ಹತ್ತು ಜನರ ತಂಡ ಕರೆ ತರಲಾಗಿತ್ತು. ಬಲೆಗೆ ಸಿಲುಕಿ ಚಿರತೆ ಒದ್ದಾಡಿದ ಪರಿಣಾಮ ಹಿಂಬದಿಯ ಕಾಲುಗಳು ಸ್ವಾಧೀನ ಕಳೆದುಕೊಂಡು, ಸೊಂಟದಿಂದ ಕೆಳಕ್ಕೆ ರಕ್ತ ಸಂಚಲನ ಆಗದಿದ್ದರಿಂದ ಚಿರತೆ ಪ್ರಾಣ ಬಿಟ್ಟಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಿಂದೆ ಖಾಜಿ ಕಲ್ಲಹಳ್ಳಿ ಬೆಟ್ಟದಲ್ಲಿ ಚಿರತೆ ಸಾವು: ಕಳೆದ ನಾಲ್ಕು ದಿನಗಳ ಹಿಂದೆಯಷ್ಟೆ ಖಾಜಿ ಕಲ್ಲಹಳ್ಳಿ ಬೆಟ್ಟದಲ್ಲಿ ಕಾಡು ಪ್ರಾಣಿಗಳನ್ನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಸಿಲುಕಿದ ಪರಿಣಾಮ ಚಿರತೆಯೊಂದು ಮೃತಪಟ್ಟಿತ್ತು. ಈ ಬೆನ್ನಲ್ಲೆ ಕಳೆದ ರಾತ್ರಿ ಮತ್ತೊಂದು ಚಿರತೆ ಸಾವನ್ನಪ್ಪಿರುವುದು ಅರಣ್ಯ ಇಲಾಖೆ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರಿನಲ್ಲಿ ಜನರ ಭೀತಿಗೆ ಕಾರಣವಾಗಿದ್ದ ಚಿರತೆ ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಟ್ಟಿತ್ತು. ಕೊನೆಗೆ ಅದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದರಿಂದ ಪ್ರಾಣ ರಕ್ಷಣೆಗೆ ಹಾರಿಸಿದ ಗುಂಡು ಚಿರತೆಯನ್ನು ಬಲಿ ಪಡೆದಿತ್ತು. ಇದೂ ಅರಣ್ಯ ಇಲಾಖೆ ಭಾರಿ ಟೀಕೆಗೆ ಗುರಿಯಾಗುವಂತೆ ಮಾಡಿತ್ತು.

ಕಾಡು ಪ್ರಾಣಿಗಳ ಬೇಟೆಯಾಡುವವರು ಹಾಗೂ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ತಮ್ಮ ತೋಟಗಳ ಸುತ್ತ ತಂತಿ ಬೇಲಿ ಹಾಕಿಕೊಳ್ಳುವ ಮೂಲಕ ಕಾಡು ಪ್ರಾಣಿಗಳಿಗೆ ಜೀವಕ್ಕೆ ಹಾನಿಯಾದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಡುಪ್ರಾಣಿಗಳ ಬೇಟೆಯಾಡುವವರನ್ನು ಪತ್ತೆ ಹಚ್ಚಲು ಅರಣ್ಯಾ ಇಲಾಖೆಯಿಂದ ವಿಶೇಷ ತಂಡ ರಚಿಸಲಾಗವುದು ಎಂದು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂಓದಿ:ಉರುಳಿಗೆ ಸಿಲುಕಿ ಚಿರತೆ ಸಾವು: ಪ್ರಕರಣ ದಾಖಲು

Last Updated : Nov 3, 2023, 8:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.