ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ: ರಾಜ್ಯದ ಹಲವೆಡೆ ಬಿಗಿ ಪೊಲೀಸ್​ ಭದ್ರತೆ

author img

By

Published : Dec 19, 2019, 12:42 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

144 section
144 section

ಗಂಗಾವತಿ/ಕಾರವಾರ/ರಾಯಚೂರು: ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆ ಗಂಗಾವತಿ ತಾಲೂಕಿನಾದ್ಯಂತ ಡಿ.18ರಿಂದ 22ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ್ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ‌ ಹಿಂಸಾತ್ಮಕ ರೂಪ ಪಡೆಯುತ್ತಿರುವ ಹಿನ್ನೆಲೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗದಿರಲು ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಹಾಗಾಗಿ ತಾಲೂಕಿನಲ್ಲಿ ಯಾವುದೇ ಮೆರವಣಿಗೆ, ಸಂಭ್ರಮ ಆಚರಣೆ, ವಿಚಾರಗೋಷ್ಠಿ, ಸಮಾರಂಭ, ಕಾರ್ಯಾಗಾರ, ಸಭೆ ನಿಷೇಧಿಸಲಾಗಿದೆ.

144 ಸೆಕ್ಷನ್ ಅಡಿ ನಿಷೇಧಾಜ್ಞೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಪ್ರತಿಭಟನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರವಾರ ನಗರದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬಸ್, ಆಟೋ ಸಂಚಾರ ಸಹ ಎಂದಿನಂತೆ ಇದೆ. ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಿದೆ.

ಪೌರತ್ವ ತಿದ್ದು ಕಾಯ್ದೆ ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಗಂಗಾವತಿ/ಕಾರವಾರ/ರಾಯಚೂರು: ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆ ಗಂಗಾವತಿ ತಾಲೂಕಿನಾದ್ಯಂತ ಡಿ.18ರಿಂದ 22ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ್ ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ‌ ಹಿಂಸಾತ್ಮಕ ರೂಪ ಪಡೆಯುತ್ತಿರುವ ಹಿನ್ನೆಲೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗದಿರಲು ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಹಾಗಾಗಿ ತಾಲೂಕಿನಲ್ಲಿ ಯಾವುದೇ ಮೆರವಣಿಗೆ, ಸಂಭ್ರಮ ಆಚರಣೆ, ವಿಚಾರಗೋಷ್ಠಿ, ಸಮಾರಂಭ, ಕಾರ್ಯಾಗಾರ, ಸಭೆ ನಿಷೇಧಿಸಲಾಗಿದೆ.

144 ಸೆಕ್ಷನ್ ಅಡಿ ನಿಷೇಧಾಜ್ಞೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಪ್ರತಿಭಟನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರವಾರ ನಗರದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬಸ್, ಆಟೋ ಸಂಚಾರ ಸಹ ಎಂದಿನಂತೆ ಇದೆ. ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಿದೆ.

ಪೌರತ್ವ ತಿದ್ದು ಕಾಯ್ದೆ ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Intro:Body:kn_kwr_02_nirasa pratikriye_7202800

ಕಾರವಾರ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಪ್ರತಿಭಟನೆಗೆ ಉತ್ತರಕನ್ನಡ ಜಿಲ್ಲೆಯ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಾರವಾರ ನಗರದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು ಬಸ್ ಆಟೋ ಸಂಚಾರ ಸಹ ಎಂದಿನಂತೆ ಪ್ರಾರಂಭವಾಗಿದೆ. ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನಲೆ ಉತ್ತರಕನ್ನಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ರೀತಿಯ ಪ್ರತಿಭಟನೆ ಅಥವಾ ಅಹಿತಕರ ಚಟುವಟಿಕೆಗಳಲ್ಲಿ ಭಾಗವಹಿಸಿದಲ್ಲಿ ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನ ನೀಡಿದ್ದಾರೆ. 21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರೆಯಲಿದ್ದು ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಯಾವುದೇ ಪ್ರತಿಭಟನೆಯನ್ನು ಕೈಗೊಳ್ಳದಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.