ETV Bharat / state

ಶಿಕ್ಷಕರ ದಿನಾಚರಣೆಯಂದೇ ಕುಷ್ಟಗಿ ತಾಲೂಕಿನ ಇಬ್ಬರು ಶಿಕ್ಷಕರ ನಿಧನ

author img

By

Published : Sep 5, 2021, 3:25 PM IST

ಸುದ್ದಿ ತಿಳಿಯುತ್ತಿದ್ದಂತೆ ಕುಷ್ಟಗಿ ಗುರು ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಅವರಿಬ್ಬರಿಗೂ ಗೌರವಾರ್ಥ ಒಂದು ನಿಮಿಷದ ಮೌನ ಸಲ್ಲಿಸಲಾಯಿತು..

teachers died
ಶಿಕ್ಷಕ ಶಿವು ಸೂರ್ಯವಂಶ ಹಾಗೂ ಸಂಗಯ್ಯ ಉಕ್ಲಿ

ಕುಷ್ಟಗಿ (ಕೊಪ್ಪಳ) : ಶಿಕ್ಷಕರ ದಿನಾಚರಣೆ ಸಂಭ್ರಮದ ನಡುವೆಯೇ ಕುಷ್ಟಗಿ ತಾಲೂಕಿನ ಇಬ್ಬರು ಶಿಕ್ಷಕರು ಇಂದು ಇಹಲೋಕ ತ್ಯಜಿಸಿದ್ದಾರೆ. ಕುಷ್ಟಗಿ ತಾಲೂಕಿನ ಸಾಸ್ವಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವು ಸೂರ್ಯವಂಶ ಹಾಗೂ ತೆಗ್ಗಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಯ್ಯ ಉಕ್ಲಿ ನಿಧನರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಕುಷ್ಟಗಿ ಗುರು ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಅವರಿಬ್ಬರಿಗೂ ಗೌರವಾರ್ಥ ಒಂದು ನಿಮಿಷದ ಮೌನ ಸಲ್ಲಿಸಲಾಯಿತು. ಇದೇ ವೇಳೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ತಹಶೀಲ್ದಾರ್​ ಎಂ. ಸಿದ್ದೇಶ್​, ತಾಪಂ ಡಾ. ಜಯರಾಮ್ ಚೌಹಾಣ್​, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮಗ್ಗದ ಸೇರಿದಂತೆ ತಾಲೂಕಿನ ಶಿಕ್ಷಕರು‌ ಸಂತಾಪ ಸೂಚಿಸಿದರು.

ಕುಷ್ಟಗಿ (ಕೊಪ್ಪಳ) : ಶಿಕ್ಷಕರ ದಿನಾಚರಣೆ ಸಂಭ್ರಮದ ನಡುವೆಯೇ ಕುಷ್ಟಗಿ ತಾಲೂಕಿನ ಇಬ್ಬರು ಶಿಕ್ಷಕರು ಇಂದು ಇಹಲೋಕ ತ್ಯಜಿಸಿದ್ದಾರೆ. ಕುಷ್ಟಗಿ ತಾಲೂಕಿನ ಸಾಸ್ವಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವು ಸೂರ್ಯವಂಶ ಹಾಗೂ ತೆಗ್ಗಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಯ್ಯ ಉಕ್ಲಿ ನಿಧನರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಕುಷ್ಟಗಿ ಗುರು ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಅವರಿಬ್ಬರಿಗೂ ಗೌರವಾರ್ಥ ಒಂದು ನಿಮಿಷದ ಮೌನ ಸಲ್ಲಿಸಲಾಯಿತು. ಇದೇ ವೇಳೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ತಹಶೀಲ್ದಾರ್​ ಎಂ. ಸಿದ್ದೇಶ್​, ತಾಪಂ ಡಾ. ಜಯರಾಮ್ ಚೌಹಾಣ್​, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮಗ್ಗದ ಸೇರಿದಂತೆ ತಾಲೂಕಿನ ಶಿಕ್ಷಕರು‌ ಸಂತಾಪ ಸೂಚಿಸಿದರು.

ಓದಿ: ರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.