ETV Bharat / state

ಮುಗಿದ ನಾಲ್ಕು ತಿಂಗಳಲ್ಲಿಯೇ ಕಿತ್ತುಹೋದ ರಸ್ತೆ: ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ

ನಾಲ್ಕು ತಿಂಗಳಿಂದೆ ನಿರ್ಮಾಣವಾಗಿದ್ದ ತಾಲೂಕಿನ ಬಹದ್ದೂರ ಬಂಡಿ ಗ್ರಾಮದ ರಸ್ತೆ ಕಿತ್ತು ಹೋಗಿದ್ದು, ಅದನ್ನು ಸರಿಯಾಗಿ ನಿರ್ವಹಿಸದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

author img

By

Published : Sep 28, 2019, 8:53 PM IST

a-new-road-to-tear-down

ಕೊಪ್ಪಳ: ನಾಲ್ಕು ತಿಂಗಳ ಹಿಂದೆ ನಿರ್ಮಾಣವಾಗಿದ್ದ ತಾಲೂಕಿನ ಬಹದ್ದೂರ ಬಂಡಿ ಗ್ರಾಮದ ರಸ್ತೆ ಕಿತ್ತು ಹೋಗಿದ್ದು, ಅದನ್ನು ಸರಿಯಾಗಿ ನಿರ್ವಹಿಸದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

ಬಹದ್ದೂರಬಂಡಿ ನೂತನ ರಸ್ತೆ ಕಿತ್ತುಹೋಗಿರುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಹೆಚ್ಚಿನ ಭಾರ ಹೊತ್ತ ವಾಹನಗಳ ಓಡಾಟದಿಂದ ನೂತನ ರಸ್ತೆಗಳು ಕಿತ್ತುಹೋಗುತ್ತಿವೆ. 3 ವರ್ಷಗಳ ಹಿಂದೆ ಇಲ್ಲಿನ ಕಾಸನಕಂಡಿ ರಸ್ತೆಯನ್ನು ₹ 10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಆ ರಸ್ತೆಯೂ ಕಿತ್ತುಹೋಗಿದೆ. ಬಹದ್ದೂರ ಬಂಡಿ ರಸ್ತೆ ಕಾಮಗಾರಿ ಕಳಪೆ ಆಗಿದ್ದರ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಒಂದು ವೇಳೆ ಅದು ಕಳಪೆ ಕಾಮಗಾರಿಯಾಗಿದ್ದೆರೆ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ್

ಇನ್ನು ಕಾಸನಕಂಡಿ ರಸ್ತೆಯನ್ನು ಸಿಮೆಂಟ್ ರಸ್ತೆಯನ್ನಾಗಿ ಮಾಡುವಂತೆ ಉಪಮುಖ್ಯಮಂತ್ರಿ ಗೋವಿಂದ‌ ಕಾರಜೋಳ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕರು ಹೇಳಿದರು. ಬಹದ್ದೂರಬಂಡಿ ನೂತನ ರಸ್ತೆ ಕಿತ್ತುಹೋಗಿದ್ದ ಕುರಿತಂತೆ ಈಟಿವಿ ಭಾರತ ವರದಿ ಪ್ರಕಟಿಸಿತ್ತು.

ಕೊಪ್ಪಳ: ನಾಲ್ಕು ತಿಂಗಳ ಹಿಂದೆ ನಿರ್ಮಾಣವಾಗಿದ್ದ ತಾಲೂಕಿನ ಬಹದ್ದೂರ ಬಂಡಿ ಗ್ರಾಮದ ರಸ್ತೆ ಕಿತ್ತು ಹೋಗಿದ್ದು, ಅದನ್ನು ಸರಿಯಾಗಿ ನಿರ್ವಹಿಸದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ.

ಬಹದ್ದೂರಬಂಡಿ ನೂತನ ರಸ್ತೆ ಕಿತ್ತುಹೋಗಿರುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಹೆಚ್ಚಿನ ಭಾರ ಹೊತ್ತ ವಾಹನಗಳ ಓಡಾಟದಿಂದ ನೂತನ ರಸ್ತೆಗಳು ಕಿತ್ತುಹೋಗುತ್ತಿವೆ. 3 ವರ್ಷಗಳ ಹಿಂದೆ ಇಲ್ಲಿನ ಕಾಸನಕಂಡಿ ರಸ್ತೆಯನ್ನು ₹ 10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಆ ರಸ್ತೆಯೂ ಕಿತ್ತುಹೋಗಿದೆ. ಬಹದ್ದೂರ ಬಂಡಿ ರಸ್ತೆ ಕಾಮಗಾರಿ ಕಳಪೆ ಆಗಿದ್ದರ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಒಂದು ವೇಳೆ ಅದು ಕಳಪೆ ಕಾಮಗಾರಿಯಾಗಿದ್ದೆರೆ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಶಾಸಕ ಕೆ.ರಾಘವೇಂದ್ರ ಹಿಟ್ನಾಳ್

ಇನ್ನು ಕಾಸನಕಂಡಿ ರಸ್ತೆಯನ್ನು ಸಿಮೆಂಟ್ ರಸ್ತೆಯನ್ನಾಗಿ ಮಾಡುವಂತೆ ಉಪಮುಖ್ಯಮಂತ್ರಿ ಗೋವಿಂದ‌ ಕಾರಜೋಳ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕರು ಹೇಳಿದರು. ಬಹದ್ದೂರಬಂಡಿ ನೂತನ ರಸ್ತೆ ಕಿತ್ತುಹೋಗಿದ್ದ ಕುರಿತಂತೆ ಈಟಿವಿ ಭಾರತ ವರದಿ ಪ್ರಕಟಿಸಿತ್ತು.

Intro:


Body:ಕೊಪ್ಪಳ:- ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೆ ನಿರ್ಮಾಣವಾಗಿದ್ದ ತಾಲೂಕಿನ ಬಹದ್ದೂರಬಂಡಿ ಗ್ರಾಮದ ರಸ್ತೆ ಕಿತ್ತು ಹೋಗಿದ್ದರೆ ಆ ಬಗ್ಗೆ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ಬಹದ್ದೂರಬಂಡಿ ನೂತನ ರಸ್ತೆ ಕಿತ್ತುಹೋಗಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಹೆಚ್ಚಿನ ಭಾರ ಹೊತ್ತ ವಾಹನಗಳ ಓಡಾಟದಿಂದ ನೂತನ ರಸ್ತೆಗಳು ಕಿತ್ತುಹೋಗುತ್ತಿವೆ. ಸುಮಾರು 3 ವರ್ಷದ ಹಿಂದೆ ತಾಲೂಕಿನ ಕಾಸನಕಂಡಿ ರಸ್ತೆಯನ್ನು 10 ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿತ್ತು. ಆ ರಸ್ತೆಯೂ ಸಹ ಹಾಗೆ ಆಗಿದೆ. ಹೆಚ್ಚಿನ ಭಾರದ ವಾಹನಗಳ ಓಡಾಟದಿಂದ ರಸ್ತೆಗಳು ಹಾಳಾಗುತ್ತಿವೆ. ಬಹದ್ದೂರಬಂಡಿ ರಸ್ತೆಯೇನಾದರೂ ಕಳಪೆ ಕಾಮಗಾರಿಯಾಗಿದ್ದರೆ ಆ ಬಗ್ಗೆ ಪರಿಶೀಲಿಸಿ ಸಂಬಂಧಿಸಿದ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ. ಇನ್ನು ಕಾಸನಕಂಡಿ ರಸ್ತೆಯನ್ನು ಸಿಮೆಂಟ್ ರಸ್ತೆಯನ್ನಾಗಿ ಮಾಡುವಂತೆ ಪಿಡಬ್ಲೂಡಿ ಮಿನಿಸ್ಟರ್ ಗೋವಿಂದ‌ ಕಾರಜೋಳ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಇದೇ ಸಂದರ್ಭದಲ್ಲಿ ಹೇಳಿದರು. ಬಹದ್ದೂರಬಂಡಿ ನೂತನ ರಸ್ತೆ ಕಿತ್ತುಹೋಗಿದ್ದ ಕುರಿತಂತೆ ಈಟಿವಿ ಭಾರತ ವರದಿ ಪ್ರಕಟಿಸಿತ್ತು.

ಬೈಟ್1:- ಕೆ. ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಶಾಸಕ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.