ETV Bharat / state

ಕುಷ್ಟಗಿ ಬಳಿ ಅಪಘಾತ: ಐವರಿಗೆ ಗಂಭೀರ ಗಾಯ, 8 ಜನ ಆಸ್ಪತ್ರೆಗೆ ದಾಖಲು - ಕೊಪ್ಪಳ ಸುದ್ದಿ

ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ದೇವರ ದರ್ಶನ ಮುಗಿಸಿ ತಮ್ಮೂರಿಗೆ ವಾಪಸ್​ ಆಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರೊಂದು ಟಂಟಂಗೆ ಡಿಕ್ಕಿ ಹೊಡೆದಿದೆ.

ಕುಷ್ಟಗಿ ಬಳಿ ಅಪಘಾತ
author img

By

Published : Oct 9, 2019, 1:47 PM IST

ಕೊಪ್ಪಳ: ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್​​ ಆಗುತ್ತಿದ್ದ ಟಂಟಂ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 8 ಜನರು ಗಾಯಗೊಂಡಿದ್ದಾರೆ.

ಕುಷ್ಟಗಿ ಬಳಿ ಅಪಘಾತ

ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ‌. ಗಾಯಾಳುಗಳು ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದವರಾಗಿದ್ದಾರೆ. ಇವರು ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದುಕೊಂಡು ತಮ್ಮೂರಿಗೆ ವಾಪಸ್​ ಆಗುತ್ತಿದ್ದರು.

ಕುಷ್ಟಗಿ ಬಳಿ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಟಂಟಂ ನಲ್ಲಿದ್ದ ಅಂಬಮ್ಮ ಹನಮಂತ ಗೋಪಾಳಿ, ಪರಸಪ್ಪ ಶರಣಪ್ಪ ಓಣಿಮನಿ, ಚನ್ನಪ್ಪ ಗೋಪಾಳಿ, ಮಂಜುನಾಥ ಗೋಪಾಳಿ ಸೇರಿದಂತೆ ಎಂಟು ಜನರಿಗೆ ಗಾಯಗಳಾಗಿವೆ.

ಈ ಪೈಕಿ ಐವರಿಗೆ ತೀವ್ರ ಗಾಯವಾಗಿದ್ದು, ಇನ್ನು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಹಶೀಲ್ದಾರ್ ಕೆ.ಎಂ.ಗುರು ಬಸವರಾಜ ಅವರು, ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಕುಷ್ಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಪ್ಪಳ: ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್​​ ಆಗುತ್ತಿದ್ದ ಟಂಟಂ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 8 ಜನರು ಗಾಯಗೊಂಡಿದ್ದಾರೆ.

ಕುಷ್ಟಗಿ ಬಳಿ ಅಪಘಾತ

ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ‌. ಗಾಯಾಳುಗಳು ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದವರಾಗಿದ್ದಾರೆ. ಇವರು ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದುಕೊಂಡು ತಮ್ಮೂರಿಗೆ ವಾಪಸ್​ ಆಗುತ್ತಿದ್ದರು.

ಕುಷ್ಟಗಿ ಬಳಿ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಟಂಟಂ ನಲ್ಲಿದ್ದ ಅಂಬಮ್ಮ ಹನಮಂತ ಗೋಪಾಳಿ, ಪರಸಪ್ಪ ಶರಣಪ್ಪ ಓಣಿಮನಿ, ಚನ್ನಪ್ಪ ಗೋಪಾಳಿ, ಮಂಜುನಾಥ ಗೋಪಾಳಿ ಸೇರಿದಂತೆ ಎಂಟು ಜನರಿಗೆ ಗಾಯಗಳಾಗಿವೆ.

ಈ ಪೈಕಿ ಐವರಿಗೆ ತೀವ್ರ ಗಾಯವಾಗಿದ್ದು, ಇನ್ನು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಹಶೀಲ್ದಾರ್ ಕೆ.ಎಂ.ಗುರು ಬಸವರಾಜ ಅವರು, ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಿಗೆ ಕುಷ್ಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Intro:Body:ಕೊಪ್ಪಳ:- ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಾಸ್ಸಾಗುತ್ತಿದ್ದ ಟಂಟಂ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ 8 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಯಲದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ‌. ಗಾಯಾಳುಗಳು ಕುಷ್ಟಗಿ ತಾಲೂಕಿನ ಕಂದಕೂರು ಗ್ರಾಮದವರಾಗಿದ್ದಾರೆ. ಇವರು ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದುಕೊಂಡು ತಮ್ಮೂರಿಗೆ ವಾಪಾಸ್ಸಾಗುತ್ತಿದ್ದರು. ಕುಷ್ಟಗಿ ಬಳಿ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಟಂಟಂ ನಲ್ಲಿದ್ದ ಅಂಬಮ್ಮ ಹನಮಂತ ಗೋಪಾಳಿ, ಪರಸಪ್ಪ ಶರಣಪ್ಪ ಓಣಿಮನಿ, ಚನ್ನಪ್ಪ ಗೋಪಾಳಿ, ಮಂಜುನಾಥ ಗೋಪಾಳಿ ಸೇರಿದಂತೆ ಎಂಟು ಜನರಿಗೆ ಗಾಯಗಳಾಗಿವೆ. ಈಪೈಕಿ ಐವರಿಗೆ ತೀವ್ರ ಗಾಯವಾಗಿದೆ. ಇನ್ನು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಹಶೀಲ್ದಾರ ಕೆ.ಎಂ.ಗುರುಬಸವರಾಜ ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ರವಾನೆ ಮಾಡಿ ಮಾನವೀಯತೆ ಮೆರೆದರು. ಗಾಯಾಳುಗಳಿಗೆ ಕುಷ್ಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.