ETV Bharat / state

ಬದು ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದ ಮಹಿಳೆ ಆಕಸ್ಮಿಕ ಸಾವು.. - Employment Guarantee Scheme

ಮಹಿಳೆಗೆ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Accidental death of a wage laborer in Kushtagi
ಬದು ನಿರ್ಮಾಣ ಕೆಲಸದಲ್ಲಿ ನಿರತ ಕೂಲಿ ಮಹಿಳೆ ಆಕಸ್ಮಿಕ ಸಾವು
author img

By

Published : May 1, 2020, 9:38 AM IST

ಕುಷ್ಟಗಿ(ಕೊಪ್ಪಳ) : ತಾಲೂಕಿನ ಕಳಮಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣದ ಕೆಲಸದಲ್ಲಿ ನಿರತರಾಗಿದ್ದ ಕೂಲಿಕಾರ ಮಹಿಳೆಯ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ.

ಕಳೆದ ಬುಧವಾರ ಬೆಳಗ್ಗೆ ಕಳಮಳ್ಳಿ ಸೀಮಾದ ಜಮೀನಿನಲ್ಲಿ ಬದು ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದ ಗುರುಪಾದಮ್ಮ ಕುಂಬಾರ (45) ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸ್ವಸ್ಥಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಆಕೆಗೆ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸದ್ಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮೃತ ಮಹಿಳೆಗೆ ಪರಿಹಾರವಾಗಿ 75 ಸಾವಿರ ರೂ. ನೀಡಲಾಗುವುದು ಎಂದು ನರೇಗಾ ಯೋಜನೆ ಸಹಾಯಕ ನಿರ್ದೇಶಕ ಅರುಣ್‌ಕುಮಾರ್‌ ದಳವಾಯಿ ಮಾಹಿತಿ ನೀಡಿದರು.

ಕುಷ್ಟಗಿ(ಕೊಪ್ಪಳ) : ತಾಲೂಕಿನ ಕಳಮಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಬದು ನಿರ್ಮಾಣದ ಕೆಲಸದಲ್ಲಿ ನಿರತರಾಗಿದ್ದ ಕೂಲಿಕಾರ ಮಹಿಳೆಯ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ.

ಕಳೆದ ಬುಧವಾರ ಬೆಳಗ್ಗೆ ಕಳಮಳ್ಳಿ ಸೀಮಾದ ಜಮೀನಿನಲ್ಲಿ ಬದು ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದ ಗುರುಪಾದಮ್ಮ ಕುಂಬಾರ (45) ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸ್ವಸ್ಥಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾರೆ. ಆಕೆಗೆ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸದ್ಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮೃತ ಮಹಿಳೆಗೆ ಪರಿಹಾರವಾಗಿ 75 ಸಾವಿರ ರೂ. ನೀಡಲಾಗುವುದು ಎಂದು ನರೇಗಾ ಯೋಜನೆ ಸಹಾಯಕ ನಿರ್ದೇಶಕ ಅರುಣ್‌ಕುಮಾರ್‌ ದಳವಾಯಿ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.