ಕೊಪ್ಪಳ: ಶನಿವಾರ ರಾತ್ರಿ ಬೀಸಿದ ಭಾರೀ ಗಾಳಿಗೆ ಕಷ್ಟಪಟ್ಟು ಬೆಳೆದ ಬಾಳೆ ಗಿಡಗಳು ನೆಲಕ್ಕುರುಳಿದ್ದು ರೈತ ಕಣ್ಣೀರಿಡುವಂತಾಗಿದೆ.
ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮಲ್ಲಿಕಾರ್ಜುನಗೌಡ ಎಂಬವರು ಸುಮಾರು 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಗಿಡಗಳು ನಾಶವಾಗಿವೆ.
ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತ ಬಾಳೆ ಗಿಡ ಹಾಕಿದ್ದು, ಇದೀಗ ಗಾಳಿ, ಮಳೆ ಆಹುತಿ ಪಡೆದಿದೆ.