ETV Bharat / state

ಅಪಘಾತದಲ್ಲಿ ನರಳಾಡುತ್ತಿದ್ದ ಯುವಕ: ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ

author img

By

Published : May 17, 2020, 8:52 PM IST

ಅಪಘಾತದಿಂದ ರಸ್ತೆಯಲ್ಲೇ ನರಳಾಡುತ್ತಿದ್ದ ಯುವಕನನ್ನು ಶಾಸಕ ಬಸವರಾಜ ದಢೇಸ್ಗೂರು ಆಸ್ಪತ್ರೆಗೆ ಸೇರಿಸಿರುವ ಘಟನೆ ಮರಳಿ-ಶ್ರೀರಾಮನಗರ ಮಾರ್ಗ ಮಧ್ಯೆದಲ್ಲಿ ನಡೆದಿದೆ.

bike accident in gangavati kanakagiri mla help
ಅಪಘಾತದಲ್ಲಿ ನರಳಾಡುತ್ತಿದ್ದ ಯುವಕ, ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಕನಕಗಿರಿ ಶಾಸಕ

ಗಂಗಾವತಿ: ಬೈಕ್ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ ಯುವಕನೊಬ್ಬನನ್ನು ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ್​ ದಢೇಸ್ಗೂರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.

ಕನಕಗಿರಿ ಕ್ಷೇತ್ರದ ನಾನಾ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಳ್ಳಲಾಗುತ್ತಿರುವ ನರೇಗಾ ಯೋಜನೆಯಲ್ಲಿನ ಕಾಮಗಾರಿಗಳ ಪರಿಶೀಲನೆಗೆ ಶಾಸಕರು ಕ್ಷೇತ್ರದಲ್ಲಿ ಸಂಚರಿಸುತ್ತಿದ್ದರು. ಮರಳಿಯಿಂದ ಶ್ರೀರಾಮನಗರಕ್ಕೆ ಹೋಗುವ ಮಾರ್ಗ ಮಧ್ಯೆದಲ್ಲಿ ದ್ವಿಚಕ್ರ ವಾಹನವೊಂದು ಅಪಘಾತಕ್ಕಿಡಾಗಿತ್ತು.

ಈ ಮಾರ್ಗದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಸಕ ಕೂಡಲೇ ವಾಹನದಿಂದ ಇಳಿದು ಅಪಾಯಕ್ಕೀಡಾದ ಯುವಕನನ್ನು ಮತ್ತೊಂದು ದ್ವಿಚಕ್ರ ವಾಹನದ ವ್ಯವಸ್ಥೆ ಮಾಡಿಸಿ ಆಸ್ಪತ್ರೆಗೆ ಕಳಿಸಿಕೊಟ್ಟು ಮಾನವೀಯತೆ ಮೆರೆದರು.

ಗಂಗಾವತಿ: ಬೈಕ್ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ ಯುವಕನೊಬ್ಬನನ್ನು ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ್​ ದಢೇಸ್ಗೂರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.

ಕನಕಗಿರಿ ಕ್ಷೇತ್ರದ ನಾನಾ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಳ್ಳಲಾಗುತ್ತಿರುವ ನರೇಗಾ ಯೋಜನೆಯಲ್ಲಿನ ಕಾಮಗಾರಿಗಳ ಪರಿಶೀಲನೆಗೆ ಶಾಸಕರು ಕ್ಷೇತ್ರದಲ್ಲಿ ಸಂಚರಿಸುತ್ತಿದ್ದರು. ಮರಳಿಯಿಂದ ಶ್ರೀರಾಮನಗರಕ್ಕೆ ಹೋಗುವ ಮಾರ್ಗ ಮಧ್ಯೆದಲ್ಲಿ ದ್ವಿಚಕ್ರ ವಾಹನವೊಂದು ಅಪಘಾತಕ್ಕಿಡಾಗಿತ್ತು.

ಈ ಮಾರ್ಗದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಾಸಕ ಕೂಡಲೇ ವಾಹನದಿಂದ ಇಳಿದು ಅಪಾಯಕ್ಕೀಡಾದ ಯುವಕನನ್ನು ಮತ್ತೊಂದು ದ್ವಿಚಕ್ರ ವಾಹನದ ವ್ಯವಸ್ಥೆ ಮಾಡಿಸಿ ಆಸ್ಪತ್ರೆಗೆ ಕಳಿಸಿಕೊಟ್ಟು ಮಾನವೀಯತೆ ಮೆರೆದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.