ETV Bharat / state

ನೀತಿ ಸಂಹಿತೆಯ ಬಿಸಿ: ಬಿ ಎಲ್ ಸಂತೋಷ್ ಭಾಷಣಕ್ಕೆ ಅಧಿಕಾರಿಗಳ ಬ್ರೇಕ್​

author img

By

Published : Apr 2, 2023, 6:50 PM IST

Updated : Apr 2, 2023, 8:25 PM IST

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​ ಸಂತೋಷ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ತಾಲ್ಲೂಕಿನ ಮರಳಿಯಲ್ಲಿ ನಡೆದಿದೆ.

bl-santhosh-speech-was-interrupted-by-officials
ನೀತಿ ಸಂಹಿತೆಯ ಬಿಸಿ: ಬಿ.ಎಲ್ ಸಂತೋಷ್ ಭಾಷಣಕ್ಕೆ ಅಧಿಕಾರಿಗಳ ಅಡ್ಡಿ
ನೀತಿ ಸಂಹಿತೆಯ ಬಿಸಿ: ಬಿ ಎಲ್ ಸಂತೋಷ್ ಭಾಷಣಕ್ಕೆ ಅಧಿಕಾರಿಗಳ ಬ್ರೇಕ್​

ಗಂಗಾವತಿ (ಕೊಪ್ಪಳ): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​ ಸಂತೋಷ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅನುಮತಿ ಪಡೆದ ಅವಧಿ ಮುಗಿದಿದ್ದರಿಂದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭಾಷಣ ನಿಲ್ಲಿಸಿ ಕಾರ್ಯಕ್ರಮ ಮೊಟಕುಗೊಳಿಸಿದ ಘಟನೆ ಗಂಗಾವತಿ ತಾಲೂಕಿನ ಮರಳಿಯಲ್ಲಿ ನಡೆದಿದೆ.

ತಾಲೂಕಿನ ಮರಳಿ ಗ್ರಾಮದ ಬಳಿ ಇರುವ ಖಾಸಗಿ ರೆಸಾರ್ಟ್​ನಲ್ಲಿ ಭಾನುವಾರ ಬಿಜೆಪಿಯ ಬಳ್ಳಾರಿ ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಬಳ್ಳಾರಿ ವಿಭಾಗ ವ್ಯಾಪ್ತಿಯ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು. ಸಭೆಯಲ್ಲಿ ನೆರೆದಿದ್ದ ಬಿಜೆಪಿಯ ಡಿಜಿಟಲ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿ ಎಲ್ ಸಂತೋಷ್, ಮುಂಬರುವ ಚುನಾವಣೆಯಲ್ಲಿ ಸೋಷಿಯಲ್ ಮೀಡಿಯಾದ ಜವಾಬ್ದಾರಿ ಮತ್ತು ಆದ್ಯತಾ ಕೆಲಸಗಳೇನು ಎಂಬುದರ ಬಗ್ಗೆ ಮಾತನಾಡುತ್ತಿದ್ದರು.

ಆದರೆ, ಪಕ್ಷದಿಂದ ಪಡೆದುಕೊಂಡಿದ್ದ ಅನುಮತಿಯ ಅವಧಿ ಮುಗಿದ ಹಿನ್ನೆಲೆ ಸ್ಥಳದಲ್ಲಿದ್ದ ಅಧಿಕಾರಿಗಳು ತಕ್ಷಣ ವೇದಿಕೆಯತ್ತ ನುಗ್ಗಿ ಸಂತೋಷ್ ಅವರ ಭಾಷಣ ನಿಲ್ಲಿಸಲು ಹೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ಮಧ್ಯೆ ವಾಗ್ವಾದ ನಡೆಯಿತು. ಇದನ್ನು ಗಮನಿಸುತ್ತಿದ್ದ ಸಮಾರಂಭದ ಕೇಂದ್ರ ಬಿಂದು ಬಿ ಎಲ್ ಸಂತೋಷ್ ತಮ್ಮ ಭಾಷಣವನ್ನು ಮೊಟಕುಗೊಳಿಸಿದರು. ಚುನಾವಣಾ ಅಧಿಕಾರಿಗಳು ತಮ್ಮ ಕರ್ತವ್ಯ ಪಾಲಿಸುತ್ತಿದ್ದಾರೆ. ಒಂದೊಮ್ಮೆ ಅವಧಿ ಮೀರಿದ ಅಥವಾ ನೀತಿ ಸಂಹಿತೆ ಉಲ್ಲಂಘಿಸಿದ್ದರ ಆರೋಪವಿದ್ದರೆ ನನ್ನ ಮೇಲೆ ಕೇಸು ಹಾಕಿ ಎಂದು ವೇದಿಕೆಯಿಂದ ನಿರ್ಗಮಿಸಿದರು.

ಈ ವೇಳೆ ಅಧಿಕಾರಿಗಳು ಸಂಬಂಧಿತ ಕಾರ್ಯಕ್ರಮದ ಆಯೋಜಕರಿಗೆ ನೋಟೀಸ್ ನೀಡುವುದಾಗಿ ಹೇಳಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು ಮೋದಿ-ಮೋದಿ ಎಂದು ಜಯಘೋಷ ಹಾಕುತ್ತಲೇ ಅಲ್ಲಿಂದ ಹೊರ ನಡೆದರು. ಹತ್ತು ಗಂಟೆಗೆ ನಿಗದಿಯಾಗಿದ್ದ ಸಭೆ, 11 ಗಂಟೆಗೆ ಮಾಧ್ಯಮದ ಪ್ರತಿನಿಧಿಗಳಿಗಾಗಿ ಸಾಂಕೇತಿಕವಾಗಿ ಕಾರ್ಯಕ್ರಮ ಉದ್ಘಾಟಿಸಿ ಹಲವರು ಮಾತನಾಡಿದರು. ಒಂದು ಗಂಟೆಗೆ ವೇದಿಕೆಗೆ ಬಂದ ಬಿ ಎಲ್​​ ಸಂತೋಷ್, ಭಾಷಣ ಆರಂಭಿಸಿದರು. ಭಾಷಣ ಆರಂಭಿಸುವ ಹೊತ್ತಿಗಾಗಲೇ ಅನುಮತಿ ಪಡೆದಿದ್ದ ಅವಧಿ ಮುಗಿಯುತ್ತಾ ಬಂದಿತ್ತು.

ನೀರು, ಊಟಕ್ಕೆ ಪರದಾಟ : ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ ಡಿಜಿಟಲ್ ಸಮಾವೇಶಕ್ಕೆ ಬಳ್ಳಾರಿ ವಲಯದ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರನ್ನು ಖಾಸಗಿ ವಾಹನಗಳಲ್ಲಿ ಕರೆತರಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಬಂದವರಿಗೆ ಕೇವಲ ಕುಡಿಯುವ ನೀರು ಮತ್ತು ಸೀಮಿತ ಜನರಿಗೆ ಮಜ್ಜಿಗೆಯ ವ್ಯವಸ್ಥೆ ಬಿಟ್ಟರೆ ಬೇರೆ ಉಪಹಾರ, ಊಟದ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಅನ್ಯ ಜಿಲ್ಲೆಯ ಕಾರ್ಯಕರ್ತರು ಊಟಕ್ಕೆ ಪರದಾಡುವ ಸನ್ನಿವೇಶ ನಿರ್ಮಾಣವಗಿತ್ತು.

ನೀತಿ ಸಂಹಿತೆ ಅಡ್ಡಿ ಮತ್ತು ಸಮಾವೇಶದ ಖರ್ಚು ವೆಚ್ಚದ ವಿವರ ನೀಡಬೇಕಿರುವ ಹಿನ್ನೆಲೆ ಸಮಾವೇಶ ಆಯೋಜಕರು ಊಟದ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಕೆಲವರು ತಮ್ಮದೇ ಜೇಬಿನಿಂದ ಹಣ ತೆತ್ತು ಅದೇ ಹೊಟೇಲ್​ನಲ್ಲಿ ಊಟ ಮಾಡಿದರು.

ಇದನ್ನೂ ಓದಿ: ಕನಕಪುರದಲ್ಲಿ ಮಂಡ್ಯ ಯುವಕ ಅನುಮಾನಾಸ್ಪದ ಸಾವು; ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ನೀತಿ ಸಂಹಿತೆಯ ಬಿಸಿ: ಬಿ ಎಲ್ ಸಂತೋಷ್ ಭಾಷಣಕ್ಕೆ ಅಧಿಕಾರಿಗಳ ಬ್ರೇಕ್​

ಗಂಗಾವತಿ (ಕೊಪ್ಪಳ): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​ ಸಂತೋಷ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಅನುಮತಿ ಪಡೆದ ಅವಧಿ ಮುಗಿದಿದ್ದರಿಂದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭಾಷಣ ನಿಲ್ಲಿಸಿ ಕಾರ್ಯಕ್ರಮ ಮೊಟಕುಗೊಳಿಸಿದ ಘಟನೆ ಗಂಗಾವತಿ ತಾಲೂಕಿನ ಮರಳಿಯಲ್ಲಿ ನಡೆದಿದೆ.

ತಾಲೂಕಿನ ಮರಳಿ ಗ್ರಾಮದ ಬಳಿ ಇರುವ ಖಾಸಗಿ ರೆಸಾರ್ಟ್​ನಲ್ಲಿ ಭಾನುವಾರ ಬಿಜೆಪಿಯ ಬಳ್ಳಾರಿ ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಬಳ್ಳಾರಿ ವಿಭಾಗ ವ್ಯಾಪ್ತಿಯ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗಿಯಾಗಿದ್ದರು. ಸಭೆಯಲ್ಲಿ ನೆರೆದಿದ್ದ ಬಿಜೆಪಿಯ ಡಿಜಿಟಲ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿ ಎಲ್ ಸಂತೋಷ್, ಮುಂಬರುವ ಚುನಾವಣೆಯಲ್ಲಿ ಸೋಷಿಯಲ್ ಮೀಡಿಯಾದ ಜವಾಬ್ದಾರಿ ಮತ್ತು ಆದ್ಯತಾ ಕೆಲಸಗಳೇನು ಎಂಬುದರ ಬಗ್ಗೆ ಮಾತನಾಡುತ್ತಿದ್ದರು.

ಆದರೆ, ಪಕ್ಷದಿಂದ ಪಡೆದುಕೊಂಡಿದ್ದ ಅನುಮತಿಯ ಅವಧಿ ಮುಗಿದ ಹಿನ್ನೆಲೆ ಸ್ಥಳದಲ್ಲಿದ್ದ ಅಧಿಕಾರಿಗಳು ತಕ್ಷಣ ವೇದಿಕೆಯತ್ತ ನುಗ್ಗಿ ಸಂತೋಷ್ ಅವರ ಭಾಷಣ ನಿಲ್ಲಿಸಲು ಹೇಳಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ಮಧ್ಯೆ ವಾಗ್ವಾದ ನಡೆಯಿತು. ಇದನ್ನು ಗಮನಿಸುತ್ತಿದ್ದ ಸಮಾರಂಭದ ಕೇಂದ್ರ ಬಿಂದು ಬಿ ಎಲ್ ಸಂತೋಷ್ ತಮ್ಮ ಭಾಷಣವನ್ನು ಮೊಟಕುಗೊಳಿಸಿದರು. ಚುನಾವಣಾ ಅಧಿಕಾರಿಗಳು ತಮ್ಮ ಕರ್ತವ್ಯ ಪಾಲಿಸುತ್ತಿದ್ದಾರೆ. ಒಂದೊಮ್ಮೆ ಅವಧಿ ಮೀರಿದ ಅಥವಾ ನೀತಿ ಸಂಹಿತೆ ಉಲ್ಲಂಘಿಸಿದ್ದರ ಆರೋಪವಿದ್ದರೆ ನನ್ನ ಮೇಲೆ ಕೇಸು ಹಾಕಿ ಎಂದು ವೇದಿಕೆಯಿಂದ ನಿರ್ಗಮಿಸಿದರು.

ಈ ವೇಳೆ ಅಧಿಕಾರಿಗಳು ಸಂಬಂಧಿತ ಕಾರ್ಯಕ್ರಮದ ಆಯೋಜಕರಿಗೆ ನೋಟೀಸ್ ನೀಡುವುದಾಗಿ ಹೇಳಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು ಮೋದಿ-ಮೋದಿ ಎಂದು ಜಯಘೋಷ ಹಾಕುತ್ತಲೇ ಅಲ್ಲಿಂದ ಹೊರ ನಡೆದರು. ಹತ್ತು ಗಂಟೆಗೆ ನಿಗದಿಯಾಗಿದ್ದ ಸಭೆ, 11 ಗಂಟೆಗೆ ಮಾಧ್ಯಮದ ಪ್ರತಿನಿಧಿಗಳಿಗಾಗಿ ಸಾಂಕೇತಿಕವಾಗಿ ಕಾರ್ಯಕ್ರಮ ಉದ್ಘಾಟಿಸಿ ಹಲವರು ಮಾತನಾಡಿದರು. ಒಂದು ಗಂಟೆಗೆ ವೇದಿಕೆಗೆ ಬಂದ ಬಿ ಎಲ್​​ ಸಂತೋಷ್, ಭಾಷಣ ಆರಂಭಿಸಿದರು. ಭಾಷಣ ಆರಂಭಿಸುವ ಹೊತ್ತಿಗಾಗಲೇ ಅನುಮತಿ ಪಡೆದಿದ್ದ ಅವಧಿ ಮುಗಿಯುತ್ತಾ ಬಂದಿತ್ತು.

ನೀರು, ಊಟಕ್ಕೆ ಪರದಾಟ : ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ ಡಿಜಿಟಲ್ ಸಮಾವೇಶಕ್ಕೆ ಬಳ್ಳಾರಿ ವಲಯದ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರನ್ನು ಖಾಸಗಿ ವಾಹನಗಳಲ್ಲಿ ಕರೆತರಲಾಗಿತ್ತು. ಆದರೆ ಕಾರ್ಯಕ್ರಮಕ್ಕೆ ಬಂದವರಿಗೆ ಕೇವಲ ಕುಡಿಯುವ ನೀರು ಮತ್ತು ಸೀಮಿತ ಜನರಿಗೆ ಮಜ್ಜಿಗೆಯ ವ್ಯವಸ್ಥೆ ಬಿಟ್ಟರೆ ಬೇರೆ ಉಪಹಾರ, ಊಟದ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಅನ್ಯ ಜಿಲ್ಲೆಯ ಕಾರ್ಯಕರ್ತರು ಊಟಕ್ಕೆ ಪರದಾಡುವ ಸನ್ನಿವೇಶ ನಿರ್ಮಾಣವಗಿತ್ತು.

ನೀತಿ ಸಂಹಿತೆ ಅಡ್ಡಿ ಮತ್ತು ಸಮಾವೇಶದ ಖರ್ಚು ವೆಚ್ಚದ ವಿವರ ನೀಡಬೇಕಿರುವ ಹಿನ್ನೆಲೆ ಸಮಾವೇಶ ಆಯೋಜಕರು ಊಟದ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಕೆಲವರು ತಮ್ಮದೇ ಜೇಬಿನಿಂದ ಹಣ ತೆತ್ತು ಅದೇ ಹೊಟೇಲ್​ನಲ್ಲಿ ಊಟ ಮಾಡಿದರು.

ಇದನ್ನೂ ಓದಿ: ಕನಕಪುರದಲ್ಲಿ ಮಂಡ್ಯ ಯುವಕ ಅನುಮಾನಾಸ್ಪದ ಸಾವು; ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

Last Updated : Apr 2, 2023, 8:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.