ಕೊಪ್ಪಳ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜ.23 ರಿಂದ 30 ರವರೆಗೆ ಸಂವಿಧಾನ ಉಳಿಸಿ, ಪೌರತ್ವ ರಕ್ಷಿಸಿ ಘೋಷಣೆಯೊಂದಿಗೆ ಅಭಿಯಾನ ನಡೆಸಲಾಗುತ್ತಿದೆ ಎಂದು ವೆಲ್ಫೇರ್ ಪಾರ್ಟಿ ಜಿಲ್ಲಾಧ್ಯಕ್ಷ ಆದಿಲ್ ಪಟೇಲ್ ಹೇಳಿದ್ದಾರೆ.
ನಗರದ ಮೀಡಿಯಾ ಕ್ಲಬ್ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಕಾಯ್ದೆ ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತಿದೆ. ಸಿಎಎ ಕಾಯ್ದೆಯ ಜೊತೆಗೆ ಎನ್ಆರ್ಸಿ ಹಾಗೂ ಎನ್ಪಿಆರ್ ಕಾಯ್ದೆಯನ್ನು ಸಹ ನಮ್ಮ ಪಕ್ಷ ವಿರೋಧಿಸುತ್ತದೆ ಎಂದಿದ್ದಾರೆ.
ಪಕ್ಷ ಈಗಾಗಲೇ ಸಿಎಎ ಕಾಯ್ದೆ ಜಾರಿ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಅಲ್ಲದೆ, ಸಂವಿಧಾನ ಉಳಿಸಿ, ಪೌರತ್ವ ರಕ್ಷಿಸಿ ಎಂಬ ಘೋಷವಾಕ್ಯದೊಂದಿಗೆ ದೇಶವ್ಯಾಪಿಯಾಗಿ ಜನವರಿ 23 ರಿಂದ 30 ರವರೆಗೆ ಅಭಿಯಾನ ಹಮ್ಮಿಕೊಂಡಿದೆ ಎಂದು ಮಾಹಿತಿ ನೀಡಿದರು.