ETV Bharat / state

ಮಾಜಿ ಸಚಿವ ತಂಗಡಗಿಯಿಂದ ರಸ್ತೆ ಕಾಮಗಾರಿ ಹಣ ಗುಳುಂ: ದಲಿತ ಮುಖಂಡನ ಆರೋಪ - Dalit leader Hussainappa

ರಸ್ತೆ ನಿರ್ಮಾಣ ಕಾಮಗಾರಿಗೆ ಎಂದು ಕನಕಗಿರಿ ಕ್ಷೇತ್ರಕ್ಕೆ ಬಿಡುಗಡೆಯಾದ ನಾಲ್ಕು ಕೋಟಿ ರೂಪಾಯಿ ಹಣವನ್ನು ಬೋಗಸ್ ಬಿಲ್ ಸೃಷ್ಟಿಸಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ದಲಿತ ಮುಖಂಡ ಹುಸೇನಪ್ಪ ಆರೋಪಿಸಿದ್ದಾರೆ.

dsd
ದಲಿತ ಮುಖಂಡನ ಆರೋಪ
author img

By

Published : Jun 16, 2020, 4:43 PM IST

ಗಂಗಾವತಿ: ರಸ್ತೆ ನಿರ್ಮಾಣ ಕಾಮಗಾರಿಗೆ ಎಂದು ಕನಕಗಿರಿ ಕ್ಷೇತ್ರಕ್ಕೆ ಬಿಡುಗಡೆಯಾದ ನಾಲ್ಕು ಕೋಟಿ ರೂಪಾಯಿ ಮೊತ್ತದ ಅನುದಾನಕ್ಕೆ ಬೋಗಸ್ ಬಿಲ್ ಸೃಷ್ಟಿಸಿ ಸಂಪೂರ್ಣ ಹಣ ನುಂಗಿ ಹಾಕಲಾಗಿದೆ ಎಂದು ದಲಿತ ಮುಖಂಡ ಹುಸೇನಪ್ಪ ಆರೋಪಿಸಿದ್ದಾರೆ.

ದಲಿತ ಮುಖಂಡನ ಆರೋಪ

ಈ ಪ್ರಕರಣದಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಗುತ್ತಿಗೆದಾರ ಸಂಕ್ರಾಂತಿ ಪ್ರಸಾದ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಪಾತ್ರವಿದೆ. ಕೂಡಲೇ ಜಿಲ್ಲಾಧಿಕಾರಿ ಖಾಸಗಿ ಸಂಸ್ಥೆಯಿಂದ ಸ್ವತಂತ್ರ ತನಿಖೆ ಕೈಗೊಳ್ಳಬೇಕು.

20016 ರಲ್ಲಿ ರಾಯಚೂರು-ಕೊಪ್ಪಳ ಮುಖ್ಯ ರಸ್ತೆಯಲ್ಲಿನ ಮರಲನಹಳ್ಳಿಯಿಂದ ಸಿದ್ದಾಪುರದವರೆಗೆ ಆರು ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿಗೆ ಎಂದು 4 ಕೋಟಿ ಬಿಡುಗಡೆಯಾಗಿತ್ತು. ಆದರೆ ಯಾವುದೇ ಕಾಮಗಾರಿ ಕೈಗೊಳ್ಳದೇ ಸಂಪೂರ್ಣ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕಳೆದ ಎರಡು ವರ್ಷದಿಂದ ದೂರು ಸಲ್ಲಿಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಇದಕ್ಕೆ ಸಂಬಂಧಿಸದಂತೆ ದಾಖಲೆ ಸಲ್ಲಿಸಲು ನಾನು ಸಿದ್ದ ಎಂದರು.

ಗಂಗಾವತಿ: ರಸ್ತೆ ನಿರ್ಮಾಣ ಕಾಮಗಾರಿಗೆ ಎಂದು ಕನಕಗಿರಿ ಕ್ಷೇತ್ರಕ್ಕೆ ಬಿಡುಗಡೆಯಾದ ನಾಲ್ಕು ಕೋಟಿ ರೂಪಾಯಿ ಮೊತ್ತದ ಅನುದಾನಕ್ಕೆ ಬೋಗಸ್ ಬಿಲ್ ಸೃಷ್ಟಿಸಿ ಸಂಪೂರ್ಣ ಹಣ ನುಂಗಿ ಹಾಕಲಾಗಿದೆ ಎಂದು ದಲಿತ ಮುಖಂಡ ಹುಸೇನಪ್ಪ ಆರೋಪಿಸಿದ್ದಾರೆ.

ದಲಿತ ಮುಖಂಡನ ಆರೋಪ

ಈ ಪ್ರಕರಣದಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಗುತ್ತಿಗೆದಾರ ಸಂಕ್ರಾಂತಿ ಪ್ರಸಾದ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಪಾತ್ರವಿದೆ. ಕೂಡಲೇ ಜಿಲ್ಲಾಧಿಕಾರಿ ಖಾಸಗಿ ಸಂಸ್ಥೆಯಿಂದ ಸ್ವತಂತ್ರ ತನಿಖೆ ಕೈಗೊಳ್ಳಬೇಕು.

20016 ರಲ್ಲಿ ರಾಯಚೂರು-ಕೊಪ್ಪಳ ಮುಖ್ಯ ರಸ್ತೆಯಲ್ಲಿನ ಮರಲನಹಳ್ಳಿಯಿಂದ ಸಿದ್ದಾಪುರದವರೆಗೆ ಆರು ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿಗೆ ಎಂದು 4 ಕೋಟಿ ಬಿಡುಗಡೆಯಾಗಿತ್ತು. ಆದರೆ ಯಾವುದೇ ಕಾಮಗಾರಿ ಕೈಗೊಳ್ಳದೇ ಸಂಪೂರ್ಣ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕಳೆದ ಎರಡು ವರ್ಷದಿಂದ ದೂರು ಸಲ್ಲಿಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಇದಕ್ಕೆ ಸಂಬಂಧಿಸದಂತೆ ದಾಖಲೆ ಸಲ್ಲಿಸಲು ನಾನು ಸಿದ್ದ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.