ಗಂಗಾವತಿ: ರಸ್ತೆ ನಿರ್ಮಾಣ ಕಾಮಗಾರಿಗೆ ಎಂದು ಕನಕಗಿರಿ ಕ್ಷೇತ್ರಕ್ಕೆ ಬಿಡುಗಡೆಯಾದ ನಾಲ್ಕು ಕೋಟಿ ರೂಪಾಯಿ ಮೊತ್ತದ ಅನುದಾನಕ್ಕೆ ಬೋಗಸ್ ಬಿಲ್ ಸೃಷ್ಟಿಸಿ ಸಂಪೂರ್ಣ ಹಣ ನುಂಗಿ ಹಾಕಲಾಗಿದೆ ಎಂದು ದಲಿತ ಮುಖಂಡ ಹುಸೇನಪ್ಪ ಆರೋಪಿಸಿದ್ದಾರೆ.
ಈ ಪ್ರಕರಣದಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ, ಗುತ್ತಿಗೆದಾರ ಸಂಕ್ರಾಂತಿ ಪ್ರಸಾದ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಪಾತ್ರವಿದೆ. ಕೂಡಲೇ ಜಿಲ್ಲಾಧಿಕಾರಿ ಖಾಸಗಿ ಸಂಸ್ಥೆಯಿಂದ ಸ್ವತಂತ್ರ ತನಿಖೆ ಕೈಗೊಳ್ಳಬೇಕು.
20016 ರಲ್ಲಿ ರಾಯಚೂರು-ಕೊಪ್ಪಳ ಮುಖ್ಯ ರಸ್ತೆಯಲ್ಲಿನ ಮರಲನಹಳ್ಳಿಯಿಂದ ಸಿದ್ದಾಪುರದವರೆಗೆ ಆರು ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿಗೆ ಎಂದು 4 ಕೋಟಿ ಬಿಡುಗಡೆಯಾಗಿತ್ತು. ಆದರೆ ಯಾವುದೇ ಕಾಮಗಾರಿ ಕೈಗೊಳ್ಳದೇ ಸಂಪೂರ್ಣ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕಳೆದ ಎರಡು ವರ್ಷದಿಂದ ದೂರು ಸಲ್ಲಿಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಇದಕ್ಕೆ ಸಂಬಂಧಿಸದಂತೆ ದಾಖಲೆ ಸಲ್ಲಿಸಲು ನಾನು ಸಿದ್ದ ಎಂದರು.