ETV Bharat / state

ಚೆಕ್ ಡ್ಯಾಂ ನಿರ್ಮಾಣದಲ್ಲಿ ಗೋಲ್‌ಮಾಲ್.. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

author img

By

Published : Nov 27, 2019, 5:28 PM IST

ಕುಷ್ಟಗಿ ತಾಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣದಲ್ಲಿ ಸಾಕಷ್ಟು ಗೋಲ್‌ಮಾಲ್ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಕೃಷಿಕ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದ್ದಾರೆ.

KN_KPL_03_KRAMAKKE_AAGRAHA_VISUALS_7202284
ಚೆಕ್ ಡ್ಯಾಂ ನಿರ್ಮಾಣದಲ್ಲಿ ಗೋಲ್ ಮಾಲ್: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಕೊಪ್ಪಳ: ಕುಷ್ಟಗಿ ತಾಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣದಲ್ಲಿ ಸಾಕಷ್ಟು ಗೋಲ್‌ಮಾಲ್ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಕೃಷಿಕ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದ್ದಾರೆ.

ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ..

ಕುಷ್ಟಗಿ ತಾಲೂಕಿನಲ್ಲಿ ಅಂತರ್ಜಲ ಕುಸಿತವಾಗಿದೆ. ಬೇಸಿಗೆ ಬಂದ್ರೆ ಕುಡಿಯುವ ನೀರಿಗೂ ತತ್ವಾರ. ಉದ್ಯೋಗ ಖಾತ್ರಿ ಯೋಜನೆ 2018-19ನೇ ಸಾಲಿನಲ್ಲಿ ತಾಲೂಕಿನಲ್ಲಿ 635 ಚೆಕ್ ಡ್ಯಾಂ ನಿರ್ಮಾಣ ಮಾಡಬೇಕಿತ್ತು. ಆದರೆ, ಕೆಲವೆಡೆ ಚೆಕ್ ಡ್ಯಾಂನ ಸರಿಯಾಗಿ ನಿರ್ಮಾಣ ಮಾಡದ ಹಿನ್ನೆಲೆ ಮಳೆಯಾದರೂ ಹನಿ ನೀರು ನಿಂತಿಲ್ಲ. ಕಳಪೆ ಮಟ್ಟದಲ್ಲಿ ಕೆಲಸ ಮಾಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಅವರಿಂದಲೇ ಚೆಕ್ ಡ್ಯಾಂ ನಿರ್ಮಾಣ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೊಪ್ಪಳ: ಕುಷ್ಟಗಿ ತಾಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣದಲ್ಲಿ ಸಾಕಷ್ಟು ಗೋಲ್‌ಮಾಲ್ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಕೃಷಿಕ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದ್ದಾರೆ.

ಪ್ರಗತಿಪರ ರೈತ ದೇವೇಂದ್ರಪ್ಪ ಬಳೂಟಗಿ..

ಕುಷ್ಟಗಿ ತಾಲೂಕಿನಲ್ಲಿ ಅಂತರ್ಜಲ ಕುಸಿತವಾಗಿದೆ. ಬೇಸಿಗೆ ಬಂದ್ರೆ ಕುಡಿಯುವ ನೀರಿಗೂ ತತ್ವಾರ. ಉದ್ಯೋಗ ಖಾತ್ರಿ ಯೋಜನೆ 2018-19ನೇ ಸಾಲಿನಲ್ಲಿ ತಾಲೂಕಿನಲ್ಲಿ 635 ಚೆಕ್ ಡ್ಯಾಂ ನಿರ್ಮಾಣ ಮಾಡಬೇಕಿತ್ತು. ಆದರೆ, ಕೆಲವೆಡೆ ಚೆಕ್ ಡ್ಯಾಂನ ಸರಿಯಾಗಿ ನಿರ್ಮಾಣ ಮಾಡದ ಹಿನ್ನೆಲೆ ಮಳೆಯಾದರೂ ಹನಿ ನೀರು ನಿಂತಿಲ್ಲ. ಕಳಪೆ ಮಟ್ಟದಲ್ಲಿ ಕೆಲಸ ಮಾಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಅವರಿಂದಲೇ ಚೆಕ್ ಡ್ಯಾಂ ನಿರ್ಮಾಣ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ.

Intro:


Body:ಕೊಪ್ಪಳ:- ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣದಲ್ಲಿ ಸಾಕಷ್ಟು ಗೋಲ್ಮಾಲ್‌ ನಡೆದಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಗತಿಪರ ಕೃಷಿಕ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದ್ದಾರೆ. ನಗರದ ಮೀಡಿಯಾ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಷ್ಟಗಿ ತಾಲೂಕಿನಲ್ಲಿ ಅಂತರ್ಜಲ ಕುಸಿತವಾಗಿದೆ.‌ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತತ್ವಾರ ಶುರುವಾಗುತ್ತದೆ. ಅಂಜರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಚೆಕ್ ಡ್ಯಾಂ‌ ನಿರ್ಮಾಣ ಮಾಡುತ್ತದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ 2018-19 ನೇ ಸಾಲಿನಲ್ಲಿ ಕುಷ್ಟಗಿ ತಾಲೂಕಿನಲ್ಲಿ 635 ಚೆಕ್ ಡ್ಯಾಂ ನಿರ್ಮಾಣ ಮಾಡಬೇಕಿತ್ತು. ಆದರೆ, ಕೆಲವೆಡೆ ಚೆಕ್ ಡ್ಯಾಂನ್ನು ಸರಿಯಾಗಿ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಮಳೆಯಾದರೂ ಹನಿ ನೀರು ನಿಂತಿಲ್ಲ. ಕಳಪೆ ಮಟ್ಟದಲ್ಲಿ ಕೆಲಸ ಮಾಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಮನವಿ ಸಲ್ಲಿಸಲಾಗಿದೆ. ಚೆಕ್ ಡ್ಯಾಂ ನಿರ್ಮಾಣದಲ್ಲಾದ ಕೋಟ್ಯಂತರ ರುಪಾಯಿ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಅವರಿಂದಲೇ ಚೆಕ್ ಡ್ಯಾಂ ಗಳನ್ನು ಪುನರ್ನಿರ್ಮಾಣ‌ ಮಾಡಿಸಬೇಕು ಎಂದು ಆಗ್ರಹಿಸಿದರು. ಹೋರಾಟಗಾರರಾದ ವಿಠ್ಠಪ್ಪ ಗೋರಂಟ್ಲಿ, ಆನಂದ ಭಂಡಾರಿ, ಹಿರೇಮಠ, ಡಿ.ಎಚ್. ಪೂಜಾರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.