ಕೊಪ್ಪಳ: ಜೆಎನ್ ಯು ನಲ್ಲಿ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ ಎಐಡಿಎಸ್ಓ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಅವರು, ಜೆಎನ್ಯು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಮುಖಕ್ಕೆ ಮುಸುಕು ಹಾಕಿಕೊಂಡು ಮನಬಂದಂತೆ ದಾಳಿ ನಡೆಸಿದ್ದಾರೆ. ದಾಳಿಯಿಂದ ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ದಾಳಿ ಮಾಡಿರುವ ದುಷ್ಕರ್ಮಿಗಳಿಗೆ ಜೆಎನ್ಯು ಆಡಳಿತ ಮಂಡಳಿ ಬೆಂಬಲವಾಗಿ ನಿಂತಿದೆ ಎಂದು ಆರೋಪಿಸಿದರು.
ದಾಳಿ ಮಾಡಿದವರನ್ನು ಕೂಡಲೇ ಬಂಧಿಸಬೇಕು ಹಾಗೂ ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.