ಕೊಪ್ಪಳ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಜಿಲ್ಲೆಯಲ್ಲಿನ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ವಿದೇಶದಿಂದ ಬಂದಿರುವ ಒಟ್ಟು 35 ಜನರ ಮೇಲೆ ನಿಗಾ ಇಡಲಾಗಿದೆ. ಈ 35 ಜನರಲ್ಲಿ 19 ಜನರಿಗೆ 14 ದಿನಗಳ ತಪಾಸಣೆ ಮುಗಿದಿದೆ. ಉಳಿದವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಈ ಪೈಕಿ ಓರ್ವ ವ್ಯಕ್ತಿಗೆ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆ ವ್ಯಕ್ತಿಯ ಗಂಟಲು ದ್ರವವನ್ನ ಲ್ಯಾಬ್ಗೆ ರವಾನಿಸಲಾಗಿದೆ. ಇನ್ನೂ ಲ್ಯಾಬ್ ರಿಪೋರ್ಟ್ ಬಂದಿಲ್ಲ.
15 ಜನ ಹೋಮ್ ಕ್ವಾರಂಟೈನ್ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.