ETV Bharat / state

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಂದಲೇ ಕೊರೊನಾ ನಿಯಂತ್ರಣದಲ್ಲಿದೆ: ಶಾಸಕ ಮುನವಳ್ಳಿ

ಇಂದು ಗಂಗಾವತಿಯಲ್ಲಿ ಕೊರೊನಾ ವಾರಿಯರ್ಸ್​ಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು. ಈ ವೇಳೆ ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.

author img

By

Published : Jun 28, 2020, 7:33 PM IST

Gangavati
Gangavati

ಗಂಗಾವತಿ: ತಮ್ಮ ಜೀವ ಪಣಕ್ಕಿಟ್ಟು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಕೊರೊನಾ ಸಂದರ್ಭದಲ್ಲಿ ಹೋರಾಡಿದ್ದರಿಂದಲೇ ಇಂದು ಈ ವ್ಯಾಧಿ ನಿಯಂತ್ರಣದಲ್ಲಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಶ್ಲಾಘಿಸಿದರು.

ನಗರದ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ತಾಲೂಕು ಸೌಹಾರ್ದ ಸಹಕಾರಿ ಒಕ್ಕೂಟ ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​ಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೊರೊನಾ ವಾರಿಯರ್ಸ್ ಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಕೊರೊನಾ ಮಾರಣಾಂತಿಕ ಎಂದು ಗೊತ್ತಿದ್ದರೂ ತಮ್ಮ ಜೀವದ ಹಂಗು ತೊರೆದು ಜನರ ಪ್ರಾಣ ಕಾಪಾಡಲು ಈ ವಾರಿಯರ್ಸ್ ಶ್ರಮಿಸಿದ್ದಾರೆ. ಇಂದಿಗೂ ಕೊರೊನಾ ಪಾಸಿಟಿವ್ ಬಂದಿರುವ ಪ್ರದೇಶಗಳಲ್ಲಿ ಇವರು ಓಡಾಡಿ ಮಾಹಿತಿ ಸಂಗ್ರಹಿಸಿ ಕಾಲಕಾಲಕ್ಕೆ ಸಂಬಂಧಿತ ಇಲಾಖೆಗೆ ರವಾನಿಸುತ್ತಿದ್ದಾರೆ. ಈ ಮೂಲಕ ಜನರು ಮತ್ತು ಇಲಾಖೆಯ ಮಧ್ಯೆ ಸಂಪರ್ಕ ಸೇತುವೆಯಾಗಿ ಸೇವೆ ಸಲ್ಲಿಸುವ ಮೂಲಕ ಅನುಪಮ ಸೇವೆ ಸಲ್ಲಿಸುತ್ತಿದ್ದಾರೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೊರೊನಾ ವಾರಿಯರ್ಸ್ ಪ್ರಾಮಾಣಿಕ ಸೇವೆಯಿಂದಲೇ ಇಂದು ಕೊರೊನಾ ರಾಜ್ಯದಲ್ಲಿ ನಿಯಂತ್ರಣದಲ್ಲಿದೆ. ಇಲ್ಲವಾದಲ್ಲಿ ಲಕ್ಷಾಂತರ ಜನರು ಮಹಾಮಾರಿಗೆ ತುತ್ತಾಗಬೇಕಿತ್ತು ಎಂದರು.

ಈ ವೇಳೆ ತಲಾ ಮೂರು ಸಾವಿರ ಮೊತ್ತದ ಪ್ರೋತ್ಸಾಹ ಧನವನ್ನು 85 ಕೊರೊನಾ ವಾರಿಯರ್ಸ್ ಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟ ಹಾಗೂ ಪ್ರಾಥಮಿಕ ಕೃಷಿ ಬ್ಯಾಂಕಿನ ಹಲವು ಮುಖಂಡರು ಉಪಸ್ಥಿತರಿದ್ದರು.

ಗಂಗಾವತಿ: ತಮ್ಮ ಜೀವ ಪಣಕ್ಕಿಟ್ಟು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಕೊರೊನಾ ಸಂದರ್ಭದಲ್ಲಿ ಹೋರಾಡಿದ್ದರಿಂದಲೇ ಇಂದು ಈ ವ್ಯಾಧಿ ನಿಯಂತ್ರಣದಲ್ಲಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಶ್ಲಾಘಿಸಿದರು.

ನಗರದ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ತಾಲೂಕು ಸೌಹಾರ್ದ ಸಹಕಾರಿ ಒಕ್ಕೂಟ ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​ಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೊರೊನಾ ವಾರಿಯರ್ಸ್ ಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಕೊರೊನಾ ಮಾರಣಾಂತಿಕ ಎಂದು ಗೊತ್ತಿದ್ದರೂ ತಮ್ಮ ಜೀವದ ಹಂಗು ತೊರೆದು ಜನರ ಪ್ರಾಣ ಕಾಪಾಡಲು ಈ ವಾರಿಯರ್ಸ್ ಶ್ರಮಿಸಿದ್ದಾರೆ. ಇಂದಿಗೂ ಕೊರೊನಾ ಪಾಸಿಟಿವ್ ಬಂದಿರುವ ಪ್ರದೇಶಗಳಲ್ಲಿ ಇವರು ಓಡಾಡಿ ಮಾಹಿತಿ ಸಂಗ್ರಹಿಸಿ ಕಾಲಕಾಲಕ್ಕೆ ಸಂಬಂಧಿತ ಇಲಾಖೆಗೆ ರವಾನಿಸುತ್ತಿದ್ದಾರೆ. ಈ ಮೂಲಕ ಜನರು ಮತ್ತು ಇಲಾಖೆಯ ಮಧ್ಯೆ ಸಂಪರ್ಕ ಸೇತುವೆಯಾಗಿ ಸೇವೆ ಸಲ್ಲಿಸುವ ಮೂಲಕ ಅನುಪಮ ಸೇವೆ ಸಲ್ಲಿಸುತ್ತಿದ್ದಾರೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೊರೊನಾ ವಾರಿಯರ್ಸ್ ಪ್ರಾಮಾಣಿಕ ಸೇವೆಯಿಂದಲೇ ಇಂದು ಕೊರೊನಾ ರಾಜ್ಯದಲ್ಲಿ ನಿಯಂತ್ರಣದಲ್ಲಿದೆ. ಇಲ್ಲವಾದಲ್ಲಿ ಲಕ್ಷಾಂತರ ಜನರು ಮಹಾಮಾರಿಗೆ ತುತ್ತಾಗಬೇಕಿತ್ತು ಎಂದರು.

ಈ ವೇಳೆ ತಲಾ ಮೂರು ಸಾವಿರ ಮೊತ್ತದ ಪ್ರೋತ್ಸಾಹ ಧನವನ್ನು 85 ಕೊರೊನಾ ವಾರಿಯರ್ಸ್ ಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟ ಹಾಗೂ ಪ್ರಾಥಮಿಕ ಕೃಷಿ ಬ್ಯಾಂಕಿನ ಹಲವು ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.