ETV Bharat / state

ಕೊಪ್ಪಳದಲ್ಲಿ ಭಾರಿ ಮಳೆಗೆ ಅಪಾರ ಬೆಳೆ ಹಾನಿ

author img

By

Published : Oct 14, 2022, 10:31 PM IST

ನಿರಂತರ ಸುರಿದ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ, ಮನೆ ಮತ್ತು ತೋಟಗಳಿಗೆ ನೀರು ನುಗ್ಗಿದ್ದು, ಕಟಾವು ಹಂತಕ್ಕೆ ತಲುಪಿದ್ದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವ ಘಟನೆ ನಡೆದಿದೆ.

KN_KPL
ಮಳೆಗೆ ಹಾನಿಯಾದ ಬೆಳೆ

ಕೊಪ್ಪಳ: ಜಿಲ್ಲೆಯಾದ್ಯಂತ ವಾಡಿಕೆಗಿಂತ ಭಾರಿ ಮಳೆಯಾಗಿದ್ದು, ಕೃಷಿಕರ ಬೆಳೆದ ಬೆಳೆಗಳು ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗಿದೆ. ಇಂದು ಬೆಳಗಿನಜಾವ ಎಡಬಿಡದೆ ಸುರಿದ ಮಳೆಗೆ ಜಿಲ್ಲೆಯ ಬಹುತೇಕ ಕೃಷಿ ಭೂಮಿಗಳು ಜಲಾವೃತವಾಗಿವೆ. ಜೊತೆಗೆ ಹಲವು ಹಳ್ಳ, ಕೆರೆಗಳು ತುಂಬಿ ಗ್ರಾಮಗಳಿಗೆ ನೀರು ನುಗ್ಗಿದೆ.

ಕಟಾವು ಹಂತಕ್ಕೆ ಬಂದಿದ್ದ ಬೆಳೆಯೂ ಮಳೆಗೆ ನಾಶವಾಗಿದೆ. ಇದರಿಂದಾಗಿ ರೈತರು ಕಣ್ಣೀರು ಹಾಕುವಂತಾಗಿದೆ. ಕೊಪ್ಪಳ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಚೆಕ್ ಡ್ಯಾಂ ಭರ್ತಿಯಾಗಿದ್ದು, ಡ್ಯಾಂ ನೀರು ಹೊಲಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ. ಅಲ್ಲದೇ ಟಣಕನಕಲ್ಲಿ ಗ್ರಾಮದಿಂದ ಬರುವ ಹಳ್ಳವು ಸಹ ತುಂಬಿ ಹರಿಯುತ್ತಿದೆ. ಇದರಿಂದಾಗಿ ಹನುಮನಹಳ್ಳಿಯ ಸುಮಾರು 1 ಸಾವಿರ ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ, ಈರುಳ್ಳಿ, ಟೊಮೆಟೊ, ಮೆಣಸಿನಕಾಯಿ ಸಂಪೂರ್ಣ ನಾಶವಾಗಿದೆ.

ಕೊಪ್ಪಳದಲ್ಲಿ ಸುರಿದ ಮಳೆಗೆ ಬೆಳೆ ಹಾನಿ

ಪ್ರತಿ ಎಕರೆಗೆ ಸುಮಾರು 25 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆಯಲಾಗಿತ್ತು. ಆದರೆ, ಮಳೆಯಿಂದಾಗಿ ಬೆಳೆಗಳು ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಸರ್ಕಾರ ಸಣ್ಣ ಪುಟ್ಟ ಪರಿಹಾರ ನೀಡುವದಕ್ಕಿಂತ ರೈತರಿಗೆ ಆಗಿರುವಷ್ಟು ನಷ್ಟ ಭರಿಸಬೇಕು. ಜಿಲ್ಲಾಡಳಿತ ಹಾನಿಗೊಳಗಾದ ಸ್ಥಳಕ್ಕೆ ಬೇಟಿ ನೀಡಿ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ನಿರಂತರ ಮಳೆ: ಮನೆ, ತೋಟಕ್ಕೆ ನುಗ್ಗಿದ ಹಳ್ಳದ ನೀರು, ಜನಜೀವನ ಅಸ್ತವ್ಯಸ್ತ

ಕೊಪ್ಪಳ: ಜಿಲ್ಲೆಯಾದ್ಯಂತ ವಾಡಿಕೆಗಿಂತ ಭಾರಿ ಮಳೆಯಾಗಿದ್ದು, ಕೃಷಿಕರ ಬೆಳೆದ ಬೆಳೆಗಳು ಕೈಗೆ ಸಿಗದ ಸ್ಥಿತಿ ನಿರ್ಮಾಣವಾಗಿದೆ. ಇಂದು ಬೆಳಗಿನಜಾವ ಎಡಬಿಡದೆ ಸುರಿದ ಮಳೆಗೆ ಜಿಲ್ಲೆಯ ಬಹುತೇಕ ಕೃಷಿ ಭೂಮಿಗಳು ಜಲಾವೃತವಾಗಿವೆ. ಜೊತೆಗೆ ಹಲವು ಹಳ್ಳ, ಕೆರೆಗಳು ತುಂಬಿ ಗ್ರಾಮಗಳಿಗೆ ನೀರು ನುಗ್ಗಿದೆ.

ಕಟಾವು ಹಂತಕ್ಕೆ ಬಂದಿದ್ದ ಬೆಳೆಯೂ ಮಳೆಗೆ ನಾಶವಾಗಿದೆ. ಇದರಿಂದಾಗಿ ರೈತರು ಕಣ್ಣೀರು ಹಾಕುವಂತಾಗಿದೆ. ಕೊಪ್ಪಳ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಚೆಕ್ ಡ್ಯಾಂ ಭರ್ತಿಯಾಗಿದ್ದು, ಡ್ಯಾಂ ನೀರು ಹೊಲಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ. ಅಲ್ಲದೇ ಟಣಕನಕಲ್ಲಿ ಗ್ರಾಮದಿಂದ ಬರುವ ಹಳ್ಳವು ಸಹ ತುಂಬಿ ಹರಿಯುತ್ತಿದೆ. ಇದರಿಂದಾಗಿ ಹನುಮನಹಳ್ಳಿಯ ಸುಮಾರು 1 ಸಾವಿರ ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ, ಈರುಳ್ಳಿ, ಟೊಮೆಟೊ, ಮೆಣಸಿನಕಾಯಿ ಸಂಪೂರ್ಣ ನಾಶವಾಗಿದೆ.

ಕೊಪ್ಪಳದಲ್ಲಿ ಸುರಿದ ಮಳೆಗೆ ಬೆಳೆ ಹಾನಿ

ಪ್ರತಿ ಎಕರೆಗೆ ಸುಮಾರು 25 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆಯಲಾಗಿತ್ತು. ಆದರೆ, ಮಳೆಯಿಂದಾಗಿ ಬೆಳೆಗಳು ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಸರ್ಕಾರ ಸಣ್ಣ ಪುಟ್ಟ ಪರಿಹಾರ ನೀಡುವದಕ್ಕಿಂತ ರೈತರಿಗೆ ಆಗಿರುವಷ್ಟು ನಷ್ಟ ಭರಿಸಬೇಕು. ಜಿಲ್ಲಾಡಳಿತ ಹಾನಿಗೊಳಗಾದ ಸ್ಥಳಕ್ಕೆ ಬೇಟಿ ನೀಡಿ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ನಿರಂತರ ಮಳೆ: ಮನೆ, ತೋಟಕ್ಕೆ ನುಗ್ಗಿದ ಹಳ್ಳದ ನೀರು, ಜನಜೀವನ ಅಸ್ತವ್ಯಸ್ತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.