ಕೊಪ್ಪಳ: ಜಿಲ್ಲೆಯ ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆಯ ಅಂಜನಾದ್ರಿ ಪರ್ವತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಮಾಡುವುದಾಗಿ ಸಿಎಂ ಹೇಳಿದ್ದು, ಈ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಹನುಮಂತನ ಜನ್ಮ ಸ್ಥಳದ ಬಗ್ಗೆ ಆಂಧ್ರದ ಟಿಟಿಡಿ ವಾದದ ಕುರಿತು ನಾನು ಏನೂ ಹೇಳುವುದಿಲ್ಲ. ಇದು ಪೌರಾಣಿಕ ಹಿನ್ನೆಲೆ ಇರುವುದರಿಂದ ನಾವು ಹೇಳುವುದು ಸಮಂಜಸವಲ್ಲ ಎಂದರು.
ಅಂಜನಾದ್ರಿ ಪರ್ವತವು ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುತ್ತದೆ. ಈ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಲು ಸಾಕಷ್ಟು ನಿಯಮ ಪಾಲನೆ ಮಾಡಬೇಕು. ಈ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಬದಲಾವಣೆ ಮಾಡಬೇಕಿದ್ದು, ಈ ಕೆಲಸ ನಡೆದಿದೆ. ಭೂ ಸ್ವಾಧೀನ ಪ್ರಕ್ರಿಯೆ ನಡೆದಿದೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಬಗ್ಗೆಯೂ ಇಂದು ಚರ್ಚೆ ನಡೆದಿದೆ. ಹಂಪಿ ಅಭಿವೃದ್ಧಿ ಪ್ರಾಧಿಕಾರದ ಮಾರ್ಗಸೂಚಿ ನಡುವೆಯೇ ಕೆಲಸ ನಡೆದಿದೆ ಎಂದು ಹೇಳಿದರು.
ಓದಿ: ಮಧ್ಯರಾತ್ರಿ ಹೋಟೆಲ್ಗೆ ನುಗ್ಗಿ ಎರಡೂವರೆ ನಿಮಿಷದಲ್ಲಿ 70 ಸಾವಿರ ಕದ್ದ ಖದೀಮರು