ETV Bharat / state

ಎಡದಂಡೆ ಕಾಲುವೆಗೆ 4,100 ಕ್ಯುಸೆಕ್ ನೀರು ಹರಿಸಲು ನಿರ್ಧಾರ: ಸಚಿವ ಶಿವರಾಜ ತಂಗಡಗಿ

author img

By

Published : Aug 16, 2023, 9:54 PM IST

ತುಂಗಭದ್ರಾ ಜಲಾಶಯದಲ್ಲಿ ಸದ್ಯ 88 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇದರಲ್ಲಿ 65 ಟಿಎಂಸಿ ಅಡಿ ನೀರು ನಮ್ಮ ರಾಜ್ಯದ ಪಾಲಿಗೆ ಲಭಿಸಲಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಸಚಿವ ಶಿವರಾಜ ತಂಗಡಗಿ
ಸಚಿವ ಶಿವರಾಜ ತಂಗಡಗಿ
ಸಚಿವ ಶಿವರಾಜ ತಂಗಡಗಿ ಹೇಳಿಕೆ

ಕೊಪ್ಪಳ : ತುಂಗಭದ್ರಾ ಜಲಾಶಯದಲ್ಲಿ ಸದ್ಯ 88 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಎಡದಂಡೆ ಮುಖ್ಯ ಕಾಲುವೆಗೆ ನವೆಂಬರ್ 30ರ ತನಕ 4,100 ಕ್ಯುಸೆಕ್ ನೀರು ಹರಿಸಲು ತುಂಗಭದ್ರಾ ಯೋಜನೆಯ 119ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಕೊಪ್ಪಳದ ಮುನಿರಾಬಾದ್ ಕಾಡಾ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಬುಧವಾರ ಸಭೆ ಜರುಗಿತು.

ನಂತರ ಮಾತನಾಡಿದ ಸಚಿವರು, ತುಂಗಭದ್ರಾ ಜಲಾಶಯದಲ್ಲಿ ಸದ್ಯ 88 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇದರಲ್ಲಿ 65 ಟಿಎಂಸಿ ಅಡಿ ನೀರು ನಮ್ಮ ರಾಜ್ಯದ ಪಾಲಿಗೆ ಲಭಿಸಲಿದೆ. ಈಗಾಗಲೇ 10 ಟಿಎಂಸಿ ನೀರು ಬಳಕೆ ಮಾಡಿದ್ದು, ಆಂಧ್ರಕ್ಕೆ 3 ಟಿಎಂಸಿ ಅಡಿ ನೀರು ಹರಿಸಲಾಗಿದೆ. ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನವೆಂಬರ್ 30 ವರೆಗೆ 1300 ಕ್ಯುಸೆಕ್, ಬಲದಂಡೆ ಕೆಳಮಟ್ಟದ ಕಾಲುವೆಗೆ ನವೆಂಬರ್ 30ರವರೆಗೆ 850 ಕ್ಯುಸೆಕ್, ರಾಯಬಸವ ಕಾಲುವೆಗೆ ನವೆಂಬರ್ 30ರವರೆಗೆ 270 ಕ್ಯುಸೆಕ್ ಮತ್ತು ಎಡದಂಡೆ ಮೇಲ್ಮಟ್ಟದ ಕಾಲುವೆಗೆ ನವೆಂಬರ್ 30ವರೆಗೆ 25 ಕ್ಯುಸೆಕ್ ನೀರು ಹರಿಸಲಾಗುವುದು. ಮುಂದೆ ನೀರಿನ ಲಭ್ಯತೆ ಆಧರಿಸಿ ನೀರು ಹರಿಸುವುದಾಗಿ ಸಚಿವ ತಂಗಡಗಿ ಮಾಹಿತಿ ನೀಡಿದರು.

ಆಗಸ್ಟ್‌ 19ರಂದು ಬೆಂಗಳೂರಿನಲ್ಲಿ ಮತ್ತೊಂದು ಸಭೆ : ಕಾರ್ಖಾನೆಗಳಿಗೆ ನೀರು ಹಂಚಿಕೆ ಹಾಗೂ ಗುತ್ತಿಗೆ ನೌಕರರ ಬಾಕಿ ವೇತನ ಪಾವತಿ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಆಗಸ್ಟ್‌ 19ರಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಸಿ, ನೀರು ಕಳ್ಳತನ ಸೇರಿ ಇತರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಭದ್ರಾ ಜಲಾಶಯದಿಂದ ನೀರು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಮಳೆಗಾಲದ ಹಂಗಾಮಿನ ಬೆಳೆ ಬೆಳೆಯಲು ಭದ್ರಾ ಬಲದಂಡೆ ಕಾಲುವೆಗೆ ಈಗಾಗಲೇ ಆಗಸ್ಟ್​ 10 ರಿಂದ ನೀರು ಹರಿಸಲಾಗುತ್ತಿದೆ. ಭದ್ರಾ ನೀರಿನ ಮಟ್ಟ ಇಂದು 166.9 ಅಡಿ ಇದ್ದು, 170 ಅಡಿಗೆ ನೀರು ತಲುಪಿದರೆ ಕಾಲುವೆಗಳಿಗೆ ಸಂಪೂರ್ಣವಾಗಿ ನೀರು ಹರಿಸಲು ಸಮಸ್ಯೆ ಆಗುವುದಿಲ್ಲ ಎಂದು ಚೆನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಜಲಾಶಯದಲ್ಲಿ ನೀರು ಇರುವುದರಿಂದ ಬೆಳೆ ಬೆಳೆಯಲು ರೈತರಿಗೆ ಯಾವುದೇ ಸಮಸ್ಯೆ ಆಗದು. ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ಕೂಡ ಮಾಡಲಾಗಿದೆ. ಕಾಲುವೆಗೆ ಹರಿಯುತ್ತಿರುವ ನೀರು ನಿಲ್ಲಿಸುವ ಕುರಿತು ಸರ್ಕಾರದ ಯಾವುದೇ ಪ್ರಸ್ತಾಪ ಬಂದಿಲ್ಲ. ಹಾಗಾಗಿ ರೈತರು ಆತಂಕ ಪಡಬೇಕಾಗಿಲ್ಲ. ರೈತರಿಗೆ ತೊಂದರೆಯಾಗಲು ನಾನು ಬಿಡುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಭದ್ರಾ ಜಲಾಶಯದಿಂದ ನೀರು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಶಾಸಕ ಬಸವರಾಜು ವಿ. ಶಿವಗಂಗಾ

ಸಚಿವ ಶಿವರಾಜ ತಂಗಡಗಿ ಹೇಳಿಕೆ

ಕೊಪ್ಪಳ : ತುಂಗಭದ್ರಾ ಜಲಾಶಯದಲ್ಲಿ ಸದ್ಯ 88 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಎಡದಂಡೆ ಮುಖ್ಯ ಕಾಲುವೆಗೆ ನವೆಂಬರ್ 30ರ ತನಕ 4,100 ಕ್ಯುಸೆಕ್ ನೀರು ಹರಿಸಲು ತುಂಗಭದ್ರಾ ಯೋಜನೆಯ 119ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಕೊಪ್ಪಳದ ಮುನಿರಾಬಾದ್ ಕಾಡಾ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಬುಧವಾರ ಸಭೆ ಜರುಗಿತು.

ನಂತರ ಮಾತನಾಡಿದ ಸಚಿವರು, ತುಂಗಭದ್ರಾ ಜಲಾಶಯದಲ್ಲಿ ಸದ್ಯ 88 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಇದರಲ್ಲಿ 65 ಟಿಎಂಸಿ ಅಡಿ ನೀರು ನಮ್ಮ ರಾಜ್ಯದ ಪಾಲಿಗೆ ಲಭಿಸಲಿದೆ. ಈಗಾಗಲೇ 10 ಟಿಎಂಸಿ ನೀರು ಬಳಕೆ ಮಾಡಿದ್ದು, ಆಂಧ್ರಕ್ಕೆ 3 ಟಿಎಂಸಿ ಅಡಿ ನೀರು ಹರಿಸಲಾಗಿದೆ. ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನವೆಂಬರ್ 30 ವರೆಗೆ 1300 ಕ್ಯುಸೆಕ್, ಬಲದಂಡೆ ಕೆಳಮಟ್ಟದ ಕಾಲುವೆಗೆ ನವೆಂಬರ್ 30ರವರೆಗೆ 850 ಕ್ಯುಸೆಕ್, ರಾಯಬಸವ ಕಾಲುವೆಗೆ ನವೆಂಬರ್ 30ರವರೆಗೆ 270 ಕ್ಯುಸೆಕ್ ಮತ್ತು ಎಡದಂಡೆ ಮೇಲ್ಮಟ್ಟದ ಕಾಲುವೆಗೆ ನವೆಂಬರ್ 30ವರೆಗೆ 25 ಕ್ಯುಸೆಕ್ ನೀರು ಹರಿಸಲಾಗುವುದು. ಮುಂದೆ ನೀರಿನ ಲಭ್ಯತೆ ಆಧರಿಸಿ ನೀರು ಹರಿಸುವುದಾಗಿ ಸಚಿವ ತಂಗಡಗಿ ಮಾಹಿತಿ ನೀಡಿದರು.

ಆಗಸ್ಟ್‌ 19ರಂದು ಬೆಂಗಳೂರಿನಲ್ಲಿ ಮತ್ತೊಂದು ಸಭೆ : ಕಾರ್ಖಾನೆಗಳಿಗೆ ನೀರು ಹಂಚಿಕೆ ಹಾಗೂ ಗುತ್ತಿಗೆ ನೌಕರರ ಬಾಕಿ ವೇತನ ಪಾವತಿ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಆಗಸ್ಟ್‌ 19ರಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಕಲಬುರಗಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಸಿ, ನೀರು ಕಳ್ಳತನ ಸೇರಿ ಇತರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಭದ್ರಾ ಜಲಾಶಯದಿಂದ ನೀರು ನಿಲ್ಲಿಸುವ ಪ್ರಶ್ನೆಯೇ ಇಲ್ಲ : ಮಳೆಗಾಲದ ಹಂಗಾಮಿನ ಬೆಳೆ ಬೆಳೆಯಲು ಭದ್ರಾ ಬಲದಂಡೆ ಕಾಲುವೆಗೆ ಈಗಾಗಲೇ ಆಗಸ್ಟ್​ 10 ರಿಂದ ನೀರು ಹರಿಸಲಾಗುತ್ತಿದೆ. ಭದ್ರಾ ನೀರಿನ ಮಟ್ಟ ಇಂದು 166.9 ಅಡಿ ಇದ್ದು, 170 ಅಡಿಗೆ ನೀರು ತಲುಪಿದರೆ ಕಾಲುವೆಗಳಿಗೆ ಸಂಪೂರ್ಣವಾಗಿ ನೀರು ಹರಿಸಲು ಸಮಸ್ಯೆ ಆಗುವುದಿಲ್ಲ ಎಂದು ಚೆನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಜಲಾಶಯದಲ್ಲಿ ನೀರು ಇರುವುದರಿಂದ ಬೆಳೆ ಬೆಳೆಯಲು ರೈತರಿಗೆ ಯಾವುದೇ ಸಮಸ್ಯೆ ಆಗದು. ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ಕೂಡ ಮಾಡಲಾಗಿದೆ. ಕಾಲುವೆಗೆ ಹರಿಯುತ್ತಿರುವ ನೀರು ನಿಲ್ಲಿಸುವ ಕುರಿತು ಸರ್ಕಾರದ ಯಾವುದೇ ಪ್ರಸ್ತಾಪ ಬಂದಿಲ್ಲ. ಹಾಗಾಗಿ ರೈತರು ಆತಂಕ ಪಡಬೇಕಾಗಿಲ್ಲ. ರೈತರಿಗೆ ತೊಂದರೆಯಾಗಲು ನಾನು ಬಿಡುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಭದ್ರಾ ಜಲಾಶಯದಿಂದ ನೀರು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಶಾಸಕ ಬಸವರಾಜು ವಿ. ಶಿವಗಂಗಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.