ETV Bharat / state

ಸೋಂಕಿತನ ಪ್ರದೇಶ ಸೀಲ್​ಡೌನ್​ ಮಾಡದ ಅಧಿಕಾರಿಗಳು: ಸ್ಥಳೀಯರ ಆಕ್ರೋಶ - ಸೋಂಕಿತನ ಪ್ರದೇಶವನ್ನು ಸೀಲ್​ಡೌನ್​ ಮಾಡದ ಅಧಿಕಾರಿಗಳು

ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಪ್ರದೇಶವನ್ನು ಸೀಲ್​ಡೌನ್​ ಮಾಡಲು ಅಧಿಕಾರಿಗಳು ಮೀನಮೇಷ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Delay to seal down in positive case area
ಸೋಂಕಿತನ ಪ್ರದೇಶ
author img

By

Published : Jun 11, 2020, 1:42 PM IST

ಗಂಗಾವತಿ: ಕೊರೊನಾ ಸೋಂಕು ಕಾಣಿಸಿಕೊಂಡ ವ್ಯಕ್ತಿಯ ಪ್ರದೇಶವನ್ನ ಸೀಲ್​ಡೌನ್​ ಮಾಡಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ.

ಇಲ್ಲಿನ ಕಿಲ್ಲಾ ಏರಿಯಾದಲ್ಲಿ ಸೋಂಕು ಕಾಣಿಸಿಕೊಂಡಿರುವ ವ್ಯಕ್ತಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ವಾಸಿಸುತ್ತಿರುವ ಪ್ರದೇಶವನ್ನು ಸೀಲ್​ಡೌನ್​ ಮಾಡಲು ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಬೆಳಗ್ಗೆ ನಾಲ್ಕು ಗಂಟೆಗೆ ವ್ಯಕ್ತಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದರು. ಅದರ, ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ನಗರಸಭೆಯ ಅಧಿಕಾರಿಗಳು, ಸೀಲ್​ಡೌನ್​ ಮಾಡುವ ಬಗ್ಗೆ ಚಿಂತನೆ ನಡೆಸಿದರು. ಆದರೆ, ಈವರೆಗೂ ಏನೂ ಕ್ರಮ ಕೈಗೊಂಡಿಲ್ಲ.

ಸೋಂಕಿತನ ಪ್ರದೇಶ

ಇದೀಗ ಈ ಪ್ರದೇಶದಲ್ಲಿ ಜನರ ಓಡಾಟ ಸಹಜವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಗಾಂಧಿನಗರದಲ್ಲಿ ಪ್ರಕರಣ ಪತ್ತೆಯಾಗುತ್ತಿದ್ದಂತೆ ತಕ್ಷಣ ಸೀಲ್​ಡೌನ್​ ಮಾಡಿದ್ದ ಅಧಿಕಾರಿಗಳು, ಈಗ ಕಿಲ್ಲಾ ಏರಿಯಾವನ್ನು ಏಕೆ ಮಾಡುತ್ತಿಲ್ಲ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಗಂಗಾವತಿ: ಕೊರೊನಾ ಸೋಂಕು ಕಾಣಿಸಿಕೊಂಡ ವ್ಯಕ್ತಿಯ ಪ್ರದೇಶವನ್ನ ಸೀಲ್​ಡೌನ್​ ಮಾಡಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ.

ಇಲ್ಲಿನ ಕಿಲ್ಲಾ ಏರಿಯಾದಲ್ಲಿ ಸೋಂಕು ಕಾಣಿಸಿಕೊಂಡಿರುವ ವ್ಯಕ್ತಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ವಾಸಿಸುತ್ತಿರುವ ಪ್ರದೇಶವನ್ನು ಸೀಲ್​ಡೌನ್​ ಮಾಡಲು ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಬೆಳಗ್ಗೆ ನಾಲ್ಕು ಗಂಟೆಗೆ ವ್ಯಕ್ತಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದರು. ಅದರ, ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ನಗರಸಭೆಯ ಅಧಿಕಾರಿಗಳು, ಸೀಲ್​ಡೌನ್​ ಮಾಡುವ ಬಗ್ಗೆ ಚಿಂತನೆ ನಡೆಸಿದರು. ಆದರೆ, ಈವರೆಗೂ ಏನೂ ಕ್ರಮ ಕೈಗೊಂಡಿಲ್ಲ.

ಸೋಂಕಿತನ ಪ್ರದೇಶ

ಇದೀಗ ಈ ಪ್ರದೇಶದಲ್ಲಿ ಜನರ ಓಡಾಟ ಸಹಜವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಗಾಂಧಿನಗರದಲ್ಲಿ ಪ್ರಕರಣ ಪತ್ತೆಯಾಗುತ್ತಿದ್ದಂತೆ ತಕ್ಷಣ ಸೀಲ್​ಡೌನ್​ ಮಾಡಿದ್ದ ಅಧಿಕಾರಿಗಳು, ಈಗ ಕಿಲ್ಲಾ ಏರಿಯಾವನ್ನು ಏಕೆ ಮಾಡುತ್ತಿಲ್ಲ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.